NEWSನಮ್ಮರಾಜ್ಯರಾಜಕೀಯಶಿಕ್ಷಣ-

ದಮನಿತ ಮಹಿಳೆಯರಿಗಾಗಿ ಕೌಶಲ್ಯ ತರಬೇತಿ, ಘಟಕ ಸ್ಥಾಪನೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ದಮನಿತ ಮಹಿಳೆಯರಿಗಾಗಿ ಕೌಶಲ್ಯ ತರಬೇತಿ ಮತ್ತು ಘಟಕ ಸ್ಥಾಪನೆ ಕ್ರಮವಹಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದರು.

ವಿಧಾನಪರಿಷತ್ತಿನಲ್ಲಿ ನಡೆದ ಪ್ರಶ್ನೋತ್ತರ ವೇಳೆ ಡಾ. ಜಯಮಾಲ ರಾಮಚಂದ್ರ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, 2019-20ನೇ ಸಾಲಿನಲ್ಲಿ 11.50 ಕೋಟಿ ರೂ. ಅನುದಾನದ ಪೈಕಿ 1000 ದಮನಿತ ಮಹಿಳೆಯರಿಗೆ ತರಬೇತಿ ನೀಡಲು ಅಗತ್ಯವಿರುವ ಅನುದಾನ ರೂ. 3.50 ಕೋಟಿಗಳಲ್ಲಿ ವೆಚ್ಚ ಭರಿಸಲು ಅನುಮೋದನೆ ದೊರಕಿದೆ ಹಾಗೂ 1.50 ಕೋಟಿ ರೂ. ಮಹಿಳಾ ತರಬೇತಿ ಯೋಜನೆಯಿಂದ ಬಿಡುಗಡೆ ಮಾಡಲಾಗಿದೆ ಎಂದರು.

ದಮನಿತ ಮಹಿಳೆಯರ ಘಟಕ ಪ್ರಾರಂಭಿಸಲು   10 ಕೋಟಿ ರೂ. ಗಳನ್ನು ಒದಗಿಸಿದ್ದು, ಇದು ಬಂಡವಾಳ ಶೀರ್ಷಿಕೆ ಅಡಿ ಭರಿಸಲು ಸಾಧ್ಯವಾಗದ ಕಾರಣ ರಾಜಸ್ವ ಲೆಕ್ಕಶೀರ್ಷಿಕೆಯಡಿ ಬಿಡುಗಡೆ ಮಾಡಲು ಆರ್ಥಿಕ ಇಲಾಖೆಯನ್ನು ಕೋರಲಾಗಿದೆ. ಅನುದಾನ ಬಿಡುಗಡೆಯಾದ ಕೂಡಲೇ ಘಟಕಗಳನ್ನು ಸ್ಥಾಪಿಸಲು ಕ್ರಮವಹಿಸಲಾಗುವುದು ಎಂದರು.

2020-21ನೇ ಸಾಲಿನಲ್ಲಿ ಚೇತನ ಯೋಜನೆಯಡಿ ಒದಗಿಸಲಾಗಿರುವ  4 ಕೋಟಿ ರೂ. ಗಳ ಪೈಕಿ   2 ಕೋಟಿ ರೂ. ಗಳನ್ನು ದಮನಿತ ಮಹಿಳೆಯರ ಘಟಕ ಸ್ಥಾಪನೆ ಮಾಡಲು ನಿಗದಿಪಡಿಸಲಾಗಿದೆ ಎಂದು ತಿಳಿಸಿದರು.

2019-20ನೇ ಸಾಲಿನಲ್ಲಿ ಪರಿಸಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉಪಯೋಜನೆಯಡಿ ಬಳಕೆಯಾಗದ ಅನುದಾನದಡಿ ಉದ್ಯೋಗಿನಿ ಹಾಗೂ ಸಮೃದ್ಧಿ ಯೋಜನೆಯಡಿ ಅನುಕ್ರಮವಾಗಿ ಪರಿಶಿಷ್ಟ ಜಾತಿಗೆ ಸಾರಿದ ಫಲಾನುಭವಿಗಳಿಗೆ  15.54 ಕೋಟಿ ರೂ. ಮತ್ತು  3 ಕೋಟಿ ರೂ.  ಹಾಗೂ ಪರಿಶಿಷ್ಟ ಪಂಗಡದ ಫಲನಾನುಭವಿಗಳಿಗೆ  8  ಕೋಟಿ ಮತ್ತು 50 ಕೋಟಿ ರೂ. ನಿಗದಿಯಾಗಿದೆ. ಫಲಾನುಭವಿಗಳನ್ನು ಆಯ್ಕೆ ಮಾಡುವಾಗ ದಮನಿತ ಮಹಿಳೆಯರಿಗೆ ಆದ್ಯತೆ ನೀಡಲಾಗುತ್ತದೆ  ಎಂದು ಸದನದಲ್ಲಿ ತಿಳಿಸಿದರು.

Leave a Reply

error: Content is protected !!
LATEST
ಚಾಮುಂಡಿ ಹುಟ್ಟುಹಬ್ಬ: ಬೆಳ್ಳಿ ಪಲ್ಲಕ್ಕಿ ಉತ್ಸವಕ್ಕೆ ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಚಾಲನೆ ನಾಡ ಅಧಿದೇವತೆ ಚಾಮುಂಡಿ ತಾಯಿಯ ವರ್ಧಂತಿ ಸಂಭ್ರಮ: ಬೆಟ್ಟಕ್ಕೆ ಹರಿದು ಬರುತ್ತಿದೆ ಭಕ್ತ ಸಾಗರ KRSನಿಂದ ಕಾವೇರಿ ನದಿಗೆ 1.30 ಲಕ್ಷ ಕ್ಯುಸೆಕ್ ನೀರು ಬಿಡುಗಡೆ ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ...