CrimeNEWSನಮ್ಮಜಿಲ್ಲೆ

ಡೈರಿ ಚುನಾವಣೆಗೆ ಹೋಗುತ್ತಿದ್ದ ಅಧಿಕಾರಿಗಳ ಕಾರು ಅಡ್ಡಗಟ್ಟಿ ಬ್ಯಾಲೆಟ್ ಪೇಪರ್, ಲ್ಯಾಪ್‌ಟಾಪ್, ಮೊಬೈಲ್ ದೋಚಿ ಪರಾರಿ

ವಿಜಯಪಥ ಸಮಗ್ರ ಸುದ್ದಿ

ರಾಮನಗರ: ಹಾಲು ಉತ್ಪಾದಕ ಸಹಕಾರ ಸಂಘ ಚುನಾವಣೆಗೆ ಹೋಗುತ್ತಿದ್ದ ಚುನಾವಣಾಧಿಕಾರಿಯನ್ನೇ ಅಡ್ಡಗಟ್ಟಿ ಬ್ಯಾಲೆಟ್ ಪೇಪರ್, ಲ್ಯಾಪ್‌ಟಾಪ್, ಮೊಬೈಲ್ ಕಳವು ಮಾಡಿರುವ ಘಟನೆ ಮಾಗಡಿ ತಾಲೂಕಿನ ಹೊಸಪಾಳ್ಯ ಬಳಿ ನಡೆದಿದೆ.

ಹಾಲು ಉತ್ಪಾದಕ ಸಂಘದ ನಿರ್ದೇಶಕ ಸ್ಥಾನಕ್ಕೆ ಬುಧವಾರವಾದ ಇಂದು ಚುನಾವಣೆ ನಿಗದಿಯಾಗಿತ್ತು. ಈ ಹಿನ್ನೆಲೆಯಲ್ಲಿ ಚುನಾವಣೆ ಅಧಿಕಾರಿಗಳಾದ ಉಮೇಶ್, ಉಷಾ ಎಂಬುವರು ಹುಳ್ಳೇನಹಳ್ಳಿ ಹಾಲು ಉತ್ಪಾದಕ ಸಹಕಾರ ಸಂಘ ಚುನಾವಣೆ ಹೋಗುತ್ತಿದ್ದರು. ಈ ವೇಳೆ ದುಷ್ಕರ್ಮಿಗಳು ಅವರಿಗೆ ಮಾರಕಾಸ್ತ್ರ ತೋರಿಸಿ ಕಿತ್ತುಕೊಂಡು ಪಾರಾರಿಯಾಗಿದ್ದಾರೆ.

ಬ್ಯಾಲೆಟ್ ಪೇಪರ್ ಹಾಗೂ ಲ್ಯಾಪ್ ಟಾಪ್ ಕಸಿದು ಕೊಂಡು ಪರಾರಿ ಆಗಲು ಮುಂದಾದಾಗ ತಡೆಯಲು ಬಂದ ಚುನಾವಣಾಧಿಕಾರಿ ಉಷಾ ಅವರಿಗೆ ಕಾರಿನಿಂದ ಗುದ್ದಿ ಪರಾರಿ ಆಗಿದ್ದು ಈ ದೃಶ್ಯವನ್ನು ವ್ಯಕ್ತಿಯೊಬ್ಬರು ಮೊಬೈಲ್‌ನಲ್ಲಿ‌ ಸೆರೆ ಹಿಡಿದಿದ್ದಾರೆ.

ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಬಲರಾಮ್ ಹಾಗೂ ಸಹಚರರು ಈ ಕೃತ್ಯವೆಸಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ದರೋಡೆ ಪ್ರಕರಣಕ್ಕೆ ಜೆಡಿಎಸ್ ಮಾಜಿ ಶಾಸಕ ಎ.ಮಂಜು ಕುಮ್ಮಕ್ಕು ನೀಡಿದ್ದಾರೆ ಎಂದು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಶ್ರೀನಿವಾಸ ಮೂರ್ತಿ ಆರೋಪಿಸಿದ್ದಾರೆ.

ಚುನಾವಣೆ ಅಧಿಕಾರಿಗಳೂ ಊರಿಗೆ ಹೋಗ್ತಿದ್ದಾಗ ದುಷ್ಕರ್ಮಿಗಳು ರಸ್ತೆ ಮಧ್ಯೆಯೇ ಅಡ್ಡಗಟ್ಟಿ ಬ್ಯಾಲೆಟ್ ಪ್ಯಾಪರ್, ಲ್ಯಾಪ್‌ಟಾಪ್ ಕಳವು ಮಾಾಡಿದ್ದಾರೆ. ಇಡೀ ಘಟನೆ ಆತಂಕಕ್ಕೆ ಕಾರಣವಾಗಿದ್ದು, ಸ್ಥಳಕ್ಕೆ ಡಿವೈಎಸ್ಪಿ ಪ್ರವೀಣ್ ಕುಮಾರ್ ಭೇಟಿ ನೀಡಿ,‌ ಪರಿಶೀಲನೆ ನಡೆಸಿದ್ದಾರೆ. ಮಾಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನು ಡೈರಿ ಚುನಾವಣೆಗೆ ಕುದೂರು ಪೊಲೀಸರು‌ ಬಂದೋಬಸ್ತ್‌ಗೆ ನಿಯೋಜನೆಗೊಂಡಿದ್ದು ಮತ್ತೊಮ್ಮೆ ಬ್ಯಾಲೆಟ್ ಪ್ಯಾಪರ್ ಮುದ್ರಿಸಿ ಚುನಾವಣೆ ನಡೆಸಲು ಮುಂದಾಗಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು