NEWSದೇಶ-ವಿದೇಶರಾಜಕೀಯ

ದೆಹಲಿ ಭೇಟಿ: ಗೌಪ್ಯತೆ ಬಿಟ್ಟು ಕೊಡಲು ಹಿಂದೇಟು ಹಾಕಿದ ಸಿಪಿವೈ

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸಚಿವ ಸಂಪುಟ ರಚನೆಯಾಗಿದ್ದು, ಇದರಿಂದ ಕೆಲವರು ಅಸಮಾಧಾನಗೊಂಡಿದ್ದಾರೆ. ಇದೀಗ ಅಸಮಾಧಾನಿತ ಮಾಜಿ ಸಚಿವ ಸಿ.ಪಿ. ಯೋಗೇಶ್ವರ್ ದೆಹಲಿಗೆ ಬಂದಿಳಿದಿದ್ದಾರೆ.

ಸಚಿವ ಸ್ಥಾನ ಕೈ ತಪ್ಪಿದ ಬಳಿಕ ಮೊದಲ ಬಾರಿಗೆ ದೆಹಲಿಗೆ ಬಂದಿರುವ ಯೋಗೇಶ್ವರ್, ಕರ್ನಾಟಕ ಭವನಕ್ಕೆ ತೆರಳಿದ್ದಾರೆ. ಇಂದು ಅವರು ಹೈಕಮಾಂಡ್ ನಾಯಕರ ಭೇಟಿಯಾಗುವ ಸಾಧ್ಯತೆಗಳಿವೆ. ಅಲ್ಲದೆ ಹೈಕಮಾಂಡ್ ಬಳಿ ಸಚಿವ ಸ್ಥಾನ ಕೈ ತಪ್ಪಿರುವುದಕ್ಕೆ ಅಸಮಾಧಾನ ಹೊರ ಹಾಕುವ ಸಾಧ್ಯತೆ ಕೂಡ ದಟ್ಟವಾಗಿದೆ.

ಇದೇ ವೇಳೆ ಸುದ್ದಿಗಾರರಿಗೆ ಪ್ರತಿಕ್ರಿಯಿಸಲು ಸಿಪಿವೈ ನಿರಾಕರಿಸಿದ್ದಾರೆ. ವಕೀಲರ ಭೇಟಿಗೆ ಬಂದಿರುವುದಾಗಿ ಹೇಳುವ ಮೂಲಕ ದೆಹಲಿ ಭೇಟಿ ಬಗ್ಗೆ ಗೌಪ್ಯತೆ ಬಿಟ್ಟು ಕೊಡಲು ಹಿಂದೇಟು ಹಾಕಿದ್ದಾರೆ. ಈ ಹಿನ್ನೆಲೆಯಲ್ಲಿ ಸೈನಿಕ, ದೆಹಲಿಯಲ್ಲಿ ಸೀಕ್ರೆಟ್ ಮಿಷನ್ ಆರಂಭಿಸಿದ್ರಾ ಅನ್ನೋ ಅನುಮಾನವೊಂದು ಎದ್ದಿದೆ.

ಇತ್ತ ಹೈಕಮಾಂಡ್ ಒಂದು ವೇಳೆ ಸಿ.ಪಿ.ಯೋಗೇಶ್ವರ್ ಭೇಟಿಗೆ ಸಮಯ ನೀಡಿದ್ದಲ್ಲಿ ದೆಹಲಿಗೆ ಬರುವ ಅಸಮಾಧಾನಿತರ ಸಂಖ್ಯೆ ಹೆಚ್ಚಳವಾಗಲಿದೆ. ಸಚಿವ ಸ್ಥಾನ ಸಿಗದ ನಾಯಕರು ಪದೇಪದೆ ಹೈಕಮಾಂಡ್ ಭೇಟಿಯಾಗುವ ಬೆಳವಣಿಗೆ ಹೆಚ್ಚಾಗಬಹುದು. ಈ ಹಿನ್ನೆಲೆ ಹೈಕಮಾಂಡ್ ಅವಕಾಶ ನೀಡುತ್ತಾ..? ಇಲ್ವಾ..? ಅನ್ನೋದು ಕುತೂಹಲ ಹುಟ್ಟಿದೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು