NEWSದೇಶ-ವಿದೇಶರಾಜಕೀಯ

ತೆಲಂಗಾಣದಲ್ಲಿ ಬಿಜೆಪಿಯ 4 ಟೈರ್ ಪಂಕ್ಚರ್ : ರಾಹುಲ್​ ಗಾಂಧಿ

ವಿಜಯಪಥ ಸಮಗ್ರ ಸುದ್ದಿ

ಹೈದರಾಬಾದ್: ಪ್ರಧಾನಿ ಮೋದಿಯವರ ರಿಮೋಟ್​ ಕಂಟ್ರೋಲ್​ನಲ್ಲಿ ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್​ ರಾವ್ ಕೆಲಸ ಮಾಡುತ್ತಿದ್ದಾರೆ. ಭಾರತ್ ರಾಷ್ಟ್ರ ಸಮಿತಿ (BRS) ಪಕ್ಷವು ಬಿಜೆಪಿಯ ಬಿ-ಟೀಮ್​ ಎಂದು ರಾಹುಲ್​ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.

ತೆಲಂಗಾಣದ ಕಮ್ಮಮ್​ ನಗರದಲ್ಲಿ ನಡೆದ ಕಾಂಗ್ರೆಸ್​ನ ಜನ ಘರ್ಜನ ಬೃಹತ್​ ಸಮಾವೇಶದಲ್ಲಿ ಮಾತನಾಡಿದರು. ಇದಕ್ಕೂ ಮುನ್ನ ಕರ್ನಾಟಕದಂತೆ ತೆಲಂಗಾಣದಲ್ಲೂ ಕಾಂಗ್ರೆಸ್​ನ ಗ್ಯಾರಂಟಿಗಳನ್ನು ಘೋಷಣೆ ಮಾಡಿದರು.

ಆ ಬಳಿಕ ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ, ತಮ್ಮ ಮಾತಿನುದ್ದಕ್ಕೂ ಸಿಎಂ ಕೆಸಿಆರ್​ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಕರ್ನಾಟಕ ವಿಧಾನಸಭೆ ಚುನಾವಣೆ​ ಫಲಿತಾಂಶವು ತೆಲಂಗಾಣದಲ್ಲಿ ಮರುಕಳಿಸಲಿದೆ. ಇಲ್ಲಿ ಬಿಜೆಪಿಯ 4 ಟೈರ್ ಪಂಕ್ಚರ್ ಆಗಿವೆ. ನೆರೆಯ ರಾಜ್ಯದಲ್ಲಿ ಆಗಿರುವುದೇ ಇಲ್ಲೂ ಆಗಲಿದೆ ಎಂದು ಭವಿಷ್ಯ ನುಡಿದರು.

ಇನ್ನು ಸಿಎಂ ಕೆಸಿಆರ್​ ಭ್ರಷ್ಟಾಚಾರ ಮಾಡುವಂತಹ ಯಾವ ಅವಕಾಶ ಬಿಟ್ಟಿಲ್ಲ. ಸಂಪೂರ್ಣವಾಗಿ ರಾಜ್ಯವನ್ನು ಲೂಟಿ ಮಾಡುತ್ತಿದ್ದಾರೆ ಎಂದು ಜರಿದರು.

ಬಿಆರ್​ಎಸ್ ಪಕ್ಷ ಅಂದರೇ ಬಿಜೆಪಿಯ ‘ರಿಸ್ತೇದಾರ್ ಸಮಿತಿ’. ಇಂತಹ ಬಿ- ಟೀಮ್​ ಜತೆ ಕಾಂಗ್ರೆಸ್​ ಮೈತ್ರಿ ಮಾಡಿಕೊಳ್ಳಲು ಸಿದ್ಧವಿಲ್ಲ. ಕರ್ನಾಟಕದಲ್ಲಿ ಕಾಂಗ್ರೆಸ್, ಬಿಜೆಪಿಯನ್ನು ಸೋಲಿಸಿದಂತೆ ತೆಲಂಗಾಣದಲ್ಲೂ ಬಿಜೆಪಿಯ ಬಿ- ಟೀಮ್ ಸೋಲಿಸಿ ಅಧಿಕಾರದ ಚುಕ್ಕಾಣಿ ಹಿಡಿಯುತ್ತೇವೆ ಎಂದರು.

ಇನ್ನು ಇದೇ ವೇಳೆ ತೆಲಂಗಾಣದ ಕಾಂಗ್ರೆಸ್​ ನಾಯಕರು, ರಾಹುಲ್​ ಗಾಂಧಿ ಸೇರಿ ಹಿರಿಯ ನಾಗರಿಕರು, ವಿಧವಾ ಮಹಿಳೆಯರಿಗೆ ಪ್ರತಿ ತಿಂಗಳು 4 ಸಾವಿರ ರೂಪಾಯಿ, ಪೋಟು ಜಮೀನು ಅನ್ನು ಆದಿವಾಸಿಗಳಿಗೆ‌ ನೀಡುವ ಗ್ಯಾರಂಟಿಗಳನ್ನು ಘೋಷಿಸಿದರು.

Leave a Reply

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹಿಂದಿನಿಂದ ವೇಗವಾಗಿ ಬಂದ ಕಾರು ಮುಂದೆ ಹೋಗುತ್ತಿದ್ದ ಕಾರ್‌ ಮೇಲೇರಿತು! ರೈತ ನಾಯಕ ಕುರುಬೂರು ಶಾಂತಕುಮಾರ್‌ಗೆ ಬೆಂಗಳೂರಿನಲ್ಲಿ ಚಿಕಿತ್ಸೆ: ಸಿಎಂ ಸಿದ್ದರಾಮಯ್ಯ ಮಹಾಕುಂಭ ಮೇಳಕ್ಕೆ ತೆರಳುತ್ತಿದ್ದ 18 ಮಂದಿ ದೆಹಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತಕ್ಕೆ ಸಿಲುಕಿ ಮೃತ ಮಳೆ ನೀರು ಕೊಯ್ಲಿನಿಂದ ಅಂತರ್ಜಲ ವೃದ್ಧಿ: ಕೃಷಿ ಇಲಾಖೆ ಉಪ ನಿರ್ದೇಶಕಿ ಗಾಯತ್ರಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ನೇಮಕಕ್ಕೆ ಅರ್ಜಿ ಆಹ್ವಾನ ಬಿಬಿಎಂಪಿ: ಕಸ ಬಿಸಾಡುವ ಸ್ಥಳ ನಿರ್ಮೂಲನೆ ಜತೆ ಜೆತೆಗೆ ಸ್ವಚ್ಛತಾ ಅಭಿಯಾನ KSRTC ರಿಯಾಯಿತಿ ದರದ ಪಾಸ್‌ ಇದ್ದರೂ ತಾರತಮ್ಯತೆ: ನಿವೃತ್ತರಾದ ಮೇಲೆ ಅಧಿಕಾರಿಗಳಿಗೆ ಬಡತನ- ನೌಕರರಿಗೆ ಸಿರಿತನ !! ಪಂಜಾಬ್‌ನಲ್ಲಿ ಕುರುಬೂರು ಶಾಂತಕುಮಾರ್ ಇದ್ದ ಕಾರು ಅಪಘಾತ: ಆಸ್ಪತ್ರೆಗೆ ದಾಖಲು ಬಿಬಿಎಂಪಿ: 1.84 ಲಕ್ಷ ಬೀದಿ ನಾಯಿಗಳಿಗೆ "ಸಂಯುಕ್ತ ಲಸಿಕೆ" ಹಾಕುವ ಗುರಿ- ತುಷಾರ್ ಗಿರಿನಾಥ್ ಮೈಕ್ರೋಫೈನಾನ್ಸ್ ಸಂಸ್ಥೆಗಳ ಕಿರುಕುಳ ನಿಯಂತ್ರಣಕ್ಕೆ ಸರ್ಕಾರಿ ಆಧ್ಯಾದೇಶ ಜಾರಿ