Breaking NewsNEWS

ತಿ.ನರಸೀಪುರ – ಸೆರೆ ಸಿಕ್ಕ ಚಿರತೆ ಕೊಲ್ಲುವ ಬಗ್ಗೆ ಅಧಿಕಾರಿಗಳ ಜತೆ ಚರ್ಚಿಸಿ ಕ್ರಮ: ಸಚಿವ ಎಸ್‌ಟಿಎಸ್‌

ವಿಜಯಪಥ ಸಮಗ್ರ ಸುದ್ದಿ

ತಿ.ನರಸೀಪುರ: ನರಭಕ್ಷಕ ಚಿರತೆ ಸೆರೆಗಾಗಿ ಕಾರ್ಯಾಚರಣೆ ತೀವ್ರಗೊಂಡ ಬೆನ್ನಲ್ಲೇ ಇಂದು ಮುಂಜಾನೆ ಚಿರತೆ ಸೆರೆಯಾಗಿದೆ. ಈಗ ಆ ಚಿರತೆಯನ್ನು ಸಾಯಿಸಿಬಿಡಿ ಎಂದು ಅಲ್ಲಿನ ಜನರು ಹೇಳುತ್ತಿದ್ದಾರೆ. ಹೀಗಾಗಿ ಆ ಬಗ್ಗೆ ಜಿಲ್ಲಾಧಿಕಾರಿಗಳು ಮತ್ತು ಅಧಿಕಾರಿಗಳ ಜತೆ ಚರ್ಚಿಸಿ ಮುಂದಿನ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಮೈಸೂರಿನಲ್ಲಿ ಉಸ್ತುವಾರಿ ಸಚಿವ ಎಸ್‌.ಟಿ. ಸೋಮಶೇಖರ್ ಹೇಳಿದ್ದಾರೆ.

ತಿ.ನರಸೀಪುರ ತಾಲೂಕಿನ ಹೊರಳಹಳ್ಳಿ ಗ್ರಾಮದ 11 ವರ್ಷದ ಬಾಲಕನನ್ನು ಸ್ಥಳದಲ್ಲೇ ಕೊಂದು ಹಾಕಿದ್ದ, ನರಹಂತಕ ಚಿರತೆ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಇಂದು ಬೆಳಗ್ಗಿನ ಜಾವ ಬಿದ್ದಿದ್ದು, ಈ ಚಿರತೆಯಿಂದ ಡಿಎನ್ಎ ಪರೀಕ್ಷೆಗಾಗಿ ಸ್ಯಾಂಪಲ್‌ಗಳನ್ನು ಪ್ರಯೋಗಾಲಯಕ್ಕೆ ಕಳುಹಿಸಿಕೊಡಲಾಗಿದೆ.

ಈ ನರಹಂತಕ ಚಿರತೆಯನ್ನು ಕಾಡಿಗೆ ಬಿಡದೇ ಮೈಸೂರಿನ ಪ್ರಾಣಿ ಪುನರ್ವಸತಿ ಕೇಂದ್ರ ಅಥವಾ ಬನ್ನೇರುಘಟ್ಟಕ್ಕೆ ಬಿಡಲಾಗುವುದು ಎಂದು ಮೈಸೂರು ವಲಯದಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮಾಲತಿ ಪ್ರಿಯ ಮಾಹಿತಿ ನೀಡಿದ್ದಾರೆ.

ಕಳೆದ ಶನಿವಾರ ಅಂಗಡಿಗೆ ಬಿಸ್ಕತ್‌ ತರಲು ಹೋಗಿದ್ದ ಹೊರಳಹಳ್ಳಿ ಗ್ರಾಮದ ಜಯಂತ್ ಎಂಬ ಬಾಲಕನನ್ನು ಚಿರತೆ ಎಳೆದುಕೊಂಡು ಒಂದು ಕಿಲೋ ಮೀಟರ್‌ ದೂರ ಹೋಗಿ, ದೇಹದ ಅರ್ಧ ಭಾಗ ತಿಂದು ಪರಾರಿಯಾಗಿತ್ತು.

ಬಾಲಕನ ಅರ್ಧ ದೇಹ ಇದ್ದ ಸ್ಥಳದಲ್ಲಿ ಅರಣ್ಯ ಇಲಾಖೆ ಇಟ್ಟಿದ್ದ ಕ್ಯಾಮೆರಾದಲ್ಲಿ ನಿನ್ನೆ ಸಂಜೆ ಚಿರತೆ ಸೆರೆಯಾಗಿದ್ದು, ಅದೇ ಸ್ಥ ಳದಲ್ಲಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ನರಹಂತಕ ಚಿರತೆ ಬಿದ್ದಿದೆ.

ಚಿರತೆ  ಕೊಲ್ಲಲು ಗ್ರಾಮಸ್ಥರ ಪಟ್ಟು: ಬೆಳಗ್ಗಿನ ಜಾವ ಹೊರಳಹಳ್ಳಿ ಗ್ರಾಮದ ಹೊರವಲಯದಲ್ಲಿ ಬೋನಿಗೆ ಬಿದ್ದ ವಿಚಾರ ತಿಳಿದು ಅರಣ್ಯ ಇಲಾಖೆ ಸ್ಥಳಕ್ಕೆ ಹೋಗುವ ಹೊತ್ತಿಗೆ ಗ್ರಾಮಸ್ಥರು ಸೇರಿದ್ದರು. ಬೋನಿಗೆ ಬಿದ್ದ ಚಿರತೆಯನ್ನು ಸ್ಥಳದಲ್ಲೇ ಗುಂಡಿಕ್ಕಿ ಕೊಲ್ಲುವಂತೆ ಜನರು ಗಲಾಟೆ ಮಾಡುತ್ತಿದ್ದು, ಗ್ರಾಮಸ್ಥರನ್ನು ಅರಣ್ಯ ಇಲಾಖೆಯವರು ಸಮಾಧಾನ ಪಡಿಸಲು ಸಾಧ್ಯವಾಗದ ಕಾರಣ, ಸ್ಥಳಕ್ಕೆ ಪೊಲೀಸರು ಆಗಮಿಸಿದ ಮೇಲೆ ಚಿರತೆಯನ್ನು ಸ್ಥಳಾಂತರಿಸಲು ಸಿದ್ಧತೆ ಮಾಡಿ ಕೊಂಡಿದ್ದಾರೆ.

ಚಿರತೆಗೆ ಡಿಎನ್ಎ ಪರೀಕ್ಷೆ : ಬೋನಿಗೆ ಬಿದ್ದ ಐದು ವರ್ಷದ ಗಂಡು ಚಿರತೆಯ ಕೂದಲು, ರಕ್ತದ ಮಾದರಿ, ಪಾಲಿಕಲ್ಸ್ ಮಾದರಿಗಳನ್ನು ಪಡೆಯಲಾಗಿದೆ. ಇದನ್ನು ಪ್ರಯೋಗಾಲಾಯಕ್ಕೆ ಕಳುಹಿಸಲಾಗಿದೆ. ಜತೆಗೆ ಚಿರತೆ ದಾಳಿಯಿಂದ ಮೃತಪಟ್ಟ ಬಾಲಕನ ಮೃತದೇಹದ ಮೇಲೆ ಸಿಕ್ಕ ಕೂದಲುಗಳು ಹಾಗೂ ಮೃತ ಬಾಲಕನ ಮರಣೊತ್ತರ ಪರೀಕ್ಷೆಯನ್ನು ಚಿರತೆಯ ಡಿಎನ್ಎ ಪರೀಕ್ಷೆ ಜತೆಗೆ ಹೋಲಿಕೆ ಮಾಡಲಾಗುವುದು ಎಂದು ಅರಣ್ಯಾಧಿಕಾರಿ ಮಾಲತಿ ಪ್ರಿಯ ತಿಳಿಸಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು