CrimeNEWSನಮ್ಮಜಿಲ್ಲೆ

ದುಷ್ಕರ್ಮಿಗಳಿಂದ ಮುಸುಕಿನ ಜೋಳದ ಬೆಳೆ ನಾಶ: ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ವಿಜಯಪಥ ಸಮಗ್ರ ಸುದ್ದಿ

ಪಿರಿಯಾಪಟ್ಟಣ : ಕೆ.ಹರಳಹಳ್ಳಿ ಗ್ರಾಮದ ಜಮೀನಿನಲ್ಲಿ ಬೆಳೆದಿದ್ದ ಮುಸುಕಿನ ಜೋಳದ ಬೆಳೆಯನ್ನು ಯಾರೋ ದುಷ್ಕರ್ಮಿಗಳು ರಾತ್ರೋರಾತ್ರಿ ಟ್ರಾಕ್ಟರ್ ಬಳಸಿ ಉತ್ತು ಹಾಕಿರುವ ಘಟನೆ ಬೈಲುಕುಪ್ಪೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ತಾಲೂಕಿನ ಕೋಮಲಾಪುರ ಗ್ರಾಮದ ಕೆ.ಎಂ.ಸ್ವಾಮಿ ಎಂಬುವವರಿಗೆ ಸೇರಿದ ಕೆ.ಹರಳಹಳ್ಳಿ ಗ್ರಾಮದ ಸರ್ವೆ ನಂಬರ್ 8 ರಲ್ಲಿ 2 ಎಕರೆ 38 ಗುಂಟೆ ಜಮೀನಿದ್ದು, ಈ ಜಮೀನಿನಲ್ಲಿ ಮುಸುಕಿನ ಜೋಳವನ್ನು ಬೆಳೆಯಲಾಗುತ್ತಿದೆ. ಆದರೆ ಕೆಲವು ಕಿಡಿಗೇಡಿಗಳು ವೈಷಮ್ಯದ ಕಾರಣದಿಂದ ಉಲುಸಾಗಿ ಬೆಳೆದಿದ್ದ ಮುಸುಕಿನ ಜೋಳವನ್ನು ರಾತ್ರೋರಾತ್ರಿ ಟ್ರ್ಯಾಕ್ಟರ್ ಬಳಸಿ ಉತ್ತು ಹಾಕಿದ್ದಾರೆ.

ಈ ಘಟನೆ ಬಗ್ಗೆ ರೈತ ಕೆ.ಎಂ.ಸ್ವಾಮಿ ಹಾಗೂ ಆತನ ಹೆಂಡತಿ ಲತಾ ಮಾತನಾಡಿ, ಕೋಮಲಾಪುರ ಗಡಿ ಭಾಗದ ಕೆ.ಹರಳಹಳ್ಳಿ ಗ್ರಾಮದ ಸರ್ವೆ ನಂಬರ್ 8 ರಲ್ಲಿ ನನಗೆ 2.38 ಎಕರೆ ಭೂಮಿಯನ್ನು ನಮ್ಮ ತಾತ ಜವರೇಗೌಡ ಎಂಬುವವರು 60 ವರ್ಷಗಳಿಂದ ಉಳುಮೆ ಮಾಡಿಕೊಂಡು ಬರುತ್ತಿದ್ದರು ನಂತರ ನಂತರ ನಮ್ಮ ತಂದೆ ಮಲ್ಲಿಯಪ್ಪನವರು ನಮೂನೆ-57 ರಲ್ಲಿ ಅಕ್ರಮ ಸಕ್ರಮ ಕಾಯಿದೆ ಅನ್ವಯ ಕಂದಾಯ ಇಲಾಖೆಯಗೆ ಅರ್ಜಿ ಸಲ್ಲಿಸಿ ಭೂ ಹಿಡುವಳಿ ಕಾಯಿದೆ ಅನ್ವಯ ನಮಗೆ ಮಂಜೂರಾತಿ ದೊರಕಿದೆ.

ಇದನ್ನು ಸಹಿಸದ ಕೆಲವು ದುಷ್ಕರ್ಮಿಗಳು ರಾತ್ರೋರಾತ್ರಿ ಜಮೀನಿಗೆ ಧಾವಿಸಿ ಮುಸುಕಿನ ಜೋಳದ ಬೆಳೆಯನ್ನು ಉತ್ತು ಹಾಕಿದ್ದಾರೆ. ಇದರಿಂದ ನನಗೆ 2 ಲಕ್ಷಕ್ಕೂ ಅಧಿಕ ಮೊತ್ತದ ಜೋಳದ ಬೆಳೆ ನಾಶವಾಗಿದೆ. ಆದ್ದರಿಂದ ಈ ಘಟನೆಗೆ ಕಾರಣರಾದವರನ್ನು ಬಂಧಿಸಿ ನನಗೆ ನಷ್ಟದ ಹಣವನ್ನು ಕೊಡಿಸಿ ತಪ್ಪಿತಸ್ಥರ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಬೈಲುಕುಪ್ಪೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಗಿ ತಿಳಿಸಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು