CrimeNEWSದೇಶ-ವಿದೇಶ

ದೆಹಲಿ ಮುಖ್ಯಮಂತ್ರಿ ಆಪ್ತ ಮನಿಷ್ ಸಿಸೋಡಿಯಾಗೆ ಬಿಗ್‌ ಶಾಕ್‌ ಕೊಟ್ಟ ಇಡಿ

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ದೆಹಲಿ ಉಪಮುಖ್ಯಮಂತ್ರಿ ಮನಿಷ್ ಸಿಸೋಡಿಯಾ ಅವರ ಪತ್ನಿ ಸೀಮಾ ಸಿಸೋಡಿಯಾಗೆ ಸೇರಿದ ಒಟ್ಟು 52 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಇಡಿ ಮುಟ್ಟುಗೋಲು ಹಾಕಿಕೊಂಡಿದ್ದು, ಈ ಮೂಲಕ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಆಪ್ತ ಸಿಸೋಡಿಯಾಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಿಗ್ ಶಾಕ್ ನೀಡಿದ್ದಾರೆ.

ದೆಹಲಿ ಅಬಕಾರಿ ಪಾಲಿಸಿ ಹಗರಣದಲ್ಲಿ ಸಿಸೋಡಿಯಾರನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ. ಕೆಳ ನ್ಯಾಯಾಲಯದಲ್ಲಿ ಜಾಮೀನು ಸಿಗದಿದ್ದಕ್ಕೆ ಸಿಸೋಡಿಯಾ ದೆಹಲಿ ಹೈಕೋರ್ಟ್​​​​ ಮೊರೆ ಹೋಗಿದ್ದರು. ಆದರೆ ಹೈಕೋರ್ಟ್ ಜಾಮೀನು ನೀಡಲು ನಿರಾಕರಿಸಿದ ಬೆನ್ನಲ್ಲೇ, 52 ಕೋಟಿ ಮೌಲ್ಯದ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿದೆ.

ಇನ್ನು ಮುಟ್ಟುಗೋಲು ಹಾಕಿಕೊಂಡಿರುವ ಆಸ್ತಿಯಲ್ಲಿ ಸಿಸೋಡಿಯಾ ಪತ್ನಿಗೆ ಸೇರಿದ ಎರಡು ಪ್ರಾಪರ್ಟಿಗಳು ಹಾಗೂ ಸಂಬಂಧಿ ರಾಜೇಶ್ ಜೋಶಿ ಮತ್ತು ಗೌತಮ್ ಮಲ್ಹೋತ್ರಾಗೆ ಸೇರಿದ ಆಸ್ತಿಗಳನ್ನು ಪಿಎಂಎಲ್​ ಕಾಯ್ದೆ ಅಡಿಯಲ್ಲಿ (Prevention of Money Laundering Act) ಮುಟ್ಟುಗೋಲು ಹಾಕಿಕೊಂಡಿದೆ.

ಇಡಿ ಅಧಿಕಾರಿಗಳ ಪ್ರಕಾರ, ಮನೀಸ್ ಸಿಸೋಡಿಯಾ ಬ್ಯಾಂಕ್ ಬ್ಯಾಲೆನ್ಸ್ 11.49 ಲಕ್ಷ ರೂ. ಇದೆ. ಅವರಿಗೆ ಸೇರಿದ ಬ್ರೈಂಡ್ಕೋ ಸೇಲ್ಸ್​ ಪ್ರೈವೆಟ್ ಲಿಮಿಟೆಡ್​ನ ಒಟ್ಟು ಆಸ್ತಿ 16.45 ಕೋಟಿ ಎಂದು ತಿಳಿಸಿದೆ.

Delhi Excise Policy 2021-22 ಹಗರಣದಲ್ಲಿ ಸಿಸೋಡಿಯಾ ಲಂಚ ಪಡೆದಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಈ ಸಂಬಂಧ ಸಿಸೋಡಿಯಾರನ್ನು ಸಿಬಿಐ ಅಧಿಕಾರಿಗಳು ಹಲವು ಬಾರಿ ವಿಚಾರಣೆ ನಡೆಸಿ ಫೆಬ್ರವರಿ 26 ರಂದು ಭ್ರಷ್ಟಾಚಾರ ಆರೋಪ ಪ್ರಕರಣದಲ್ಲಿ ಬಂಧಿಸಿದ್ದಾರೆ. ಸದ್ಯ ಅವರು ಸಿಬಿಐ ಮತ್ತು ಇಡಿ ಅಧಿಕಾರಿಗಳಿಂದ ತನಿಖೆ ಎದುರಿಸುತ್ತಿದ್ದಾರೆ.

Leave a Reply

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಮೆಟ್ರೋ ದರ ಏರಿಕೆಗೆ ಕೇಂದ್ರ ಸರ್ಕಾರವೇ ಹೊಣೆ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ವ್ಯಾಪಾರ ವಹಿವಾಟು ಹೆಚ್ಚಿಸಿ, ಉತ್ಪಾದನೆ ಉತ್ತೇಜಿಸುವ ಸರ್ಕಾರದ ಬದ್ಧತೆ ಶ್ಲಾಘನೀಯ: ಕಾಸಿಯಾ ಅಧ್ಯಕ್ಷ ರಾಜಗೋಪಾಲ್ ಮೈಕ್ರೊ ಫೈನಾನ್ಸ್ ಸುಗ್ರಿವಾಜ್ಞೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಂಕಿತ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ ಕರಡಿಗೆ ನಾಗರೀಕರಿಂದ ಬರುವ ಸಲಹೆಗಳ ಸೇರಿಸಿ ಅಂತಿಮ: ರಿಜ್ವಾನ್ ಹರ್ಷದ್ ಎಸ್ಸಿಎಸ್‌ಪಿ, ಟಿಎಸ್ಪಿ ವಿಶೇಷ ಯೋಜನೆ ಫೆ. ಅಂತ್ಯದೊಳಗೆ ಶೇ.100 ರಷ್ಟು ಪ್ರಗತಿ ಸಾಧಿಸಿರಬೇಕು: ಅಧಿಕಾರಿಗಳಿಗೆ ಡಿಸಿ ಆ... ರೈತರ ನಿರಂತರ ಹೋರಾಟಕ್ಕೆ ನಾಳೆಗೆ ವರ್ಷ: ಆದರೂ ಕಿವಿಗೊಡದ ಸರ್ಕಾರ KSRTC: ಫೇಕ್ ಫೋನ್‌ ಪೇ/ UPI ಆಪ್‌ಗಳಿಂದ ದಿನನಿತ್ಯ ನಿರ್ವಾಹಕರಿಗೆ ಆರ್ಥಿಕ ಬರೆ!! KKRTC ಬಸ್‌ನಲ್ಲಿ ಲೈಂಗಿಕ ಕಿರುಕುಳ ನೀಡಿದ ಕಂಡಕ್ಟರ್‌ನಿಂದ ದೂರು ಹಿಂಪಡೆಯುವಂತೆ ಬೆದರಿಕೆ-ಆರೋಪ KSRTC ಅಭಿವೃದ್ಧಿಗೆ ಬಜೆಟ್‌ನಲ್ಲಿ ಅನುದಾನ - ಸಿಎಂ ಜತೆ ಸಚಿವ ರಾಮಲಿಂಗಾರೆಡ್ಡಿ ಚರ್ಚೆ ಬಜೆಟ್‌ನಲ್ಲಿ ನಿಮಗೆ ಸಿಹಿ ಸುದ್ದಿ ಇದೆ: KSRTC ಅಧಿಕಾರಿಗಳಿಗೆ ಸಾರಿಗೆ ಸಚಿವರ ಭರವಸೆ