NEWSವಿದೇಶ

ಡೆಡ್ಲಿ ಕೊರೊನಾಗೆ ಎಸ್ಸೆಸ್ಸೆಲ್ಸಿ ಸೇರಿ ಎಲ್ಲಾ ಪರೀಕ್ಷೆಗಳು ಮುಂದೂಡಿಕೆ

ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿಕೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ವಿಶ್ವವನ್ನೇ ಒಂದುರೀತಿ ಶೋಕದ ಕಡಲಲ್ಲಿ ತೇಲಿಸುತ್ತಿರುವ ಡೆಡ್ಲಿಕೊರೊನಾಗೆ ಭಾರತ ಮುಂಜಾಗ್ರತೆ ಕ್ರಮ ಕೈಗೊಂಡಿದ್ದು, ಈ ಹಿನ್ನೆಲೆಯಲ್ಲಿ ಇಂದು ಜನತಾ ಕರ್ಫ್ಯೂಗೆ ದೇಶವಾಸಿಗಳ ಸಂಪೂರ್ಣ ಬೆಂಬಲ ವ್ಯಕ್ತವಾಗುತ್ತಿದೆ.

ರಾಜ್ಯದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಾತನಾಡಿ,  ಯಾವುದೇ ಚುನಾವಣೆಗಳಿದ್ದರು ಅದನ್ನು ಮುಂದೂಡಲಾಗುವುದು, ಜತೆಗೆ ದೇಶಿಯ ಪ್ರಯಾಣಿಕರನ್ನೂ ಕೂಡ ತಪಾಸಣೆಗೆ ಒಳಪಡಿಸಲಾಗುವುದು ಎಂದು ತಿಳಿಸಿದ್ದಾರೆ.

ಕೊರೊನಾ ಇಡೀಪ್ರಪಂಚವನ್ನೇ ಆವರಿಸುವುದರಿಂದ ಭವಿಷ್ಯದ ಪ್ರಜೆಗಳಿಗೆ ಇರುವ  SSLC ಪರೀಕ್ಷೆ ಸೇರಿ ಎಲ್ಲಾ ಪರೀಕ್ಷೆಗಳನ್ನು ಅನಿರ್ದಿಷ್ಟ ಅವಧಿವರೆಗೆ  ಮುಂದೂಡಲಾಗುವುದು. ಕೊರೊನಾ ಪೀಡಿತರು ಸೇರಿ ಯಾವುದೇ ವ್ಯಕ್ತಿ ರಾಜ್ಯದ ಗಡಿಗಳನ್ನು ದಾಟದಂತೆ ಎಚ್ಚರಿಕೆ ವಹಿಸುವ ಸಲುವಾಗಿ ಕರ್ನಾಟಕ ಡಿಗಳನ್ನು ಸಂಪೂರ್ಣ ಬಂದ್ ಮಾಡಲಾಗುವುದು ಎಂದು  ಹೇಳಿದರು.

ಜನತಾ ಕರ್ಫ್ಯೂಗೆ ರಾಜ್ಯದ ರಾಜಧಾನಿ ಬೆಂಗಳೂರು, ಸಾಂಸ್ಕೃತಿಕ ನಗರಿ ಮೈಸೂರು, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ಕೋಟೆನಾಡು ಚಿತ್ರದುರ್ಗ ಎಲ್ಲಾ ಜಿಲ್ಲೆಗಳು ಸ್ತಬ್ಧವಾಗಿವೆ. ತರಕಾರಿ ಮಾರುಕಟ್ಟೆ, ಅಂಗಡಿ, ಹೊಟೇಲ್ ಗಳು ಬಂದ್ ಆಗಿವೆ.

ಸಣ್ಣ ಹಳ್ಳಿಗಳಲ್ಲೂ ಅಂಗಡಿ ಹೋಟೆಲ್‌ಗಳನ್ನು ಬಂದ್‌ ಮಾಡಲಾಗಿದೆ. KSRTC, BMTC ಬಸ್‌ಗಳು ರಸ್ತೆಗಿಳಿಯದ ಕಾರಣ ಮೆಜೆಸ್ಟಿಕ್ ಸಂಪೂರ್ಣ ಬಂದ್ ಆಗಿದೆ. ಇದಕ್ಕೆ ಬೆಂಬಲವಾಗಿ ಆಟೋ, ಟ್ಯಾಕ್ಸಿ ಇತರ ವಾಹನಗಳೂ ರಸ್ತೆಗಿಳಿದ್ದಿಲ್ಲ.

ಹುಬ್ಬಳ್ಳಿ ಕಿಮ್ಸ್‌ ಆಸ್ಪತ್ರೆಗೆ ದಾಖಲಾದ ವ್ಯಕ್ತಿಯಲ್ಲಿ ಕೊರೊನಾ ವೈರಸ್‌ ಇರುವುದು ದೃಢಪಟ್ಟಿದೆ. ಈ ಮೂಲಕ ರಾಜ್ಯದ ಕೊರೊನಾ ಪೀಡಿತರ ಸಂಖ್ಯೆ 21ಕ್ಕೆ ಏರಿದೆ.

Leave a Reply

error: Content is protected !!
LATEST
KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ ದೀಪಾವಳಿ ಹಬ್ಬ ಹಿನ್ನೆಲೆ KKRTC ನೌಕರರಿಗೆ ಅ.29ರಂದೇ ವೇತನ ಕೊಡಲು ಎಂಡಿ ರಾಚಪ್ಪ ನಿರ್ದೇಶನ ನಿರಂತರ ಮಳೆ- BBMP ಎಲ್ಲ ಅಧಿಕಾರಿಗಳು ಸನ್ನದ್ಧರಾಗಿ: ತುಷಾರ್ ಗಿರಿನಾಥ್