NEWSನಮ್ಮಜಿಲ್ಲೆ

ತಿ.ನರಸೀಪುರ: ಬೋನಿಗೆ ಬಿದ್ದ ಮತ್ತೆರಡು ಚಿರತೆಗಳು – ನಿಟ್ಟುಸಿರು ಬಿಟ್ಟ ಜನತೆ

ವಿಜಯಪಥ ಸಮಗ್ರ ಸುದ್ದಿ

ತಿ.ನರಸೀಪುರ: ತಾಲೂಕಿನ ಸೋಸಲೆ ಹೋಬಳಿಯ ಮುಸುವಿನಕೊಪ್ಪಲಿನಲ್ಲಿ ಇರಿಸಿದ್ದ ಬೋನಿನಲ್ಲಿ ಏಕಕಾಲಕ್ಕೆ ಎರಡು ಚಿರತೆಗಳು ಸೆರೆಯಾಗಿವೆ.

ಇದೇ ಫೆ. 6ರಂದು ಮೈಸೂರು ನಗರದ ಆರ್‌ಬಿಐ ಹಿಂಭಾಗದ ಶ್ಯಾದನಹಳ್ಳಿಯಲ್ಲಿ ಇರಿಸಿದ್ದ ಬೋನಿಗೆ ಸುಮಾರು ಎರಡು- ಮೂರು ವರ್ಷದ ಗಂಡು ಚಿರತೆ ಕೂಡ ಬಿದ್ದಿತ್ತು.

ಇಂದು ಮತ್ತೆ ಜಿಲ್ಲೆಯಲ್ಲಿ ಎರಡು ಚಿರತೆಗಳು ಸೆರೆಯಾಗಿದ್ದು ಜನತೆ ಸ್ವಲ್ಪ ನಿರಾಳರಾದಂತಾಗಿದೆ. ಆದರೆ ಇನ್ನು ಹತ್ತಾರು ಚಿರತೆಗಳು ತಾಲೂಕಿನಲ್ಲಿ ಇವೆ ಎಂದು ಹೇಳಲಾಗುತ್ತಿದ್ದು ಅವುಗಳನ್ನು ಸೆರೆ ಹಿಡಿಯ ಬೇಕು ಎಂದು ಒತ್ತಾಯಿಸಿದ್ದಾರೆ.

ಇನ್ನು ಬೋನಿನಲ್ಲಿ ಚಿರತೆಗಳು ಸೆರೆಯಾಗಿರುವ ವಿಷಯ ತಿಳಿದು ಸ್ಥಳಕ್ಕೆ ಅರಣ್ಯ ಇಲಾಖೆಯ ವಲಯ ಅಧಿಕಾರಿಗಳು ಮತ್ತು ಸಿಬ್ಬಂದಿಯವರು ಆಗಮಿಸಿ, ಸೆರೆ ಸಿಕ್ಕ ಚಿರತೆಗಳನ್ನು ಅರಣ್ಯ ಪ್ರದೇಶಕ್ಕೆ ಬಿಡಲಾಗುವುದು ಎಂದು ತಿಳಿಸಿದ್ದಾರೆ.

ಈ ಮೊದಲೇ ತಿಳಿಸಿರುವಂತೆ ಸುಮಾರು ಮೂರು-ನಾಲ್ಕು ತಿಂಗಳಿನಿಂದಲೂ ಜಿಲ್ಲೆಯ ವಿವಿಧೆಡೆ ಚಿರತೆಗಳ ಕಾಟ ಹೆಚ್ಚಾಗಿದ್ದು, ತಿ.ನರಸೀಪುರದ ನರಭಕ್ಷಕ ಚಿರತೆಯನ್ನು ಕಳೆದ ಜನವರಿ 26ರಂದು ಸೆರೆ ಹಿಡಿದಿದ್ದರು. ಆ ವೇಳೆ ಸೆರೆ ಸಿಕ್ಕ ಚಿರತೆಯನ್ನು ಸಾಯಿಸಿಬಿಡಿ ಎಂದು ಅಲ್ಲಿನ ಜನರು ಒತ್ತಾಯಿಸಿದ್ದರು.

ತಾಲೂಕಿನ ಹೊರಳಹಳ್ಳಿ ಗ್ರಾಮದ ಅಂಗಡಿಗೆ ಬಿಸ್ಕತ್‌ ತರಲು ಹೋಗಿದ್ದ 11 ವರ್ಷದ ಬಾಲಕ ಜಯಂತ್‌ನನ್ನು ಸ್ಥಳದಲ್ಲೇ ಕೊಂದು ಹಾಕಿದ್ದ, ನರಹಂತಕ ಚಿರತೆ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಅಂದು ಬೆಳಗ್ಗಿನ ಜಾವ ಬಿದ್ದಿತ್ತು. ಅದಾದ ಬಳಿಕ ಇಂದು ಮತ್ತೆರಡು ಚಿರತೆಗಳು ಸೆರೆಯಾಗಿದ್ದು ಜಿಲ್ಲೆಯ ಜನರು ಸ್ವಲ್ಪಮಟ್ಟಿಗೆ ನಿಟ್ಟುಸಿರು ಬಿಡುವಂತಾಗಿದೆ.

ಆದರೆ, ಚಿರತೆಯ ಮರಿಗಳು ಜಿಲ್ಲೆಯಲ್ಲಿ ಹೆಚ್ಚಾಗಿದ್ದು ಅವುಗಳನ್ನು ಸೆರೆ ಹಿಡಿಯಬೇಕು ಎಂದು ರೈತರು ಒತ್ತಾಯ ಮಾಡಿದ್ದಾರೆ. ತಿ.ನರಸೀಪುರ ಮೈಸೂರು ಜಿಲ್ಲೆಯಲ್ಲೇ ಕಳೆದ ಮೂರು ತಿಂಗಳಿನಿಂದ ಈಚೆಗೆ ಒಬ್ಬ ಯುವಕ,  ಯುವತಿ ಹಾಗೂ ಓರ್ವ ಬಾಲಕ ಚಿರತೆ ದಾಳಿಗೆ ಬಲಿಯಾಗಿದ್ದಾರೆ. ಇನ್ನು ಮೈಸೂರು ನಗರದಲ್ಲೂ ಚಿರತೆಗಳ ಹಾವಳಿ ಹೆಚ್ಚಾಗಿದ್ದು ಅವುಗಳನ್ನು ಸೆರೆ ಹಿಡಿಯುವಂತೆ ನಿವಾಸಿಗಳು ಆಗ್ರಹಿಸಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಬಜೆಟ್‌ನಲ್ಲಿ ನಿಮಗೆ ಸಿಹಿ ಸುದ್ದಿ ಇದೆ: KSRTC ಅಧಿಕಾರಿಗಳಿಗೆ ಸಾರಿಗೆ ಸಚಿವರ ಭರವಸೆ KSRTC ಬಸ್‌-ಬೈಕ್ ನಡುವೆ ಅಪಘಾತ: ಸ್ಥಳದಲ್ಲೇ ಇಬ್ಬರ ಸಾವು ನಾನು ಕಾದು ಕುಳಿತಿದ್ದರೂ ಬಸ್‌ ನಿಲ್ಲಿಸಿಲ್ಲ - ಚಾಲಕ, ಕಂಡಕ್ಟರ್‌ ತಿಂಗಳ ಸಂಬಳ ನನಗೆ ನಷ್ಟಪರಿಹಾರ ಕೊಡಿ: ವಕೀಲನ ಒತ್ತ... ಕೆಎಂಎಫ್ ಸಿಬ್ಬಂದಿಗೆ 7ನೇ ವೇತನ ಆಯೋಗ ಜಾರಿ- 2024ರ ಆ.1ರಿಂದಲೇ ಪೂರ್ವಾನ್ವಯ KSRTC ಏಕಸ್ವಾಮ್ಯಕ್ಕೆ ಮೂಗುದಾರ ಹಾಕಿ- ಸರ್ಕಾರದ ಕಾಯ್ದೆ ಸರಿ ಎಂದ ಕೋರ್ಟ್ ಸ್ಮಶಾನ ಜಾಗ ಭೂಗಳ್ಳನಿಗೆ ಬಿಟ್ಟುಕೊಡಲು ಟಿಪ್ಪಣಿ ಮಂಡಿಸಿರುವ ಭ್ರಷ್ಟ ಅಧಿಕಾರಿಗಳು: ಎನ್.ಆರ್.ರಮೇಶ್ ಆರೋಪ ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್...