CrimeNEWSದೇಶ-ವಿದೇಶ

ತನ್ನ ಊರು ಸೇರುವ ಹಂಬಲದಲ್ಲಿ ಕಾಲ್ನಡಿಗೆ ಆರಂಭಿಸಿ ಜೀವ ಬಿಟ್ಟ ಬಾಲಕಿ

150 ಕಿಮೀ ನಡೆದು ಬಂದಿದ್ದ ಬಾಲಕಿ l ಇನ್ನು 14 ಕಿಮಿ ಕ್ರಮಿಸಿದ್ದರೆ ಮನೆ ತಲುಪುತ್ತಿದ್ದ ಜೀವ

ವಿಜಯಪಥ ಸಮಗ್ರ ಸುದ್ದಿ

ವಿಜಯಪುರ: ಕೊರೊನಾ ವೈರಸ್‌ ಹರಡುವುದನ್ನು ತಡೆಗಟ್ಟುವ ಸಲುವಾಗಿ ದೇಶಾದ್ಯಂತ ಲಾಕ್‌ಡೌನ್‌ ಘೋಷಣೆಯಾಗಿದ್ದು, ಇದರಿಂದ ಪರ ರಾಜ್ಯದಲ್ಲಿ ಸಿಲುಕಿದ್ದ ಹನ್ನೆರಡು ವರ್ಷದ ಬಾಲಕಿ ತನ್ನ ಊರಿಗೆ ಬರಲು ಬರೋಬ್ಬರಿ 150 ಕಿಮೀ ಪ್ರಯಾಣ ಮಾಡಿ ಮನೆ ತಲುಪುವ ವೇಳೆಗೆ ಅಸುನೀಗಿರುವ ಧಾರುಣ ಘಟನೆ ವಿಜಯಪುರದಲ್ಲಿ ನಡೆದಿದೆ.

ತೆಲಂಗಾಣದಿಂದ ವಿಜಯಪುರದಕ್ಕೆ ತಲುಪಲು ಕಾಲ್ನಡಿಗೆ ಪ್ರಾರಂಭಿಸಿದ್ದ 11 ಮಂದಿಯ ಪೈಕಿ ಇದ್ದ 12 ವರ್ಷದ ಬಾಲಕಿ ಜಾಮ್ಲೋ ಮಕ್‌ಡಾಮ್‌  ಎಂಬಾಕೆಯೇ ಮೃತಪಟ್ಟ ಬಾಲಕಿ.

ಈಕೆ ತನ್ನ ಕುಟುಂಬಕ್ಕೆ ನೆರವಾಗಲು ಮೆಳಸಿನಕಾಯಿ ಹೊಲದಲ್ಲಿ ಕೆಲಸ ಮಾಡುತ್ತಿದ್ದ ಈಕೆ ತನ್ನೂರಿಗೆ ನಡೆದುಕೊಂಡು 150 ಕಿಮೀ ಕ್ರಮಿಸಿದ್ದಾಳೆ, ಇನ್ನೇನು ಇನ್ನು 14 ಕಿಮೀ ನಡೆದಿದ್ದರೆ ಮನೆ ತಲುಪುತ್ತಿದ್ದಳು ಅಷ್ಟರಲ್ಲಿ ಆಕೆ ಕೊನೆಯುಸಿರೆಳೆದಿದ್ದಾಳೆ. ನಂತರ ಆಕೆಯ ಮೃತ ದೇಹವನ್ನು ಆಂಬುಲೆನ್ಸ್‌ನಲ್ಲಿ ತೆಗೆದುಕೊಂಡು ಹೋಗಲಾಗಿದೆ.

ಈ ವರದಿಯ ಬಗ್ಗೆ ವಿಜಯಪುರದ ಮುಖ್ಯ ಆರೋಗ್ಯಾಧಿಕಾರಿ ಮಾತನಾಡಿದ್ದು, ಬಾಲಕಿಯ ಮರಣೋತ್ತರ ಪರೀಕ್ಷೆ ವರದಿಯನ್ನು ಇನ್ನಷ್ಟೇ ನೋಡಬೇಕಿದೆ. ಆದರೆ ಮೇಲ್ನೋಟಕ್ಕೆ ಬಳಲಿಕೆ, ಎಲೆಕ್ಟ್ರೋಲೈಟ್ ಅಸಮತೋಲನ ಅಥವಾ ನಿರ್ಜಲೀಕರಣದಿಂದ ಸಾವನ್ನಪ್ಪಿರುವಂತೆ ತೋರುತ್ತದೆ ಎಂದು ಹೇಳಿದ್ದಾರೆ.

ತೆಲಂಗಾಣದ ಮೆಣಸಿನಕಾಯಿ ಬೆಳೆಯುವ ಕೃಷಿ ಭೂಮಿಯಲ್ಲಿ ಈ ಕಾರ್ಮಿಕರು ಕಾರ್ಯನಿರ್ವಹಿಸುತ್ತಿದ್ದರು. ಸಾರಿಗೆ ವ್ಯವಸ್ಥೆ ಇಲ್ಲದ ಕಾರಣ 11 ಜನ ಕಾರ್ಮಿಕರು ಏ.15ರಿಂದ 150 ಕಿಮೀ ಕಾಲ್ನಡಿಗೆಯಲ್ಲಿ ಸಂಚರಿಸಿದ್ದಾರೆ. ಮೃತ ಬಾಲಕಿಯ ಮಾದರಿಗಳನ್ನು ಪಡೆಯಲಾಗಿದ್ದು ಪರೀಕ್ಷೆಯಲ್ಲಿ ಕೊರೊನಾ ನೆಗೆಟೀವ್ ಬಂದಿದೆ.

ರಾಜ್ಯ ಸರ್ಕಾರವು ಬಾಲಕಿಯ ಕುಟುಂಬಕ್ಕೆ ಒಂದು ಲಕ್ಷ ರೂ. ನೆರವನ್ನು ಘೋಷಿಸಿದೆ. ಲಾಕ್‌ಡೌನ್‌ ಸಮಯದಲ್ಲಿ ಮನೆಯಿಂದ ದೂರ ಉಳಿದು ಉದ್ಯೋಗ ಮತ್ತು ಆಶ್ರಯವಿಲ್ಲದಿರುವ ಸಾವಿರಾರು ವಲಸೆ ಕಾರ್ಮಿಕರು ಹತಾಶೆಯಿಂದ ಕಾಲ್ನಡಿಗೆಯಲ್ಲಿ ತನ್ನ ಊರನ್ನು ಸೇರಿಕೊಳ್ಳಲು ಸುಧೀರ್ಘ ಪ್ರಯಾಣಕ್ಕೆ ಪ್ರಯತ್ನಿಸಿದ್ದಾರೆ.

ಕಳೆದ ತಿಂಗಳು ಮಧ್ಯಪ್ರದೇಶದ ಕಾರ್ಮಿಕನೋರ್ವ ನ್ಯೂಡೆಲ್ಲಿಯಿಂದ ಕಾಲ್ನಡಿಗೆಯಲ್ಲಿ ಮನೆ ತಲುಪಲು ಯತ್ನಿಸಿ ಸಾವನ್ನಪ್ಪಿದ್ದ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು