NEWSನಮ್ಮಜಿಲ್ಲೆನಮ್ಮರಾಜ್ಯ

ತಿ.ನರಸೀಪುರ: ಭತ್ತದ ಬೆಂಬಲ ಬೆಲೆ ಜತೆಗೆ ಕ್ವಿಂಟಾಲ್‌ಗೆ 500 ರೂ. ಪ್ರೋತ್ಸಾಹ ಧನ ನೀಡಿ – ರೈತ ಮುಖಂಡರ ಆಗ್ರಹ

ವಿಜಯಪಥ ಸಮಗ್ರ ಸುದ್ದಿ

ತಿ.ನರಸೀಪುರ: ಭತ್ತದ ಬೆಂಬಲ ಬೆಲೆಗೆ ಹೆಚ್ಚುವರಿಯಾಗಿ ಕ್ವಿಂಟಾಲ್‌ಗೆ 500 ರೂ ಪ್ರೋತ್ಸಾಹ ಧನ ನೀಡಿ ತುರ್ತಾಗಿ ಖರೀದಿ ಕೇಂದ್ರ ತೆರೆಯಬೇಕು ಎಂದು ಒತ್ತಾಯಿಸಿ ತಹಸೀಲ್ದಾರ್ ಸುರೇಶ್‌ ಆಚಾರ್‌ ಅವರಿಗೆ ಮನವಿ ಸಲ್ಲಿಸಿದ್ದಾರೆ.

ಇಂದು ಪಟ್ಟಣದ ತಹಸೀಲ್ದಾರ್ ಕಚೇರಿ ಮುಂದೆ ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ಅತ್ತಹಳ್ಳಿ ದೇವರಾಜ್‌ ನೇತೃತ್ವದಲ್ಲಿ ಜಮಾಯಿಸಿದ ರೈತ ಮುಖಂಡರು ಹಾಗೂ ರೈತರು, ಈ ಸಂಬಂಧ ಮೈಸೂರು ಜಿಲ್ಲೆಯಲ್ಲಿ ಕೆ.ಆರ್.ನಗರ, ನಂಜನಗೂಡು, ತಿ.ನರಸೀಪುರದ ಹೆಚ್ಚು ಪ್ರದೇಶದಲ್ಲಿ ರೈತರು ಭತ್ತದ ಬೆಳೆದಿದ್ದಾರೆ.

ಹೀಗಾಗಿ ರಾಜ್ಯ ಸರ್ಕಾರ ಕನಿಷ್ಠ ಬೆಂಬಲ ಬೆಲೆ 2320 ರೂ.ಗಳು ನಿಗದಿ ಪಡಿಸಲಾಗಿದ್ದು ಇದು ರೈತರ ಉತ್ಪಾದನಾ ವೆಚ್ಚಕ್ಕಿಂತ ಕಡಿಮೆಯಾಗಿದೆ, ಆದ್ದರಿಂದ ರಾಜ್ಯ ಸರ್ಕಾರ ಪ್ರತಿ ಕ್ವಿಂಟಾಲ್‌ಗೆ 500 ರೂ. ಹೆಚ್ಚುವರಿಯಾಗಿ ಪ್ರೋತ್ಸಾಹ ಧನ ನೀಡುವ ಮೂಲಕ ರೈತರಿಗೆ ಆಗುವ ನಷ್ಟ ತಪ್ಪಿಸಬೇಕು ಎಂದು ಒತ್ತಾಯಿಸಿದ್ದಾರೆ.

ಈಗಾಗಲೇ ಕೇರಳ, ಒಡಿಸಾ, ತೆಲಂಗಾಣ ರಾಜ್ಯಗಳು ಇದೇ ರೀತಿ ಪ್ರೋತ್ಸಾಹ ಧನ ನೀಡುತ್ತಿವೆ, ಆದ್ದರಿಂದ ತಾವು ತಾಲೂಕಿನ ರೈತರ ರಕ್ಷಣೆಗಾಗಿ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.

ತಾಲೂಕಿನ ಕಬಿನಿ – ಕಾವೇರಿ ಅಚ್ಚು ಕಟ್ಟು ಭಾಗದಲ್ಲಿ ಭತ್ತದ ಬೆಳೆ ಕಟಾವು ಕೆಲವೇ ದಿನಗಳಲ್ಲಿ ಆರಂಭವಾಗುತ್ತಿದ್ದು ಭತ್ತದ ಬೆಲೆ ದಿನೇದಿನೇ ಕುಸಿಯುತ್ತಿದೆ, ಭತ್ತದ ಬೆಲೆ ಮತ್ತಷ್ಟು ಕುಸಿತವಾದರೆ ರೈತರು ತೀವ್ರ ನಷ್ಟ ಅನುಭವಿಸಬೇಕಾಗುತ್ತದೆ, ಆದ್ದರಿಂದ ತಾವು ಮುಂಜಾಗ್ರತಾ ಕ್ರಮ ಕೈಗೊಂಡು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಬೆಂಬಲ ಬೆಲೆ ಖರೀದಿ ಕೇಂದ್ರಗಳನ್ನು ಕೂಡಲೇ ಆರಂಭಿಸಲು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.

ಅಲ್ಲದೆ ಭತ್ತಕ್ಕೆ ಕೇಂದ್ರ ಸರ್ಕಾರ ನಿಗದಿ ಪಡಿಸಿರುವ ಕನಿಷ್ಠ ಬೆಂಬಲ ಬೆಲೆ 2320 ರೂ.ಗಿಂತ ಕಡಿಮೆ ಬೆಲೆಗೆ ರೈತರು ಮಾರಾಟ ಮಾಡಬಾರದು, ರೈತರನ್ನು ವಂಚಿಸಿ ಬಂಡವಾಳ ಶಾಹಿಗಳು ಹಾಗೂ ಮಧ್ಯವರ್ತಿಗಳು ಕಡಿಮೆ ಬೆಲೆಗೆ ಖರೀದಿ ಮಾಡಿದರೆ ಅಂಥವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಸಂಘದ ಜಿಲ್ಲಾ ಕಾರ್ಯಾಧ್ಯಕ್ಷ ಕಿರಗಸೂರು ಶಂಕರ್, ಜಿಲ್ಲಾ ಕಾರ್ಯದರ್ಶಿ ಬಿ.ಪಿ.ಪರಶಿವಮೂರ್ತಿ, ತಾಲೂಕು ಉಪಾಧ್ಯಕ್ಷ ಹೆಗ್ಗುರು ರಂಗರಾಜು, ತಾಲೂಕು ಪ್ರಧಾನ ಕಾರ್ಯದರ್ಶಿ ಪ್ರಸಾದ್ ನಾಯಕ್, ತಾಲೂಕು ಸಂಘಟನಾ ಕಾರ್ಯದರ್ಶಿ ಕುರುಬೂರು ಪ್ರದೀಪ್, ರೈತ ಮುಖಂಡರಾಗ ಅರುಣ್ ಕುಮಾರ್, ಬನ್ನೂರು ಸೂರಿ, ಕುಂತನಹಳ್ಳಿ ಕುಳ್ಳೇಗೌಡ ಮತ್ತಿತರರು ಇದ್ದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಹಿಟ್‌ ಧಾರಾವಾಹಿಗಳ ನಿರ್ದೇಶಕ, ನಿರ್ಮಾಪಕ ರಾಮ್​ಜೀ