NEWSದೇಶ-ವಿದೇಶರಾಜಕೀಯ

ತೆಲಂಗಾಣದಲ್ಲಿ ಬಿಜೆಪಿಯ 4 ಟೈರ್ ಪಂಕ್ಚರ್ : ರಾಹುಲ್​ ಗಾಂಧಿ

ವಿಜಯಪಥ ಸಮಗ್ರ ಸುದ್ದಿ

ಹೈದರಾಬಾದ್: ಪ್ರಧಾನಿ ಮೋದಿಯವರ ರಿಮೋಟ್​ ಕಂಟ್ರೋಲ್​ನಲ್ಲಿ ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್​ ರಾವ್ ಕೆಲಸ ಮಾಡುತ್ತಿದ್ದಾರೆ. ಭಾರತ್ ರಾಷ್ಟ್ರ ಸಮಿತಿ (BRS) ಪಕ್ಷವು ಬಿಜೆಪಿಯ ಬಿ-ಟೀಮ್​ ಎಂದು ರಾಹುಲ್​ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.

ತೆಲಂಗಾಣದ ಕಮ್ಮಮ್​ ನಗರದಲ್ಲಿ ನಡೆದ ಕಾಂಗ್ರೆಸ್​ನ ಜನ ಘರ್ಜನ ಬೃಹತ್​ ಸಮಾವೇಶದಲ್ಲಿ ಮಾತನಾಡಿದರು. ಇದಕ್ಕೂ ಮುನ್ನ ಕರ್ನಾಟಕದಂತೆ ತೆಲಂಗಾಣದಲ್ಲೂ ಕಾಂಗ್ರೆಸ್​ನ ಗ್ಯಾರಂಟಿಗಳನ್ನು ಘೋಷಣೆ ಮಾಡಿದರು.

ಆ ಬಳಿಕ ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ, ತಮ್ಮ ಮಾತಿನುದ್ದಕ್ಕೂ ಸಿಎಂ ಕೆಸಿಆರ್​ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಕರ್ನಾಟಕ ವಿಧಾನಸಭೆ ಚುನಾವಣೆ​ ಫಲಿತಾಂಶವು ತೆಲಂಗಾಣದಲ್ಲಿ ಮರುಕಳಿಸಲಿದೆ. ಇಲ್ಲಿ ಬಿಜೆಪಿಯ 4 ಟೈರ್ ಪಂಕ್ಚರ್ ಆಗಿವೆ. ನೆರೆಯ ರಾಜ್ಯದಲ್ಲಿ ಆಗಿರುವುದೇ ಇಲ್ಲೂ ಆಗಲಿದೆ ಎಂದು ಭವಿಷ್ಯ ನುಡಿದರು.

ಇನ್ನು ಸಿಎಂ ಕೆಸಿಆರ್​ ಭ್ರಷ್ಟಾಚಾರ ಮಾಡುವಂತಹ ಯಾವ ಅವಕಾಶ ಬಿಟ್ಟಿಲ್ಲ. ಸಂಪೂರ್ಣವಾಗಿ ರಾಜ್ಯವನ್ನು ಲೂಟಿ ಮಾಡುತ್ತಿದ್ದಾರೆ ಎಂದು ಜರಿದರು.

ಬಿಆರ್​ಎಸ್ ಪಕ್ಷ ಅಂದರೇ ಬಿಜೆಪಿಯ ‘ರಿಸ್ತೇದಾರ್ ಸಮಿತಿ’. ಇಂತಹ ಬಿ- ಟೀಮ್​ ಜತೆ ಕಾಂಗ್ರೆಸ್​ ಮೈತ್ರಿ ಮಾಡಿಕೊಳ್ಳಲು ಸಿದ್ಧವಿಲ್ಲ. ಕರ್ನಾಟಕದಲ್ಲಿ ಕಾಂಗ್ರೆಸ್, ಬಿಜೆಪಿಯನ್ನು ಸೋಲಿಸಿದಂತೆ ತೆಲಂಗಾಣದಲ್ಲೂ ಬಿಜೆಪಿಯ ಬಿ- ಟೀಮ್ ಸೋಲಿಸಿ ಅಧಿಕಾರದ ಚುಕ್ಕಾಣಿ ಹಿಡಿಯುತ್ತೇವೆ ಎಂದರು.

ಇನ್ನು ಇದೇ ವೇಳೆ ತೆಲಂಗಾಣದ ಕಾಂಗ್ರೆಸ್​ ನಾಯಕರು, ರಾಹುಲ್​ ಗಾಂಧಿ ಸೇರಿ ಹಿರಿಯ ನಾಗರಿಕರು, ವಿಧವಾ ಮಹಿಳೆಯರಿಗೆ ಪ್ರತಿ ತಿಂಗಳು 4 ಸಾವಿರ ರೂಪಾಯಿ, ಪೋಟು ಜಮೀನು ಅನ್ನು ಆದಿವಾಸಿಗಳಿಗೆ‌ ನೀಡುವ ಗ್ಯಾರಂಟಿಗಳನ್ನು ಘೋಷಿಸಿದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಹಿಟ್‌ ಧಾರಾವಾಹಿಗಳ ನಿರ್ದೇಶಕ, ನಿರ್ಮಾಪಕ ರಾಮ್​ಜೀ