NEWS

ರಾಜ್ಯದಲ್ಲಿ ಕೊರೊನಾ ನಿಯಂತ್ರಣದಲ್ಲಿದೆ

ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್‌ ಅಭಿಮತ

ವಿಜಯಪಥ ಸಮಗ್ರ ಸುದ್ದಿ

ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಕೊರೊನಾ ಸೋಂಕು ಇಡೀ ದೇಶಕ್ಕೆ ಹೋಲಿಸಿದರೆ ನಿಯಂತ್ರಣದಲ್ಲಿ ಇದ್ದು ಹಿಡಿತದಲ್ಲಿ ಇಟ್ಟುಕೊಳ್ಳಲು ಸಾಧ್ಯವಾಗಿದೆ ಎಂದು ವೈದ್ಯಕೀಯ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ಜಿಲ್ಲಾ ಕೇಂದ್ರದ ಮರಳು ಸಿದ್ದೇಶ್ವರ ದೇವಾಲಯದ ಬಳಿ ಸಂಬಾರಿ ಸ್ವಾಬ್ ಟೆಸ್ಟಿಂಗ್ ಘಟಕಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದರು.

ರಾಜ್ಯದಲ್ಲಿ ಒಟ್ಟಾರೆ ಇದುವರೆಗೂ 520 ಪ್ರಕರಣಗಳು ದಾಖಲಾಗಿವೆ. ಆ ಪೈಕಿ 198 ಮಂದಿ ಈಗಾಗಲೇ ಗುಣಮುಖರಾಗಿ ಮನೆಗೆ ಮರಳಿದ್ದಾರೆ. ಇನ್ನು 20 ಮಂದಿ ನಿಧನರಾಗಿದ್ದಿ,  ರಾಜ್ಯದಲ್ಲಿ 302 ಪ್ರಕರಣಗಳು ಆಕ್ಟೀವ್ ಕೇಸ್‌ಗಳು ಇವೆ ಎಂದು ವಿವರಿಸಿದ್ದರು.

ಜಿಲ್ಲೆಯಲ್ಲಿ 18 ಸೋಂಕಿತರ ಪೈಕಿ ಇಬ್ಬರು ನಿಧನರಾಗಿದ್ದಾರೆ. 11 ಮಂದಿ ಗುಣಮುಖರಾಗಿದ್ದಾರೆ. 5 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. 15 ಸೋಂಕಿತರಿಗಿಂತ ಹೆಚ್ಚಾಗಿರುವ ಜಿಲ್ಲೆಗಳನ್ನು ರೆಡ್‌ಜೋನ್ ವಲಯವಾಗಿ ಗುರುತಿಸಲಾಗುತ್ತದೆ. ಆದರೆ ಜಿಲ್ಲೆಯಲ್ಲಿ ಸದ್ಯ 5 ಪ್ರಕರಣಗಳು ಮಾತ್ರ ಇವೆ ಎಂದರು.

ನೆರೆಯ ಆಂಧ್ರಪ್ರದೇಶದ ಹಿಂದೂಪುರ ಸಂಪೂರ್ಣ ರೆಡ್‌ಜೋನ್ ಆಗಿರುವುದರಿಂದ ಆಂಧ್ರದ ಗಡಿಯಲ್ಲಿ ಜಿಲ್ಲೆ ಇರುವುದರಿಂದ ಮೇ 3 ರ ವರೆಗೂ ಲಾಕ್‌ಡೌನ್ ಮುಂದುವರಿಸಲಾಗುವುದು.  ಅದೇ ರೀತಿ ಗೌರಿಬಿದನೂರು ಹಾಗೂ ಚಿಕ್ಕಬಳ್ಳಾಪುರ ನಗರದಲ್ಲಿ ಜಾರಿಯಲ್ಲಿರುವ ಸೀಲ್‌ ಡೌನ್‌ನ್ನು ಮುಂದುವರಿಸಲಾಗುವುದು ತಿಳಿಸಿದರು.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ