CrimeNEWSನಮ್ಮಜಿಲ್ಲೆ

ತಿಗಳರಪಾಳ್ಯದಲ್ಲಿ ನಡೆದಿದ್ದ ಸಾಮೂಹಿಕ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ !?

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ತಿಗಳರಪಾಳ್ಯದಲ್ಲಿ ನಡೆದಿದ್ದ ಒಂದೇ ಕುಟುಂಬದ ಐವರ ಸಾಮೂಹಿಕ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಗುವ ಸಾಧ್ಯತೆ ಇದ್ದು, ಇಂದು ಮನೆಯಲ್ಲಿ ಮಹಜರು ಮತ್ತು ಪಂಚನಾಮೆ ಮಾಡಲಿದ್ದು, ಸಾವಿನ ಸಂಬಂಧ ಸ್ಫೋಟಕ ಮಾಹಿತಿ ಹೊರಬಿಳ ಬಹುದು ಎಂದು ಹೇಳಲಾಗುತ್ತಿದೆ.

ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣಾಗಿದ್ದರು, ಅಲ್ಲದೆ ಒಂಬತ್ತು ತಿಂಗಳ ಮಗು ಸಹ ಮೃತಪಟ್ಟಿತ್ತು. ಒಟ್ಟು ಐವರು ಅಸುನೀಗಿದ್ದು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಶನಿವಾರ ಎಲ್ಲ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆ ನಡೆಸಿ, ಕುಟುಂಬಸ್ಥರಿಗೆ ಹಸ್ತಾಂತರ ಮಾಡಿದ್ದರು.

ಮನೆಯಲ್ಲಿ ಸಾಕಷ್ಟು ಚಿನ್ನಾಭರಣ, ನಗದು, ಆಸ್ತಿ ಪತ್ರಗಳು ಇವೆ. ಆತ್ಮಹತ್ಯೆಗೂ ಮುನ್ನ ಮಗ ಮಧುಸಾಗರ ಡೆತ್ ನೋಟ್ ಬರೆದಿಟ್ಟಿರುತ್ತಾನೆ. ಹೀಗಾಗಿ ಹಿರಿಯ ಅಧಿಕಾರಿಗಳು ನನ್ನ ಸಮ್ಮುಖದಲ್ಲೇ ಮಹಜರು ಮಾಡಬೇಕು ಎಂದು ಮನೆ ಮಾಲೀಕ ಶಂಕರ್ ಮನವಿ ಮಾಡಿಕೊಂಡಿದ್ದಾರೆ.

ಮನೆಯಲ್ಲಿ ಎಲ್ಲರೂ ಆತ್ಮಹತ್ಯೆಗೆ ಶರಣಾಗಿದ್ದರ ಬಗ್ಗೆ ಪೊಲೀಸರಿಗೆ ಹಲವು ಅನುಮಾಗಳು ಮೂಡಿದ್ದು, ಅದೊಂದು ಆಸ್ತಿ ವಿಚಾರಕ್ಕೆ ಪದೇಪದೇ ಜಗಳವಾಗುತ್ತಿತ್ತು. ಇದೇ ವಿಚಾರಕ್ಕೆ ಕುಟುಂಬ ಸಮೇತ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

ಇನ್ನು ಮೃತ ಸಿಂಧುರಾಣಿಯ 9 ತಿಂಗಳ ಮಗು ಕೂಡ ಸಾವನ್ನಪ್ಪಿದ್ದು, ಮಗು ಮುಖದ ಮೇಲಿನ ಮೂಳೆಗಳು ಮುರಿದಿವೆ ಅನ್ನೋ ಮಾಹಿತಿ ಸಿಕ್ಕಿದೆ. ಹೀಗಾಗಿ ತಾಯಿಯೇ ಉಸಿರುಗಟ್ಟಿಸಿ ಕೊಲೆ ಮಾಡಿ, ನಂತರ ಆತ್ಮಹತ್ಯೆಗೆ ಶರಣಾಗಿರಬಹುದು ಎನ್ನಲಾಗಿದೆ.

ಈ ಎಲ್ಲದರ ನಡುವೆ ಮಗ ಮಧುಸಾಗರ ಬರೆದಿರುವ ಡೆತ್ ನೋಟ್ ಮತ್ತು ಎಲ್ಲರ ಬ್ಯಾಂಕ್ ಡಿಟೇಲ್ಸ್, ಮೊಬೈಲ್ ಗಳ ಡಿಟೇಲ್ಸ್ ಸಿಡಿಆರ್ ಕಲೆಹಾಕಲಾಗುತ್ತಿದೆ. ಇಂದು ನಡೆಯುವ ಮಹಜರು ನಂತರ ಮತ್ತಷ್ಟು ಮಾಹಿತಿಗಳು ಸಿಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು