CrimeNEWSನಮ್ಮಜಿಲ್ಲೆನಮ್ಮರಾಜ್ಯ

ದಾವಣಗೆರೆ: KSRTC ಬಸ್ ಅಡ್ಡಗಟ್ಟಿ ಖಾಸಗಿ ಬಸ್‌ ಸಿಬ್ಬಂದಿ ದೌರ್ಜನ್ಯ !

ವಿಜಯಪಥ ಸಮಗ್ರ ಸುದ್ದಿ

ದಾವಣಗೆರೆ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಬಸ್‌ನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಇರುವುದರಿಂದ ತಮ್ಮ ಆದಾಯ ಕಡಿತವಾಗುತ್ತಿದೆ ಎಂದು ಖಾಸಗಿ ಬಸ್‌ ಸಿಬ್ಬಂದಿ KSRTC ಬಸ್‌ ಚಾಲಕ ಮತ್ತು ಕಂಡಕ್ಟರ್‌ ಮೇಲೆ ದೌರ್ಜನ್ಯ ಎಸಗಿರುವ ಘಟನೆ ಇಂದು ನಡೆದಿದೆ.

ಸೋಮವಾರ (ಜು.17) ಬೆಳಗ್ಗೆ ದಾವಣಗೆರೆಯಿಂದ ಅರಸಿಕೇರಿ ಮಾರ್ಗವಾಗಿ ಬಳ್ಳಾರಿ ಸಂಚರಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ ಪ್ರಯಾಣಕ್ಕೆ ಖಾಸಗಿ ಬಸ್‌ ಸಿಬ್ಬಂದಿ ತೊಂದರೆ ನೀಡಿದ್ದಲ್ಲದೆ, ಆ ಬಸ್‌ ಅಡ್ಡಗಟ್ಟಿ ಸಿಬ್ಬಂದಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ಘಟನೆ ಕಂಚಿಕೇರಿ ಸಮೀಪ ನಡೆದಿದೆ.

ದಾವಣಗೆರೆಯಿಂದ ಅರಸಿಕೇರಿ ಮಾರ್ಗವಾಗಿ ಬಳ್ಳಾರಿಗೆ ಹೊರಟಿದ್ದ KSRTC ಬಸ್‌ ಕಂಚಿಕೇರಿ ದಾಟುತ್ತಿದ್ದಂತೆ ಅರಸೀಕೇರಿಗೆ ಹೊರಟಿದ್ದ KA-17 B 2038 ಖಾಸಗಿ ಬಸ್‌ ಚಾಲಕ, ಕೆಎಸ್‌ಆರ್‌ಟಿಸಿ ಬಸ್‌ಗೆ ಅಡ್ಡಿಪಡಿಸುತ್ತಾ ಬಸ್ ಚಾಲಾಯಿಸಿದ್ದಾನೆ.

ಇಷ್ಟೆ ಅಲ್ಲದೆ ಸುಮಾರು ಇಪ್ಪತ್ತು ನಿಮಿಷ KSRTC ಬಸ್ ಮುಂದೆ ಹೋಗಲು ದಾರಿ ಬಿಡದೆ ತೊಂದರೆ ನೀಡಿದ್ದಾಗಿ ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.

ಸುಮಾರು 20 ನಿಮಿಷಗಳ ನಂತರ ಖಾಸಗಿ ಬಸ್‌ ಅನ್ನು ಕೆಎಸ್‌ಆರ್‌ಟಿಸಿ ಬಸ್‌ ಓವರ್ ಟೇಕ್ ಮಾಡಿತ್ತು. ಆದರೆ ಇದರಿಂದ ಕೆರಳಿದ ಖಾಸಗಿ ಬಸ್‌ನ ಡ್ರೈವರ್‌ ಮತ್ತು ಕಂಡಕ್ಟರ್‌ ಹಳ್ಳಿಯೊಂದರ ಬಳಿ ಕೆಎಸ್‌ಆರ್‌ಟಿಸಿ ಬಸ್‌ ಅಡ್ಡ ಹಾಕಿ ಬಸ್ ಚಲಾಯಿಸುತ್ತಿದ್ದ ಡ್ರೈವರ್ ಮತ್ತು ಕಂಡಕ್ಟರ್‌ಗೆ ಅವಾಚ್ಯವಾಗಿ ನಿಂದಿಸಿದ್ದಾರೆ.

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು