NEWSಶಿಕ್ಷಣ-

ನಾಗಮಂಗಲ: ಕ್ರೀಡೆಯಿಂದ ದೈಹಿಕ ಮಾನಸಿಕ ಸದೃಢತೆ-ಕ್ಷೇತ್ರ ಶಿಕ್ಷಣಾಧಿಕಾರಿ ಯೋಗೇಶ್

ವಿಜಯಪಥ ಸಮಗ್ರ ಸುದ್ದಿ

ನಾಗಮಂಗಲ: ಕ್ರೀಡೆ ಕೇವಲ ಆಟವಾಗದೆ ಮಕ್ಕಳ ದೈಹಿಕ ಮಾನಸಿಕ ಸದೃಢತೆ ಹಾಗೂ ವ್ಯಕ್ತಿತ್ವ ವಿಕಸನದ ಬೆಸುಗೆಯಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಯೋಗೇಶ್ ಅಭಿಪ್ರಾಯಪಟ್ಟಿದ್ದಾರೆ.

ಅವರು ಇಂದು ನಾಗಮಂಗಲ ತಾಲೂಕು ದೇವಲಾಪುರ ಹೋಬಳಿ ಕೇಂದ್ರದಲ್ಲಿ ತಾಲೂಕಿನಲ್ಲಿ ಪ್ರಥಮವಾಗಿ 2024 -25 ನೇ ಸಾಲಿನ ದೇವಲಾಪುರ ವೃತ್ತದ ಕೆಪಿಎಸ್ ಶಾಲೆಯ ಕ್ರೀಡಾಂಗಣದಲ್ಲಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು.

ಮಕ್ಕಳು ಶಾಲಾ ಅವಧಿಯಲ್ಲಿ ಕೇವಲ ವ್ಯಾಸಂಗ ಆಲೋಚನೆ ಅಲ್ಲದೆ ಅಭ್ಯಾಸದ ಜತೆಗೆ ಕ್ರೀಡೆಯನ್ನ ಒಂದು ಪಠ್ಯವಾಗಿ ಅಳವಡಿಸಿಕೊಂಡು ತಮ್ಮಲ್ಲಿರುವ ಸೂಕ್ತ ಪ್ರತಿಭೆ ಅನಾವರಣಗೊಂಡಾಗ ಇಂತಹ ಕ್ರೀಡಾಕೂಟಗಳಲ್ಲಿ ಭಾಗವಹಿಸಿ. ಸೋಲು ಗೆಲುವುಗಳನ್ನ ಸಮಾನವಾಗಿ ಸ್ವೀಕರಿಸಿ ತಮ್ಮ ಕ್ರೀಡಾ ಪ್ರದರ್ಶನದೊಂದಿಗೆ ಆರೋಗ್ಯ ಮಾನಸಿಕ ದೃಢತೆ ಹಾಗೂ ಸ್ನೇಹ ಪರಂಪರೆಯ ಬೆಸುಗೆ ಬೆಳೆಯಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.

ಕ್ರೀಡೆ ವಿದ್ಯಾರ್ಥಿಗಳು ತಮ್ಮ ತಮ್ಮ ಓದಿನ ಅಂಕಗಳಂತೆ ಕ್ರೀಡಾ ಅಂಕವನ್ನ ಪಡೆಯುಲು ಹಾಗೂ ಕ್ರೀಡಾಕೂಟದಲ್ಲಿ ದೈಹಿಕ ಆರೋಗ್ಯಕರ ಬೆಳವಣಿಗೆಗೆ ಭಾಗವಹಿಸುವ ಮುಖಾಂತರ ತಮ್ಮ ಶಾಲೆ ತಮ್ಮ ತಾಲೂಕು ಜಿಲ್ಲೆಯ ಕೀರ್ತಿ ಬೆಳಗಲು ಉತ್ಸಹಕಾರಾಗಿ ಭಾಗವಹಿಸುವಂತೆ ಕರೆ ನೀಡಿದರು.

ಕ್ರೀಡಾಕೂಟದ ಅಧ್ಯಕ್ಷತೆಯನ್ನು ಶಾಲಾ ಸಮಿತಿಯ ಅಧ್ಯಕ್ಷ ಸುರೇಶ್ ವಹಿಸಿದ್ದು ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ರುದ್ರೇಶ್ ಕಾರ್ಯದರ್ಶಿ ಮಂಜೇಗೌಡ ಶಿಕ್ಷಣ ಸಂಯೋಜಕರುಗಳಾದ ಡಿಪಿ ಗಿರೀಶ್ ಸಿದ್ದೇಶ್ ಇದ್ದರು.

ಸಮಾರಂಭದಲ್ಲಿ ತಾಲೂಕು ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷರಾದ ರತ್ನಮ್ಮ, ಸಮೂಹ ಸಂಪನ್ಮೂಲ ವ್ಯಕ್ತಿಗಳಾದ ಶಿವ ಸ್ವಾಮಿ, ಉಗ್ರೇಗೌಡ, ದೈಹಿಕ ಶಿಕ್ಷಣ ಪರೀಕ್ಷಕರಾದ ಸುರೇಶ್ ಹಾಗೂ ಶಿಕ್ಷಣ ಸಂಯೋಜಕರುಗಳು ಮತ್ತೆ ಶಾಲಾ ಸಮಿತಿಯ ಸದಸ್ಯರು, ತಾಲೂಕಿನ ದೈಹಿಕ ಶಿಕ್ಷಕರು ಉಪಸ್ಥಿತರಿದ್ದರು. ಕಾರ್ಯಕ್ರಮದ ನಿರೂಪಣೆಯನ್ನು ಶಿಕ್ಷಕಿ ಮಂಜುಳಾ ಅವರು ನೆರವೇರಿಸಿದರೆ, ಸಂತೋಷ್ ವಂದಿಸಿದರು.

Leave a Reply

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಮೆಟ್ರೋ ದರ ಏರಿಕೆಗೆ ಕೇಂದ್ರ ಸರ್ಕಾರವೇ ಹೊಣೆ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ವ್ಯಾಪಾರ ವಹಿವಾಟು ಹೆಚ್ಚಿಸಿ, ಉತ್ಪಾದನೆ ಉತ್ತೇಜಿಸುವ ಸರ್ಕಾರದ ಬದ್ಧತೆ ಶ್ಲಾಘನೀಯ: ಕಾಸಿಯಾ ಅಧ್ಯಕ್ಷ ರಾಜಗೋಪಾಲ್ ಮೈಕ್ರೊ ಫೈನಾನ್ಸ್ ಸುಗ್ರಿವಾಜ್ಞೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಂಕಿತ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ ಕರಡಿಗೆ ನಾಗರೀಕರಿಂದ ಬರುವ ಸಲಹೆಗಳ ಸೇರಿಸಿ ಅಂತಿಮ: ರಿಜ್ವಾನ್ ಹರ್ಷದ್ ಎಸ್ಸಿಎಸ್‌ಪಿ, ಟಿಎಸ್ಪಿ ವಿಶೇಷ ಯೋಜನೆ ಫೆ. ಅಂತ್ಯದೊಳಗೆ ಶೇ.100 ರಷ್ಟು ಪ್ರಗತಿ ಸಾಧಿಸಿರಬೇಕು: ಅಧಿಕಾರಿಗಳಿಗೆ ಡಿಸಿ ಆ... ರೈತರ ನಿರಂತರ ಹೋರಾಟಕ್ಕೆ ನಾಳೆಗೆ ವರ್ಷ: ಆದರೂ ಕಿವಿಗೊಡದ ಸರ್ಕಾರ KSRTC: ಫೇಕ್ ಫೋನ್‌ ಪೇ/ UPI ಆಪ್‌ಗಳಿಂದ ದಿನನಿತ್ಯ ನಿರ್ವಾಹಕರಿಗೆ ಆರ್ಥಿಕ ಬರೆ!! KKRTC ಬಸ್‌ನಲ್ಲಿ ಲೈಂಗಿಕ ಕಿರುಕುಳ ನೀಡಿದ ಕಂಡಕ್ಟರ್‌ನಿಂದ ದೂರು ಹಿಂಪಡೆಯುವಂತೆ ಬೆದರಿಕೆ-ಆರೋಪ KSRTC ಅಭಿವೃದ್ಧಿಗೆ ಬಜೆಟ್‌ನಲ್ಲಿ ಅನುದಾನ - ಸಿಎಂ ಜತೆ ಸಚಿವ ರಾಮಲಿಂಗಾರೆಡ್ಡಿ ಚರ್ಚೆ ಬಜೆಟ್‌ನಲ್ಲಿ ನಿಮಗೆ ಸಿಹಿ ಸುದ್ದಿ ಇದೆ: KSRTC ಅಧಿಕಾರಿಗಳಿಗೆ ಸಾರಿಗೆ ಸಚಿವರ ಭರವಸೆ