NEWSನಮ್ಮಜಿಲ್ಲೆ

ತೀವ್ರ ಶ್ವಾಸಕೋಶ-ಜ್ವರ ಲಕ್ಷಣವುಳ್ಳವರ ಸಮೀಕ್ಷೆ ನಡೆಸಿ

ಅಧಿಕಾರಿಗಳಿಗೆ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ  ಸಲಹೆ

ವಿಜಯಪಥ ಸಮಗ್ರ ಸುದ್ದಿ

ವಿಜಯಪುರ: ಜಿಲ್ಲೆಯಲ್ಲಿ ತೀವ್ರ ತರವಾದ ಶ್ವಾಸಕೋಶದ ಸೋಂಕು, ನೆಗಡಿ, ಕೆಮ್ಮು, ಜ್ವರ ಲಕ್ಷಣವುಳ್ಳವರನ್ನು ಪತ್ತೆ ಹಚ್ಚಲು ಆಶಾ ಕಾರ್ಯಕರ್ತೆಯರು, ಎಎನ್‍ಎಮ್ ಮತ್ತು ಬಿಎಲ್‍ಒ ಅಧಿಕಾರಿಗಳು ಮನೆಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ.

ನಗರದ ನೂತನ ಪ್ರವಾಸ ಮಂದಿರದಲ್ಲಿಂದು ಕೋವಿಡ್-19 ನಿಯಂತ್ರಣ ಕುರಿತಂತೆ ಶಾಸಕರು ಮತ್ತು ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು ಕಂಟೇನ್ಮೆಂಟ್ ವಲಯದಲ್ಲಿ ಮಾತ್ರ ಈ ರೀತಿ ಮಾಹಿತಿ ಸಂಗ್ರಹಿಸಲಾಗುತ್ತಿದ್ದು, ಇನ್ನು ಮುಂದೆ ಜಿಲ್ಲೆಯಾದ್ಯಂತ ಮನೆಮನೆಗೆ ಭೇಟಿ ನೀಡುವ ಮೂಲಕ ತೀವ್ರ ತರವಾದ ಶ್ವಾಸಕೋಶದ ತೊಂದರೆ, ನೆಗಡಿ, ಜ್ವರ ಲಕ್ಷಣವುಳ್ಳವರನ್ನು ಪತ್ತೆ ಹಚ್ಚುವ ಕಾರ್ಯ ಈಗಾಗಲೇ ಆರಂಭಗೊಂಡಿದ್ದು, ಹಿರಿಯ ನಾಗರಿಕರು, ಗರ್ಭಿಣಿ ಮಹಿಳೆಯರು, ಸಕ್ಕರೆ ಕಾಯಿಲೆ ಹೊಂದಿದವರು ಮತ್ತು ಡಯಾಲಿಸಿಸ್ ರೋಗಿಗಳ ಬಗ್ಗೆಯೂ ಮಾಹಿತಿ ಸಂಗ್ರಹಿಸಿ ವರದಿ ನೀಡಲು ಸೂಚಿಸಲಾಗಿದೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಈವರೆಗೆ 35 ಕೋವಿಡ್ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದ್ದು, ಈ ಪೈಕಿ ಇಬ್ಬರು ಮೃತ ಪಟ್ಟಿದ್ದಾರೆ. ಇನ್ನುಳಿದ 32 ರೋಗಿಗಳ ಆರೋಗ್ಯ ಸ್ಥಿರವಾಗಿದ್ದು, ಲಕ್ಷಣಗಳು ಕಂಡು ಬರದೇ ಇರುವುದು ಆಶಾದಾಯಕ ಬೆಳವಣಿಗೆಯಾಗಿದೆ  ಎಂದರು.

ಇನ್ನೊಬ್ಬ ರೋಗಿ ಆಕ್ಸಿಜನ್ ಆಧಾರದ ಮೇಲೆ ಉತ್ತಮ ರೀತಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಮುಂಬರುವ ದಿನಗಳಲ್ಲಿ ಕೋವಿಡ್-19 ಕಟ್ಟಿಹಾಕುವ ನಿಟ್ಟಿನಲ್ಲಿ ಜಿಲ್ಲಾಡಳಿತ ಕೈಗೊಂಡಿರುವ ಕ್ರಮಗಳು ಪರಿಣಾಮಕಾರಿಯಾಗಿವೆ. ಪಾಸಿಟಿವ್ ಪ್ರಕರಣಗಳಿಗೆ ಸಂಬಂಧಪಟ್ಟಂತೆ ಒಟ್ಟು 1033 ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕಗಳ ಬಗ್ಗೆ ಪತ್ತೆ ಹಚ್ಚಲಾಗಿದೆ. ಸರ್ಕಾರದ ನಿರ್ದೇಶನದಂತೆ ಅವರ ಗಂಟಲು ದ್ರವ ಮಾದರಿ ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ತಿಳಿಸಿದರು.

ಕೋವಿಡ್ ನಿರ್ವಹಣೆಯ ಜೊತೆಗೆ ರೈತರ ಬೆಳೆಗಳಿಗೂ ವಿಶೇಷ ಗಮನ ನೀಡುವಂತೆ ಶಾಸಕ ಯಶವಂತರಾಯಗೌಡ ಪಾಟೀಲ ಅವರ ಸಲಹೆ ಹಿನ್ನೆಲೆ ತೋಟಗಾರಿಕಾ ಬೆಳೆಗಳಾದ ಕಲ್ಲಂಗಡಿ, ದಾಳಿಂಬೆ, ಪಪ್ಪಾಯಿ, ಕರಬೂಜ ಸೇರಿದಂತೆ ಇತರೆ ಬೆಳೆಗಳಿಗೆ ರೈತರ ಅನುಕೂಲಕ್ಕಾಗಿ ಆವರ್ತ ನಿಧಿ ಮಾದರಿಯಲ್ಲಿ ಸೌಲಭ್ಯ ಕಲ್ಪಿಸಲು ಸೂಕ್ತ ಪ್ರಸ್ತಾವನೆ ರೂಪಿಸಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ ಅವರು ಕೃಷಿ ಮತ್ತು ತೋಟಗಾರಿಕಾ ಬೆಳೆಗಳಿಗೆ ಜಿಲ್ಲೆಯಲ್ಲಿ ಖರೀದಿದಾರರು ಮತ್ತು ರೈತರ ಮಧ್ಯೆ ಸಂಪರ್ಕ ಜಾಲ ರೂಪಿಸಿ ಸೂಕ್ತ ಬೆಲೆ ಕಲ್ಪಿಸುವ ಕುರಿತಂತೆ ಶಾಸಕ ಅರುಣ ಶಹಾಪೂರ ಅವರ ಸಲಹೆ ಮೇರೆಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸಚಿವರು ಸೂಚನೆ ನೀಡಿದರು.

ಅದರಂತೆ ಉಜನಿ ಜಲಾಶಯದಿಂದ ಭೀಮಾ ನದಿಗೆ ಬಿಡಲಾದ ನೀರು ಅಕ್ಕಲಕೋಟೆವರೆಗೆ ಮಾತ್ರ ಲಭ್ಯವಾಗಲಿದ್ದು, ಇಂಡಿ ಮತ್ತು ಕಲಬುರಗಿ ಜಿಲ್ಲೆಯ ಅಫಜಲಪೂರ ಬಹತೇಕ ಹಳ್ಳಿಗಳಿಗೆ ಈ ನೀರು ಲಭ್ಯವಾಗಲು ಅನಾನುಕೂಲವಾಗುತ್ತಿದ್ದು, ಈ ಕುರಿತಂತೆ ಸರ್ಕಾರದ ಮಟ್ಟದಲ್ಲಿ ಪ್ರಯತ್ನಿಸುವಂತೆ ಸಚಿವರಲ್ಲಿ ಶಾಸಕ ಯಶವಂತರಾಯಗೌಡ ಪಾಟೀಲ ಮನವಿ ಮೇರೆಗೆ ರಾಜ್ಯ ಮತ್ತು ಮಹಾರಾಷ್ಟ್ರ ಸರ್ಕಾರದ ಗಮನ ಸೆಳೆಯಲು ತಾವು ಪ್ರಯತ್ನಸುವುದಾಗಿ ಸಚಿವರು ತಿಳಿಸಿದರು.

ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನುಪಮ್ ಅಗರವಾಲ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋವಿಂದ ರೆಡ್ಡಿ  ಜಿಲ್ಲೆಯಾದ್ಯಂತ ಕೋವಿಡ್-19 ನಿಯಂತ್ರಣಕ್ಕೆ ಕೈಗೊಂಡ ಕ್ರಮಗಳ ಬಗ್ಗೆ ಸಚಿವರಿಗೆ ಅವಶ್ಯಕ ಮಾಹಿತಿ ನೀಡಿದರು. ಶಾಸಕರಾದ ಎಂ.ಸಿ ಮನಗೂಳಿ, ಸೋಮನಗೌಡ ಪಾಟೀಲ (ಸಾಸನೂರ), ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ  ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

error: Content is protected !!
LATEST
ಚಾಮುಂಡಿ ಹುಟ್ಟುಹಬ್ಬ: ಬೆಳ್ಳಿ ಪಲ್ಲಕ್ಕಿ ಉತ್ಸವಕ್ಕೆ ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಚಾಲನೆ ನಾಡ ಅಧಿದೇವತೆ ಚಾಮುಂಡಿ ತಾಯಿಯ ವರ್ಧಂತಿ ಸಂಭ್ರಮ: ಬೆಟ್ಟಕ್ಕೆ ಹರಿದು ಬರುತ್ತಿದೆ ಭಕ್ತ ಸಾಗರ KRSನಿಂದ ಕಾವೇರಿ ನದಿಗೆ 1.30 ಲಕ್ಷ ಕ್ಯುಸೆಕ್ ನೀರು ಬಿಡುಗಡೆ ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ...