NEWSನಮ್ಮಜಿಲ್ಲೆನಮ್ಮರಾಜ್ಯ

“ದಮ್ಮಯ್ಯ, ನಮ್ಮಲ್ಲಿ ಹಣವಿಲ್ಲ, ದಯವಿಟ್ಟು ಬಿಟ್ಟುಬಿಡಿ” ಎಂದು ಬೇಡಿಕೊಂಡರೂ ದಯೆ ತೋರದ ಪೊಲೀಸರು : ಎಚ್‌ಡಿಕೆ ಕಿಡಿ

ವಿಜಯಪಥ ಸಮಗ್ರ ಸುದ್ದಿ

ಮಂಡ್ಯ: ನಗರದಲ್ಲಿ ಮಗುವಿನೊಂದಿಗೆ ಆಸ್ಪತ್ರೆಗೆ ತೆರಳುತ್ತಿದ್ದ ದಂಪತಿಯನ್ನು ಅಡ್ಡಗಟ್ಟಿ ಪೊಲೀಸರು ಕಿರುಕುಳ ನೀಡಿದ್ದು ಖಂಡನೀಯ. ಮಾನವೀಯತೆಯನ್ನೇ ಅಣಕಿಸುವ ಇಂಥ ಘಟನೆಗಳು ರಾಜ್ಯದಲ್ಲಿ ಪದೇಪದೆ ಘಟಿಸುತ್ತಿರುವುದು ಆಘಾತಕಾರಿ. ರಾಜ್ಯದಲ್ಲಿ ಪೊಲೀಸ್ ವ್ಯವಸ್ಥೆಯನ್ನು ರಾಜ್ಯ ಸರಕಾರ ಹಾಳು ಮಾಡಿದೆ ಎನ್ನುವುದಕ್ಕೆ ಈ ಘಟನೆ ಸಾಕ್ಷಿ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಆಸ್ಪತ್ರೆಗೆ ಬೈಕ್‌ನಲ್ಲಿ ಮಗುವನ್ನು ಕರೆದುಕೊಂಡು ಹೋಗುತ್ತಿದ್ದ ತಂದೆ-ತಾಯಿಯನ್ನು ಅಡ್ಡಗಟ್ಟಿ ಹೆಲ್ಮೆಟ್ ಇಲ್ಲ ಎನ್ನುವ ಕಾರಣಕ್ಕೆ ಬೈಕಿನ ಕೀ ಕಿತ್ತುಕೊಂಡು ಪೊಲೀಸರು ಕಿರುಕುಳ ನೀಡಿದ ಘಟನೆಯ ವಿಡಿಯೋ ತುಣುಕುಗಳನ್ನು ನೋಡಿ ನನಗೆ ಬಹಳ ಸಂಕಟವಾಯಿತು ಎಂದು ತಿಳಿಸಿದ್ದಾರೆ.

ಇನ್ನು ಮಗುವಿನ ಅನಾರೋಗ್ಯದಿಂದ ಆತಂಕಗೊಂಡಿದ್ದ ದಂಪತಿಯೊಂದಿಗೆ ಪೊಲೀಸರು ಹೀಗೆ ನಡೆದುಕೊಂಡಿದ್ದು ಅಕ್ಷಮ್ಯ ಮತ್ತು ಹೇಯ. “ದಮ್ಮಯ್ಯ, ನಮ್ಮಲ್ಲಿ ಹಣವಿಲ್ಲ, ದಯವಿಟ್ಟು ಬಿಟ್ಟುಬಿಡಿ” ಎಂದು ಬೇಡಿಕೊಂಡರೂ ಪೊಲೀಸರು ದಯೆ ತೋರಿಸಿಲ್ಲ. ದಂಡದ ಮಾತು ಹೇಳುತ್ತಲೇ ಪೊಲೀಸರು ಹಣಕ್ಕಾಗಿ ಪೀಡಿಸಿರುವುದು ಪೈಶಾಚಿಕ ನಡವಳಿಕೆ, ಇಲಾಖೆಯೇ ತಲೆ ತಗ್ಗಿಸುವಂತದ್ದು ಎಂದು ಕಿಡಿಕಾರಿದ್ದಾರೆ.

ಹಣವಿಲ್ಲದೇ ದಂಪತಿ ರಸ್ತೆಯಲ್ಲೇ ಪರದಾಡಿದ್ದಾರೆ. ಆ ಮಗುವಿನ ತಂದೆ ಹಣಕ್ಕಾಗಿ ಒದ್ದಾಡಿದ್ದಾರೆ, ಆ ತಾಯಿ ಅನಾರೋಗ್ಯಕ್ಕೆ ತುತ್ತಾಗಿದ್ದ ಮಗುವನ್ನು ರಸ್ತೆ ನಡುವೆಯೇ ಮಡಿಲಲ್ಲಿಟ್ಟುಕೊಂಡು ಅನುಭವಿಸಿದ ವೇದನೆ ಸರಕಾರದ ಕೆಟ್ಟ ಆಡಳಿತಕ್ಕೆ ಹಿಡಿದ ಕನ್ನಡಿ, ಮನುಷ್ಯತ್ವ ಸತ್ತ ಸರಕಾರದ ಇನ್ನೊಂದು ಕರಾಳಮುಖ ಎನ್ನದೇ ವಿಧಿ ಇಲ್ಲ ಎಂದು ಛೇಡಿಸಿದ್ದಾರೆ.

ಆ ಮಗುವಿನ ತಂದೆ ಕೊನೆಗೂ ಗೆಳೆಯರೊಬ್ಬರಿಂದ ಹಣ ಪಡೆದು ತಮ್ಮ ಬ್ಯಾಂಕ್ ಖಾತೆಗೆ ಹಾಕಿಸಿಕೊಂಡು ದಂಡ ಕಟ್ಟಿದ ಮೇಲೆ ಪೊಲೀಸರು ಬೈಕ್ ಬಿಟ್ಟು ಕಳಿಸಿದ್ದಾರೆ. ಬದಲಿಗೆ ದಂಡದ ರಸೀತಿ ಕೊಟ್ಟು, ಆ ನಂತರ ದಂಡ ಕಟ್ಟಿ ಎಂದು ಪೊಲೀಸರು ಹೇಳಬಹುದಿತ್ತು. ಹಾಗೆ ಮಾಡದೇ ದಂಡಪ್ರಯೋಗದ ಹೆಸರಿನಲ್ಲಿ ಪೊಲೀಸರು ಹಿಂಸೆ ನೀಡಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇನ್ನು ಕೂಡಲೇ ಆ ಪೊಲೀಸ್ ಸಿಬ್ಬಂದಿಯ ವಿರುದ್ಧ ರಾಜ್ಯ ಸರಕಾರ ಕಠಿಣ ಕ್ರಮ ವಹಿಸಬೇಕು ಹಾಗೂ ಇಂಥ ಮನಃಸ್ಥಿತಿಯ ಪೊಲೀಸ್ ಸಿಬ್ಬಂದಿಯ ಮನಃಪರಿವರ್ತನೆ ಮಾಡಬೇಕು. ಹಿರಿಯ ಅಧಿಕಾರಿಗಳು ಈ ಬಗ್ಗೆ ಹೆಚ್ಚು ಮುತುವರ್ಜಿ, ಎಚ್ಚರಿಕೆ ವಹಿಸಬೇಕು ಎಂದು ಸಲಹೆ ನೀಡಿದ್ದಾರೆ.

ಅಲ್ಲದೆ, ಗೃಹ ಸಚಿವರು ಈ ಬಗ್ಗೆ ಜನರಿಗೆ ಉತ್ತರ ನೀಡಬೇಕಲ್ಲದೆ, ನೊಂದ ದಂಪತಿಗೆ ಸಾಂತ್ವನ ಹೇಳಲೇಬೇಕು. ಇಂಥ ಘಟನೆಗಳು ರಾಜ್ಯದಲ್ಲಿ ಮರುಕಳಿಸದಂತೆ ಕಟ್ಟುನಿಟ್ಟಿನ ಕ್ರಮ ವಹಿಸಬೇಕು ಹಾಗೂ ಪೊಲೀಸ್ ವ್ಯವಸ್ಥೆಯನ್ನು ಜನಸ್ನೇಹಿಯನ್ನಾಗಿ ಮಾಡಲು ಎಲ್ಲ ಕ್ರಮಗಳನ್ನು ತುರ್ತಾಗಿ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ನಾನು ಕಾದು ಕುಳಿತಿದ್ದರೂ ಬಸ್‌ ನಿಲ್ಲಿಸಿಲ್ಲ - ಚಾಲಕ, ಕಂಡಕ್ಟರ್‌ ತಿಂಗಳ ಸಂಬಳ ನನಗೆ ನಷ್ಟಪರಿಹಾರ ಕೊಡಿ: ವಕೀಲನ ಒತ್ತ... ಕೆಎಂಎಫ್ ಸಿಬ್ಬಂದಿಗೆ 7ನೇ ವೇತನ ಆಯೋಗ ಜಾರಿ- 2024ರ ಆ.1ರಿಂದಲೇ ಪೂರ್ವಾನ್ವಯ KSRTC ಏಕಸ್ವಾಮ್ಯಕ್ಕೆ ಮೂಗುದಾರ ಹಾಕಿ- ಸರ್ಕಾರದ ಕಾಯ್ದೆ ಸರಿ ಎಂದ ಕೋರ್ಟ್ ಸ್ಮಶಾನ ಜಾಗ ಭೂಗಳ್ಳನಿಗೆ ಬಿಟ್ಟುಕೊಡಲು ಟಿಪ್ಪಣಿ ಮಂಡಿಸಿರುವ ಭ್ರಷ್ಟ ಅಧಿಕಾರಿಗಳು: ಎನ್.ಆರ್.ರಮೇಶ್ ಆರೋಪ ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ