CrimeNEWSಬೆಂಗಳೂರು

ತನ್ನಿಬ್ಬರು ಮಕ್ಕಳ ತಲೆದಿಂಬಿನಿಂದ ಉಸಿರುಗಟ್ಟಿಸಿ ಕೊಲೆ ಮಾಡಿದ ತಾಯಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ತಾಯಿಯೊಬ್ಬಳು ಮಕ್ಕಳೊಂದಿಗೆ ಯುಗಾದಿ ಹಬ್ಬವನ್ನು ಮಾಡಿ ಖುಷಿಪುಡುವುದರ ಬದಲು, ತನ್ನಿಬ್ಬರು ಮುದ್ದಾದ ಮಕ್ಕಳನ್ನು ತಲೆದಿಂಬಿನಿಂದ ಉಸಿರುಗಟ್ಟಿಸಿಕೊಲೆ ಮಾಡಿರುವ ಘಟನೆ ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ.

9 ವರ್ಷದ ಮಗಳು ಲಕ್ಷ್ಮೀ, 7 ವರ್ಷದ ಮಗ ಗೌತಮ್​​ನನ್ನು ಮಂಗಳವಾರ ರಾತ್ರಿ ಬರ್ಬರವಾಗಿ ಕೊಲೆ ಮಾಡಿದ್ದಾಳೆ. ಪ್ರಾಥಮಿಕ ಮಾಹಿತಿ ಪ್ರಕಾರ, ತಲೆ ದಿಂಬಿನಿಂದ ಉಸಿರುಗಟ್ಟಿಸಿ ಮಕ್ಕಳನ್ನು ಕೊಂದಿದ್ದಾಳೆ. ಸದ್ಯ ಕೊಲೆ ಆರೋಪಿ ತಾಯಿ ಗಂಗಾದೇವಿಯನ್ನು ಜಾಲಹಳ್ಳಿ ಪೊಲೀಸರು ಬಂಧಿಸಿದ್ದಾರೆ.

ಮಕ್ಕಳನ್ನು ಹತ್ಯೆ ಮಾಡಿದ ತಾಯಿ ಬಳಿಕ ಪೊಲೀಸ್‌ ಕಂಟ್ರೋಲ್ ರೂಂಗೆ ಕರೆ ಮಾಡಿ ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ್ದು, ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಹೇಳಿದ್ದಾಳೆ. ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಜಾಲಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೇ ಗಂಗಾದೇವಿಯನ್ನು ವಶಕ್ಕೆ ಪಡೆದಿದ್ದಾರೆ.

ಪತಿಯನ್ನು ಜೈಲಿಗೆ ಕಳುಹಿಸಿದ್ದಳು: ಗಂಗಾದೇವಿ ಕಳೆದ ಮಾರ್ಚ್‌ನಲ್ಲಿ ಗಂಡನ ಮೇಲೆ ಲೈಂಗಿಕ ದೌರ್ಜನ್ಯ ಕೇಸ್ ದಾಖಲಿಸಿದ್ದಳು. ಗಂಡ ನನ್ನ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸೆಗುತ್ತಿದ್ದಾನೆಂದು ದೂರು ನೀಡಿದ್ದಳು. ಗಂಗಾದೇವಿ ಕೊಟ್ಟ ದೂರಿನ ಆಧಾರದ ಮೇಲೆ ಗಂಡನನ್ನು ಬಂಧಿಸಿ ಜಾಲಹಳ್ಳಿ ಪೊಲೀಸರು ಜೈಲಿಗೆ ಕಳಿಸಿದ್ದರು. ಅದಾದ ಬಳಿಕ ಈಗ ಇಬ್ಬರು ಮಕ್ಕಳನ್ನು ಕೊಲೆ ಮಾಡಿದ್ದಾಳೆ.

ಕೆಲಸ ಇಲ್ಲದೇ ಮಕ್ಕಳಿಬ್ಬರನ್ನು ಸಾಕುವುದಕ್ಕೆ ಕಷ್ಟವಾಗುತ್ತಿತ್ತು. ಆ ಕಾರಣಕ್ಕಾಗಿ ಇಬ್ಬರು ಮಕ್ಕಳನ್ನು ರಾತ್ರಿ 9.30ರ ಸಮಯದಲ್ಲಿ ಕೊಲೆ ಮಾಡಿರುವುದಾಗಿ ಪೊಲೀಸರ ಮುಂದೆ ಹೇಳಿದ್ದಾಳೆ ಎಂದು ತಿಳಿದುಬಂದಿದೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಹಿಟ್‌ ಧಾರಾವಾಹಿಗಳ ನಿರ್ದೇಶಕ, ನಿರ್ಮಾಪಕ ರಾಮ್​ಜೀ