CrimeNEWSದೇಶ-ವಿದೇಶ

ತನ್ನ ಊರು ಸೇರುವ ಹಂಬಲದಲ್ಲಿ ಕಾಲ್ನಡಿಗೆ ಆರಂಭಿಸಿ ಜೀವ ಬಿಟ್ಟ ಬಾಲಕಿ

150 ಕಿಮೀ ನಡೆದು ಬಂದಿದ್ದ ಬಾಲಕಿ l ಇನ್ನು 14 ಕಿಮಿ ಕ್ರಮಿಸಿದ್ದರೆ ಮನೆ ತಲುಪುತ್ತಿದ್ದ ಜೀವ

ವಿಜಯಪಥ ಸಮಗ್ರ ಸುದ್ದಿ

ವಿಜಯಪುರ: ಕೊರೊನಾ ವೈರಸ್‌ ಹರಡುವುದನ್ನು ತಡೆಗಟ್ಟುವ ಸಲುವಾಗಿ ದೇಶಾದ್ಯಂತ ಲಾಕ್‌ಡೌನ್‌ ಘೋಷಣೆಯಾಗಿದ್ದು, ಇದರಿಂದ ಪರ ರಾಜ್ಯದಲ್ಲಿ ಸಿಲುಕಿದ್ದ ಹನ್ನೆರಡು ವರ್ಷದ ಬಾಲಕಿ ತನ್ನ ಊರಿಗೆ ಬರಲು ಬರೋಬ್ಬರಿ 150 ಕಿಮೀ ಪ್ರಯಾಣ ಮಾಡಿ ಮನೆ ತಲುಪುವ ವೇಳೆಗೆ ಅಸುನೀಗಿರುವ ಧಾರುಣ ಘಟನೆ ವಿಜಯಪುರದಲ್ಲಿ ನಡೆದಿದೆ.

ತೆಲಂಗಾಣದಿಂದ ವಿಜಯಪುರದಕ್ಕೆ ತಲುಪಲು ಕಾಲ್ನಡಿಗೆ ಪ್ರಾರಂಭಿಸಿದ್ದ 11 ಮಂದಿಯ ಪೈಕಿ ಇದ್ದ 12 ವರ್ಷದ ಬಾಲಕಿ ಜಾಮ್ಲೋ ಮಕ್‌ಡಾಮ್‌  ಎಂಬಾಕೆಯೇ ಮೃತಪಟ್ಟ ಬಾಲಕಿ.

ಈಕೆ ತನ್ನ ಕುಟುಂಬಕ್ಕೆ ನೆರವಾಗಲು ಮೆಳಸಿನಕಾಯಿ ಹೊಲದಲ್ಲಿ ಕೆಲಸ ಮಾಡುತ್ತಿದ್ದ ಈಕೆ ತನ್ನೂರಿಗೆ ನಡೆದುಕೊಂಡು 150 ಕಿಮೀ ಕ್ರಮಿಸಿದ್ದಾಳೆ, ಇನ್ನೇನು ಇನ್ನು 14 ಕಿಮೀ ನಡೆದಿದ್ದರೆ ಮನೆ ತಲುಪುತ್ತಿದ್ದಳು ಅಷ್ಟರಲ್ಲಿ ಆಕೆ ಕೊನೆಯುಸಿರೆಳೆದಿದ್ದಾಳೆ. ನಂತರ ಆಕೆಯ ಮೃತ ದೇಹವನ್ನು ಆಂಬುಲೆನ್ಸ್‌ನಲ್ಲಿ ತೆಗೆದುಕೊಂಡು ಹೋಗಲಾಗಿದೆ.

ಈ ವರದಿಯ ಬಗ್ಗೆ ವಿಜಯಪುರದ ಮುಖ್ಯ ಆರೋಗ್ಯಾಧಿಕಾರಿ ಮಾತನಾಡಿದ್ದು, ಬಾಲಕಿಯ ಮರಣೋತ್ತರ ಪರೀಕ್ಷೆ ವರದಿಯನ್ನು ಇನ್ನಷ್ಟೇ ನೋಡಬೇಕಿದೆ. ಆದರೆ ಮೇಲ್ನೋಟಕ್ಕೆ ಬಳಲಿಕೆ, ಎಲೆಕ್ಟ್ರೋಲೈಟ್ ಅಸಮತೋಲನ ಅಥವಾ ನಿರ್ಜಲೀಕರಣದಿಂದ ಸಾವನ್ನಪ್ಪಿರುವಂತೆ ತೋರುತ್ತದೆ ಎಂದು ಹೇಳಿದ್ದಾರೆ.

ತೆಲಂಗಾಣದ ಮೆಣಸಿನಕಾಯಿ ಬೆಳೆಯುವ ಕೃಷಿ ಭೂಮಿಯಲ್ಲಿ ಈ ಕಾರ್ಮಿಕರು ಕಾರ್ಯನಿರ್ವಹಿಸುತ್ತಿದ್ದರು. ಸಾರಿಗೆ ವ್ಯವಸ್ಥೆ ಇಲ್ಲದ ಕಾರಣ 11 ಜನ ಕಾರ್ಮಿಕರು ಏ.15ರಿಂದ 150 ಕಿಮೀ ಕಾಲ್ನಡಿಗೆಯಲ್ಲಿ ಸಂಚರಿಸಿದ್ದಾರೆ. ಮೃತ ಬಾಲಕಿಯ ಮಾದರಿಗಳನ್ನು ಪಡೆಯಲಾಗಿದ್ದು ಪರೀಕ್ಷೆಯಲ್ಲಿ ಕೊರೊನಾ ನೆಗೆಟೀವ್ ಬಂದಿದೆ.

ರಾಜ್ಯ ಸರ್ಕಾರವು ಬಾಲಕಿಯ ಕುಟುಂಬಕ್ಕೆ ಒಂದು ಲಕ್ಷ ರೂ. ನೆರವನ್ನು ಘೋಷಿಸಿದೆ. ಲಾಕ್‌ಡೌನ್‌ ಸಮಯದಲ್ಲಿ ಮನೆಯಿಂದ ದೂರ ಉಳಿದು ಉದ್ಯೋಗ ಮತ್ತು ಆಶ್ರಯವಿಲ್ಲದಿರುವ ಸಾವಿರಾರು ವಲಸೆ ಕಾರ್ಮಿಕರು ಹತಾಶೆಯಿಂದ ಕಾಲ್ನಡಿಗೆಯಲ್ಲಿ ತನ್ನ ಊರನ್ನು ಸೇರಿಕೊಳ್ಳಲು ಸುಧೀರ್ಘ ಪ್ರಯಾಣಕ್ಕೆ ಪ್ರಯತ್ನಿಸಿದ್ದಾರೆ.

ಕಳೆದ ತಿಂಗಳು ಮಧ್ಯಪ್ರದೇಶದ ಕಾರ್ಮಿಕನೋರ್ವ ನ್ಯೂಡೆಲ್ಲಿಯಿಂದ ಕಾಲ್ನಡಿಗೆಯಲ್ಲಿ ಮನೆ ತಲುಪಲು ಯತ್ನಿಸಿ ಸಾವನ್ನಪ್ಪಿದ್ದ.

Leave a Reply

error: Content is protected !!
LATEST
ಚಾಮುಂಡಿ ಹುಟ್ಟುಹಬ್ಬ: ಬೆಳ್ಳಿ ಪಲ್ಲಕ್ಕಿ ಉತ್ಸವಕ್ಕೆ ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಚಾಲನೆ ನಾಡ ಅಧಿದೇವತೆ ಚಾಮುಂಡಿ ತಾಯಿಯ ವರ್ಧಂತಿ ಸಂಭ್ರಮ: ಬೆಟ್ಟಕ್ಕೆ ಹರಿದು ಬರುತ್ತಿದೆ ಭಕ್ತ ಸಾಗರ KRSನಿಂದ ಕಾವೇರಿ ನದಿಗೆ 1.30 ಲಕ್ಷ ಕ್ಯುಸೆಕ್ ನೀರು ಬಿಡುಗಡೆ ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ...