NEWSಆರೋಗ್ಯನಮ್ಮಜಿಲ್ಲೆ

ಧಾರವಾಡದಲ್ಲೂ ಓರ್ವ ವ್ಯಕ್ತಿಯಲ್ಲಿ ಕೊರೊನಾ ದೃಢ

ರಾಜ್ಯದಲ್ಲಿ 21ಕ್ಕೇರಿದ ಕೊರೊನಾ ಪೀಡಿತರ ಸಂಖ್ಯೆ l ಮನೆಲೇ ಇದ್ದು ರೋಗ ಓಡಿಸಿ

ವಿಜಯಪಥ ಸಮಗ್ರ ಸುದ್ದಿ

ಧಾರವಾಡ: ಆಸ್ಟ್ರೇಲಿಯಾ, ದುಬೈ,ಮಸ್ಕತ್ ಹಾಗೂ ಗೋವಾ ಮೂಲಕ ಧಾರವಾಡ ನಗರಕ್ಕೆ ಆಗಮಿಸಿದ್ದ   ಓರ್ವ ವ್ಯಕ್ತಿಯಲ್ಲಿ  ಕೋವಿಡ್ 19  ಪಾಸಿಟಿವ್ ಇರುವುದು, ಪ್ರಯೋಗಾಲಯ ವರದಿಯಿಂದ ದೃಢಪಟ್ಟಿದೆ  ಎಂದು ಧಾರವಾಡ ಜಿಲ್ಲಾಧಿಕಾರಿ ದೀಪಾ ಚೋಳನ್ ತಿಳಿಸಿದ್ದಾರೆ.

ವಿದೇಶ ಪ್ರವಾಸದಿಂದ ಆಗಮಿಸಿದ್ದ ಈ ವ್ಯಕ್ತಿಯು ಮಾ.12 ರಂದು ಧಾರವಾಡ ನಗರಕ್ಕೆ ಆಗಮಿಸಿದ್ದರು.ಶಂಕಿತ ಕೋವಿಡ್ 19 ರ ರೋಗಲಕ್ಷಣಗಳು ಕಂಡು ಬಂದ ಹಿನ್ನೆಲೆಯಲ್ಲಿ ಮಾ.18 ರಂದು ಅವರು ಖಾಸಗಿ ಆಸ್ಪತ್ರೆಯೊಂದಕ್ಕೆ ಚಿಕಿತ್ಸೆಗಾಗಿ ದಾಖಲಾಗಿದ್ದರು. ರೋಗ ಲಕ್ಷಣಗಳು ಕಂಡು ಬಂದ ಹಿನ್ನೆಲೆಯಲ್ಲಿ ರೋಗ ಲಕ್ಷಣಗಳಿಗೆ ಅನುಗುಣವಾಗಿ ಅದೇ ದಿನ ಅವರ ಗಂಟಲು ಮತ್ತು ಮೂಗಿನ ದ್ರವದ ಮಾದರಿಯನ್ನು ತಪಾಸಣೆಗಾಗಿ ಶಿವಮೊಗ್ಗದ VDRL ಪ್ರಯೋಗಾಲಯಕ್ಕೆ ಕಳುಹಿಸಿ ಕೊಡಲಾಗಿತ್ತು. ಇದೀಗ ಪ್ರಯೋಗಾಲಯ ವರದಿ ಕೋವಿಡ್ 19 ಪಾಸಿಟಿವ್ ಎಂದಿ  ಬಂದಿದೆ.

ಹೊಸಯಲ್ಲಾಪುರ ಸುತ್ತಮುತ್ತ ಕಂಟೈನಮೆಂಟ್ ಪ್ರದೇಶ ಘೋಷಣೆ

ಸೋಂಕು ದೃಢಪಟ್ಟಿರುವ ವ್ಯಕ್ತಿಯು ಧಾರವಾಡ ನಗರದ ಹೊಸಯಲ್ಲಾಪುರ ಪ್ರದೇಶಕ್ಕೆ ಸೇರಿದ 33 ವರ್ಷ ವಯಸ್ಸಿನ ಪುರುಷನಾಗಿದ್ದಾರೆ. ಹೊಸಯಲ್ಲಾಪುರ ಪ್ರದೇಶವನ್ನು ಕಂಟೈನಮೆಂಟ್ ಎಂದು ಘೋಷಿಸಲಾಗಿದ್ದು, ಅಲ್ಲಿಂದ ಸುತ್ತಮುತ್ತಲಿನ 3 ಕಿಮೀ ವ್ಯಾಪ್ತಿಯಲ್ಲಿ ಸಾರ್ವಜನಿಕರ ಆಗಮನ ಮತ್ತು ನಿರ್ಗಮನವನ್ನು ನಿರ್ಬಂಧಿಸಲಾಗಿದೆ.

ಈ  ವ್ಯಕ್ತಿಗೆ ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಈಗಾಗಲೇ ಚಿಕಿತ್ಸೆ ನೀಡಲಾಗುತ್ತಿದೆ. ಪ್ರಕರಣ ಕಂಡು ಬಂದ ಸ್ಥಳದ ಸುತ್ತಮುತ್ತ ನಿಯಮಾನುಸಾರ ಸರ್ವೇ ಕಾರ್ಯ  ಕೈಗೊಳ್ಳಲಾಗಿದೆ. ಈ ವ್ಯಕ್ತಿಯ ಸಂಪರ್ಕಕ್ಕೆ ಬಂದವರ ಮಾಹಿತಿ ( Contact Tracing) ಸಂಗ್ರಹಿಸಲಾಗುತ್ತಿದೆ.

ಸಾಮಾಜಿಕ ಅಂತರ, ಶುಚಿತ್ವ ಪಾಲನೆಗೆ ಒತ್ತು ನೀಡಿ

ಜಿಲ್ಲೆಯಾದ್ಯಂತ ಈಗಾಗಲೇ ಕೊರೊನಾ ವೈರಸ್ ನಿಯಂತ್ರಣಕ್ಕೆ ಎಲ್ಲಾ ಅಗತ್ಯ ಕ್ರಮ ಕೈಗೊಳ್ಳಲಾಗಿದೆ.ಜನತೆ ಭಯಕ್ಕೆ ಒಳಗಾಗಬಾರದು, ಸಾಮಾಜಿಕ ಅಂತರ ಹಾಗೂ ಶುಚಿತ್ವಕ್ಕೆ ಹೆಚ್ಚು ಒತ್ತು ನೀಡಬೇಕು.ಸಾರ್ವಜನಿಕರು ಸಾಧ್ಯವಾದಷ್ಟು  ತಮ್ಮ  ಮನೆಗಳಲ್ಲಿಯೇ ಇರುವುದರ ಮೂಲಕ ವೈರಾಣು ತಡೆಯಲು ತಮ್ಮ ಸಹಕಾರ ನೀಡಬೇಕು  ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ