NEWSಉದ್ಯೋಗದೇಶ-ವಿದೇಶ

ನೌಕರರಿಗೆ ಗುಡ್‌ನ್ಯೂಸ್‌ ಕೊಟ್ಟ ಆಂಧ್ರ ಸರ್ಕಾರ: ನಿವೃತ್ತಿ ವಯಸ್ಸು 62ರಿಂದ 65ಕ್ಕೆ ಏರಿಕೆ

ವಿಜಯಪಥ ಸಮಗ್ರ ಸುದ್ದಿ

ಅಮರಾವತಿ: ಕಳೆದ ವರ್ಷವಷ್ಟೇ ಸರ್ಕಾರಿ ನೌಕರರ ನಿವೃತ್ತಿ ವಯಸ್ಸನ್ನು 60 ವರ್ಷದಿಂದ 62 ವರ್ಷಕ್ಕೆ ಏರಿಸುವ ಸುಗ್ರೀವಾಜ್ಞೆ ಹೊರಡಿಸಿದ್ದ ಆಂಧ್ರಪ್ರದೇಶದ ಜಗನ್ ಮೋಹನ್ ರೆಡ್ಡಿ ಸರ್ಕಾರ ಇಂದು ಮತ್ತೆ 62ರಿಂದ 65 ವರ್ಷಕ್ಕೆ ಹೆಚ್ಚಿಸಿ ಆದೇಶ ಹೊರಡಿಸಿದೆ.

ಈ ನಿಯಮ ಜನವರಿ 1, 2023ರಿಂದಲೇ ಜಾರಿಗೆ ಬರುವಂತೆ ಕ್ರಮವಹಿಸಲಾಗಿದೆ ಎಂದು ಸರ್ಕಾರ ತಿಳಿಸಿದೆ. ಸರ್ಕಾರದ ನಿರ್ಧಾರವು ನೌಕರರಲ್ಲೂ ಅಚ್ಚರಿ ಮೂಡಿಸಿದೆ. ನಿವೃತ್ತಿ ವಯಸ್ಸನ್ನು ಹೆಚ್ಚಿಸಿ ಎಂದು ಸರ್ಕಾರಿ ನೌಕರರು ಯಾರೂ ಪ್ರತಿಭಟನೆ ಮಾಡಿಲ್ಲ. ಆದರೂ ಸರ್ಕಾರ ನಿವೃತ್ತಿ ವಯಸ್ಸನ್ನು ಹೆಚ್ಚಿಸಿದೆ.

ಈ ಹಿಂದೆ ತೆಲಂಗಾಣ ಮತ್ತು ಮಧ್ಯಪ್ರದೇಶದಲ್ಲೂ ನೌಕರರ ನಿವೃತ್ತಿ ವಯಸ್ಸನ್ನು ಏರಿಸಿವೆ. ತೆಲಂಗಾಣದಲ್ಲಿ ಸರ್ಕಾರಿ ನೌಕರರ ನಿವೃತ್ತಿ ವಯಸ್ಸನ್ನು 58 ರಿಂದ 61ಕ್ಕೆ ಹೆಚ್ಚಿಸಲಾಗಿದೆ. ಮಧ್ಯಪ್ರದೇಶದಲ್ಲಿ ನಿವೃತ್ತಿ ವಯಸ್ಸು 62. ಕೇಂದ್ರ ಸರ್ಕಾರದಲ್ಲಿ ಸರ್ಕಾರಿ ನೌಕರರ ನಿವೃತ್ತಿ ವಯಸ್ಸು 60 ಆಗಿದೆ. ಆದರೆ ಇದೀಗ ಆಂಧ್ರಪ್ರದೇಶ ಸರ್ಕಾರ ನಿವೃತ್ತಿ ವಯಸ್ಸನ್ನು 3 ವರ್ಷ ಮುಂದೆ ಹಾಕಿದೆ.

ಕಳೆದ ವರ್ಷ 2022ರ ಜನವರಿ 1ರಿಂದ ಜಾರಿಗೆ ಬರುವಂತೆ 60 ವರ್ಷವಿದ್ದ ನಿವೃತ್ತಿ ವಯಸ್ಸನ್ನು 62ಕ್ಕೆ ಏರಿಕೆ ಮಾಡಿ ಆದೇಶ ಹೊರಡಿಸಲಾಗಿತ್ತು. ಆ ಆದೇಶ ಹೊರಡಿಸಿ ಒಂದು ವರ್ಷ ತುಂಬುತಿದ್ದಂತ್ತೆ ಮತ್ತೆ 3 ಮೂರು ವರ್ಷ ಹೆಚ್ಚಿಸಿ ಇಂದು ಆದೇಶ ಹೊರಡಿಸಿದ್ದು, ನೌಕರರಿಗೆ ಸಂತಸ ಹೆಚ್ಚಿಸಿದೆ.

ಆದರೆ, ಕೆಲವರು ದಕ್ಷಿಣ ರಾಜ್ಯದ ಆರ್ಥಿಕ ಸ್ಥಿತಿ ಕ್ಷೀಣಿಸುತ್ತಿರುವುದರಿಂದ ಆಂಧ್ರ ರಾಜ್ಯದ ನೌಕರರ ನಿವೃತ್ತಿ ವಯಸ್ಸನ್ನು 65ಕ್ಕೆ ಹೆಚ್ಚಿಸುವ ಕ್ರಮವನ್ನು ತೆಗೆದುಕೊಳ್ಳಲಾಗಿದೆ ಎಂದು ಹೇಳಿದ್ದಾರೆ.

ಆಂಧ್ರಪ್ರದೇಶದ ಸರ್ಕಾರಿ ನೌಕರರ ಭವಿಷ್ಯ ನಿಧಿ, ಗ್ರಾಚ್ಯುಯಿಟಿ ಮತ್ತು ಇತರ ಪ್ರಯೋಜನಗಳು ಸರಾಸರಿ ಸುಮಾರು 30 ಲಕ್ಷ ರೂ. ಆಗಿದೆ. ಅನೇಕ ಸಿಬ್ಬಂದಿಗೆ ನಿವೃತ್ತಿ ಪ್ರಯೋಜನಗಳ ಪಾವತಿಯನ್ನು ಎರಡು ವರ್ಷಗಳವರೆಗೆ ಮುಂದೂಡಬಹುದು. ಪಿಂಚಣಿ ಹಾಗೂ ಇತರ ನಿವೃತ್ತಿ ಪ್ರಯೋಜನಗಳ ಮೇಲೆ ಸರ್ಕಾರವು ಮಾಡುವ ವೆಚ್ಚವನ್ನು ಮುಂದೂಡುತ್ತದೆ ಎಂದು ಹೇಳುತ್ತಿದ್ದಾರೆ.

ಆದೇಶದ ಪ್ರತಿಗಾಗಿ ಇಲ್ಲಿ ಕ್ಲಿಕ್‌ಮಾಡಿ: GO MS NO15. ANDHRA PRADESH

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು