NEWSಮೈಸೂರುಸಂಸ್ಕೃತಿಸಿನಿಪಥ

ದಸರಾ ಸಡಗರ ಸಂಭ್ರಮ: ದೇವೇಂದ್ರನ ಅಮರಾವತಿಯಂತೆ ಕಂಗೊಳಿಸಲಿದೆ ಮೈಸೂರು

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಮೈಸೂರು ನಗರ ದಸರಾ ಸಡಗರ ಸಂಭ್ರಮದಲ್ಲಿ ತೇಲುತ್ತಿದೆ. ಈಗಾಗಲೇ ದಸರಾಕ್ಕೆ ಸಂಬಂಧಿಸಿದ ಕಾರ್ಯಕ್ರಮಗಳು ಆರಂಭವಾಗಿದ್ದು, ಅಧಿಕೃತ ದಸರಾ ಕಾರ್ಯಕ್ರಮಗಳಿಗೆ ಅ.15ರಂದು ಚಾಲನೆ ಸಿಗಲಿದ್ದು, ಆ ನಂತರ ರಾತ್ರಿ ಆಯಿತೆಂದರೆ ಇಡೀ ನಗರ ಕತ್ತಲನ್ನು ಹೊಡೆದೋಡಿಸಿ ಬೆಳಕಿನಲ್ಲಿ ಚಿತ್ತಾರ ಬರೆಯಲಿದೆ.

ಈಗಾಗಲೇ ಇಡೀ ನಗರ ದಸರಾ ಬೆಳಕಿನಲ್ಲಿ ಮಿಂದೇಳಲು ತಯಾರಾದಂತೆ ಗೋಚರಿಸುತ್ತಿದೆ, ನಗರಕ್ಕೆ ವಿದ್ಯುದ್ದೀಪ ಅಳವಡಿಸುವ ಕಾರ್ಯಗಳು ಭರದಿಂದ ನಡೆಯುತ್ತಿದೆ. ಅ.15ರ ವೇಳೆಗೆ ವಿದ್ಯುದ್ದೀಪ ಅಳವಡಿಸುವ ಕಾರ್ಯ ಮುಗಿಯಲಿದ್ದು ಅಂದು ದಸರಾಕ್ಕೆ ಚಾಲನೆ ಸಿಗುವುದರೊಂದಿಗೆ ವಿದ್ಯುದ್ದೀಪದ ಅಲಂಕಾರಕ್ಕೂ ಅಧಿಕೃತ ಚಾಲನೆ ದೊರೆಯಲಿದೆ. ಆ ನಂತರ ಸಾಂಸ್ಕೃತಿಕ ನಗರಿ ಮೈಸೂರು ಥೇಟ್ ದೇವೇಂದ್ರನ ಅಮರಾವತಿಯೇ ಧರೆಗಿಳಿದು ಬಂದಂತೆ ಗೋಚರಿಸಲಿದೆ.

ಪ್ರತಿವರ್ಷವೂ ದಸರಾ ವೇಳೆ ವಿದ್ಯುತ್ ದೀಪದ ಬೆಳಕಿನಲ್ಲಿ ಮಿಂದೇಳುತ್ತಿರುವ ನಗರಿಯನ್ನು ನೋಡುವುದೇ ಕಣ್ಣಿಗೊಂದು ಹಬ್ಬವಾಗುತ್ತಿದ್ದು, ಎಲ್ಲರ ಮೈಮನವನ್ನು ಪುಳಕಗೊಳಿಸುತ್ತಿದೆ. ಸಾಮಾನ್ಯವಾಗಿ ಹಬ್ಬಹರಿದಿನಗಳು ಬರುತ್ತಿದ್ದಂತೆಯೇ ಮೈಸೂರಿಗೆ ಮೈಸೂರೇ ಬದಲಾಗಿಬಿಡುತ್ತದೆ. ಇನ್ನು ದಸರಾದಲ್ಲಿ ಹೇಳಬೇಕೆ ಅದರ ಸಡಗರವೇ ಬೇರೆ.. ವರ್ಣಿಸಲು ಅಸಾಧ್ಯವಾಗಿ ಬಿಡುತ್ತದೆ.

ಈಗಾಗಲೇ ಐತಿಹಾಸಿಕ ಜಂಬೂಸವಾರಿಗೆ ದಿನಗಣನೆ ಆರಂಭವಾಗಿದ್ದು ಎಲ್ಲರಲ್ಲೂ ಕುತೂಹಲ ಮನೆ ಮಾಡಿದೆ. ಕಾವೇರಿ ಕಾರ್ಮೋಡ, ಬರದ ಆತಂಕದ ನಡುವೆಯೂ ಅದೆಲ್ಲವನ್ನು ಮರೆತು ನಗರದ ಜನ ದಸರಾ ಸಡಗರದಲ್ಲಿ ಮೀಯುತ್ತಿದ್ದಾರೆ. ರೈತರು, ಮಹಿಳೆಯರು, ಯುವಕರು, ಯುವತಿಯರು ಹೀಗೆ ಎಲ್ಲರಿಗೂ ದಸರಾದಲ್ಲಿ ಪಾಲ್ಗೊಳ್ಳುವ, ಮಿಂಚುವ ಮಹಾಸಡಗರ. ಒಂದು ಕಡೆ ಯುವ ಮನಸ್ಸುಗಳಿಗೆ ಲಗ್ಗೆಯಿಡುವ ಯುವ ದಸರಾ ಮನ ತಣಿಸುತ್ತಿದ್ದರೆ ಮತ್ತೊಂದೆಡೆ ಬೋಜನ ಪ್ರಿಯರಿಗೆ ವಿವಿಧ ಖಾದ್ಯಗಳನ್ನು ಉಣಬಡಿಸುತ್ತಾ ಬಾಯಿ ಚಪ್ಪರಿಸುವಂತೆ ಅಹಾರ ಮೇಳ ಮಾಡಲಿದೆ.

ಇನ್ನು ಝಗಮಗಿಸುವ ಅರಮನೆ ಸ್ವರ್ಗದ ಬಾಗಿಲು ತೆರೆದು ಸ್ವಾಗತಿಸುವಂತೆ ಮಾಡುತ್ತಿದೆ. ಇಲ್ಲಿ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮಗಳು ಮನಸೆಳೆಯುತ್ತಿವೆ. ಹಿಂದಿನ ರಾಜ ವೈಭವ ಮತ್ತೆ ಮರುಕಳಿಸಿದಂತೆ ಭಾಸವಾಗುತ್ತದೆ. ಜತೆಗೆ ನಿತ್ಯದ ಜಂಜಡವನ್ನು ಮರೆಯಿಸಿ ಒಂದು ಕ್ಷಣ ಮೈಮನ ಪುಳಕಿತವಾಗುವಂತೆ ಮಾಡಲಿದೆ.

ಸಂಜೆಯಾಗುತ್ತಿದ್ದಂತೆ ಮನೆಯಿಂದ ಹೊರಗೆ ಬರುತ್ತಿರುವ ಜನ ಎಲ್ಲೆಡೆ ಸುತ್ತಾಡಿ ಕಣ್ತುಂಬಿಸಿಕೊಂಡು ಹೋಗಲಿದ್ದು, ನಗರದ ಅಲ್ಲಲ್ಲಿ ವೃತ್ತಗಳು, ರಸ್ತೆಗಳು, ಮರಗಳು, ಕಟ್ಟಡಗಳು ಸೇರಿದಂತೆ ಎಲ್ಲೆಡೆ ವಿದ್ಯುತ್ ದೀಪಗಳನ್ನು ಅಳವಡಿಸಲಾಗಿದ್ದು, ಅವು ಮಿನುಗುವಾಗ ಕಾಣುವ ದೃಶ್ಯ ಅದ್ಭುತ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು