NEWS

ದೇಶದಲ್ಲಿ ರಸಗೊಬ್ಬರ, ಕೀಟನಾಶಕಗಳ ಕೊರತೆ ಇಲ್ಲ

ಊಹಾಪೋಹಗಳಿಗೆ ಕಿವಿಗೊಡದಿರಿ l ಕೇಂದ್ರ ಸಚಿವ ಸದಾನಂದಗೌಡ ಸಲಹೆ

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ಕರ್ನಾಟಕವೂ ಸೇರಿದಂತೆ ದೇಶದ ಯಾವುದೇ ಭಾಗದಲ್ಲಿ ರಸಗೊಬ್ಬರ ಅಥವಾ ಕೀಟನಾಶಕಗಳ ಕೊರತೆ ಉಂಟಾಗಿಲ್ಲ. ಕರ್ನಾಟಕದಲ್ಲಿ ಸದ್ಯ 7.3 ಲಕ್ಷ ಟನ್ ರಸಗೊಬ್ಬರವಿದೆ ಎಂದು ಕೇಂದ್ರ ರಾಸಾಯನಿ ಮತ್ತು ರಸಗೊಬ್ಬರ ಸಚಿವ ಡಿ. ವಿ. ಸದಾನಂದ ಗೌಡ ತಿಳಿಸಿದ್ದಾರೆ.

ಏಪ್ರಿಲ್ ತಿಂಗಳಲ್ಲಿ ರಾಜ್ಯದ ಬೇಡಿಕೆ 2.57 ಲಕ್ಷ ಟನ್. ಹಾಗಾಗಿ ರೈತರು ಈ ಸಲವೂ ಮಾಮೂಲಿಯಾಗಿ ಮುಂಗಾರು ಬಿತ್ತನೆಗೆ ತಯಾರಿ ಮಾಡಿಕೊಳ್ಳಬಹುದು ಎಂದು ಹೇಳಿದ್ದಾರೆ.

ಲಾಕ್‌ ಡೌನ್‌ನಿಂದಾಗಿ ಆರಂಭದಲ್ಲಿ ಒಂದೆರಡು ದಿನ ಸರಕು ಸಾಗಣೆಗೆ ತೊಂದರೆಯಾಗಿತ್ತು. ಆದರೆ ರಸಗೊಬ್ಬರ, ಕೀಟನಾಶಕ ಸೇರಿಂತೆ ಕೃಷಿಸಂಬಂಧಿತ ಎಲ್ಲ ಪರಿಕರಗಳನ್ನು ಅತ್ಯವಶ್ಯಕ ವಸ್ತುಗಳ ಪಟ್ಟಿಗೆ ಸೇರಿಸಿ ಉತ್ಪಾದನೆ ಹಾಗೂ ಸಾಗಣೆ ಮೇಲಿನ ನಿರ್ಬಂಧವನ್ನು  ಕೇಂದ್ರ ಸರ್ಕಾರವು ಸಂಪೂರ್ಣ ತೆಗೆದುಹಾಕಿದೆ . ರಸಗೊಬ್ಬರ ಕಾರ್ಖಾನೆಗಳು, ಗೋಡಾನುಗಳು, ಬಂದರುಗಳು, ವಿತರಣಾ ಕೇಂದ್ರಗಳ ಮಧ್ಯೆ ರಸಗೊಬ್ಬರ ಸಾಗಣೆಗೆ ಬೇಡಿಕೆಗೆ ಅನುಗುಣವಾಗಿ ಗೂಡ್ಸ್ ರೈಲುಗಳನ್ನು ಒದಗಿಸುವಂತೆ ರೇಲ್ವೆ ಇಲಾಖೆಗೆ ಕೇಂದ್ರ ಸರ್ಕಾರವು ಕಟ್ಟುನಿಟ್ಟಿನ ಆದೇಶ ನೀಡಿದೆ ಎಂದು ತಿಳಿಸಿದ್ದಾರೆ.

ಹಾಗಿಯೇ ಜಲ ಹಾಗೂ ಭೂಸಾರಿಗೆಗೆ ರಸಗೊಬ್ಬರ, ಕೀಟನಾಶಕ ಮತ್ತಿತರ ಕೃಷಿಸಂಬಂಧಿತ ಸರಕುಗಳನ್ನು ಸಾಗಣೆಗೆ ಮುಕ್ತ ಅನುಮತಿ ನೀಡಲಾಗಿದೆ. ದೇಶದ ಬಹುತೇಕ ರಸಗೊಬ್ಬರ ಕಾರ್ಖಾನೆಗಳು ಪೂರ್ಣ ಪ್ರಮಾಣದಲ್ಲಿ ಉತ್ಪಾದನೆಯಲ್ಲಿ ತೊಡಗಿವೆ. ಈ ಸಂದರ್ಭದಲ್ಲಿ ಲಾಕ್‌ಡೌನ್ ನಿಯಮಗಳನ್ನು (ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ಮುಖಗವಸು ಧರಿಸುವುದು ಇವೇ ಮುಂತಾದವು) ಕಟ್ಟುನಿಟ್ಟಾಗಿ ಅನುಸರಿಸುವಂತೆ ಸೂಚಿಸಲಾಗಿದೆ ಎಂದರು.

ದೇಶದಲ್ಲಿ  ಇನ್ನೂ ಹಲವು ತಿಂಗಳಿಗೆ ಸಾಕಾಗುವಷ್ಟು ರಸಗೊಬ್ಬರ ದಾಸ್ತಾನು ಇದೆ. ಸದ್ಯ 86.87 ಲಕ್ಷ ಮೆಟ್ರಿಕ್ ಟನ್ ಯೂರಿಯಾ ದಸ್ತಾನು ಇದೆ. ಆದಾಗ್ಯೂ ಮುಂಜಾಗ್ರತಾ ಕ್ರಮವಾಗಿ 7.57 ಲಕ್ಷ ಟನ್ ಯೂರಿಯಾ ಆಮದು ಮಾಡಿಕೊಳ್ಳಲಾಗುತ್ತಿದೆ ಎಂದು ವಿವರಿಸಿದ್ದಾರೆ.

ದೇಶಾದ್ಯಂತ ರಸಗೊಬ್ಬರ ಮಳಿಗೆಗಳೂ ತೆರೆದಿದ್ದು ಎಂದಿನಂತೆ ವಹಿವಾಟು ನಡೆಸಿವೆ. ಕರ್ನಾಟಕದಲ್ಲಿ ಸಾಗಣೆ, ಪೂರೈಕೆಗೆ ಸಂಬಂಧಿಸಿದಂತೆ ಸಮಸ್ಯೆಗಳಿದ್ದರೆ ಕೃಷಿ ಸಹಾಯವಾಣಿ 080-22212818 / 22210237 ಗೆ ಕರೆಮಾಡಿ ಬಗೆಹರಿಸಿಕೊಳ್ಳಬಹುದು. ನಾನು ಮತ್ತೆ ಸ್ಪಷ್ಟಪಡಿಸುತ್ತಿದ್ದೇನೆ. ರಸಗೊಬ್ಬರ, ಕೀಟನಾಶಕಗಳ ಕೊರತೆ ಇಲ್ಲ. ದಾಸ್ತಾನು ಸಾಕಷ್ಟಿದೆ. ಬೇಕಾದಷ್ಟು ಗೊಬ್ಬರ ಪೂರೈಸುವ ಜವಾಬ್ಧಾರಿ ನಮ್ಮದು. ರೈತಬಾಂಧವರಿಗೆ ನನ್ನ ಮನವಿ. ನೀವು ಯಾವುದೇ ರೀತಿಯ ವದಂತಿಗಳಿಗೆ ಕಿವಿಗೊಡಬೇಡಿ. ನಿರಾತಂಕವಾಗಿ ಮುಂಗಾರು ಬಿತ್ತನೆಗೆ ತಯಾರಿಮಾಡಿಕೊಳ್ಳಿ ಎಂದು ತಿಳಿಸಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಹಿಟ್‌ ಧಾರಾವಾಹಿಗಳ ನಿರ್ದೇಶಕ, ನಿರ್ಮಾಪಕ ರಾಮ್​ಜೀ