NEWSನಮ್ಮಜಿಲ್ಲೆನಮ್ಮರಾಜ್ಯ

ನಾಗಮಂಗಲ ವೃದ್ಧೆಯ ಕಷ್ಟಕ್ಕೆ ಸ್ಪಂದಿಸಿದ ಎಚ್‌ಡಿಕೆ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಮಂಡ್ಯ: ನಾಗಮಂಗಲದ ಕಲ್ಲುದೇವನಹಳ್ಳಿಗೆ ಹೋಗಿಬರುವಾಗ ವೃದ್ಧೆಯೊಬ್ಬರು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರ ಕಾರಿಗೆ ಕೈ ತೋರಿಸುವ ಮೂಲಕ ತಡೆದು ತನ್ನ ಕಷ್ಟವನ್ನು ಹೇಳಿಕೊಂಡರು. ಅವರ ಕಷ್ಟಕ್ಕೆ ಸ್ಪಂದಿಸಿ ನೆರವಾಗುವ ಭರವಸೆ ನೀಡಿದ್ದಾರೆ.

ವೃದ್ಧೆಗೆ ಮೂವರು ಹೆಣ್ಣುಮಕ್ಕಳಿದ್ದು, ಈ ಹಿಂದೆಯೇ ಪತಿ ತೀರಿಕೊಂಡಿದ್ದಾರೆ. ಆ ಮೂವರು ಮಕ್ಕಳಲ್ಲಿ ಒಬ್ಬರಿಗೆ ಮದುವೆಯಾಗಿದೆ. ಇನ್ನುಳಿದ ಇಬ್ಬರಿಗೆ ಮದುವೆ ಆಗಿಲ್ಲ. ಅವರು ಜೀವನ ನಿರ್ವಾಹಣೆಗಾಗಿ ಬೆಂಗಳೂರಿನಲ್ಲಿ ದುಡಿಯುತ್ತಿದ್ದಾರೆ.

ಇನ್ನು ನಾನು ಗ್ರಾಮದಲ್ಲೇ ಒಬ್ಬಳೆ ಇದ್ದೇನೆ ನಮಗೆ ತುಂಬ ಕಷ್ಟ. ನಮ್ಮ ಎರಡು ಮಕ್ಕಳಿಗೂ ಮದುವೆಯಾಗಿಲ್ಲ ನೀವು ಸಹಾಯ ಮಾಡಿದರೆ ನಮ್ಮ ಕಷ್ಟ ಸ್ವಲ್ಪ ಮಟ್ಟಿಗಾದರೂ ದೂರವಾಗಲಿದೆ ಎಂದು ಅಳಲು ತೋಡಿಕೊಂಡರು. ಅದಕ್ಕೆ ಸ್ಪಂದಿಸಿದ ಕುಮಾರಸ್ವಾಮಿ ಆಕೆಯ ಮಕ್ಕಳಿಗೆ ಕೆಸಲ ಕೊಡಿಸುವ ಭರವಸೆ ನೀಡಿದರು.

ನಾಗಮಂಗಲದ ಕಲ್ಲುದೇವನಹಳ್ಳಿಗೆ ಹೋಗಿಬರುವಾಗ ವೃದ್ಧೆಯೊಬ್ಬರು ಕೈ ಅಡ್ಡ ಹಾಕಿ ನನ್ನ ಕಾರು ನಿಲ್ಲಿಸಿದರು. ಏನೆಂದು ವಿಚಾರಿಸುವ ಹೊತ್ತಿಗೆ ತನ್ನ ಕಷ್ಟವನ್ನೆಲ್ಲ ನನ್ನೆದುರು ಹಂಚಿಕೊಂಡರು. ನನ್ನ ಬಳಿ ಹೇಳಿಕೊಂಡರೆ ಕಷ್ಟ ನೀಗಬಹುದು ಎಂಬುದು ಆಕೆಯ ವಿಶ್ವಾಸ. ಕುಮಾರಸ್ವಾಮಿ ನಮ್ಮ ಕಷ್ಟ ನಿವಾರಿಸಬಲ್ಲ ಎಂಬುದು ಇಂಥ ಅಸಂಖ್ಯ ಜನರ ಅಭಿಪ್ರಾಯವೂ ಹೌದು ಎಂದು ಈ ಬಗ್ಗೆ ಕುಮಾರಸ್ವಾಮಿ ಅವರು ತಮ್ಮ ಟ್ವೀಟ್‌ ಮೂಲಕ ತಿಳಿಸಿದ್ದಾರೆ.

ಇನ್ನು ವೃದ್ಧೆಯ ನಿರೀಕ್ಷೆಯಂತೆ ಆಕೆಯ ಮಗಳಿಗೆ ಉದ್ಯೋಗ ಕೊಡಿಸುವ ಭರವಸೆಯನ್ನು ನಾನೂ ನೀಡಿದ್ದೇನೆ. ಜನರ ಇಂಥ ನಿರೀಕ್ಷೆಗಳು, ನಂಬಿಕೆಗಳು, ಅವರಿಗೆ ನೆರವಾಗಬೇಕು ಎಂಬ ನನ್ನ ಅದಮ್ಯ ಹಂಬಲವೇ ನಾನು ಇನ್ನೂ ರಾಜಕೀಯವಾಗಿ ಉಳಿಯುವಂತೆ ಮಾಡಿದೆ. ಜನರ ಈ ಮಟ್ಟದ ಪ್ರೀತಿ, ವಿಶ್ವಾಸ, ನಂಬಿಕೆ, ನಿರೀಕ್ಷೆಗಳಿಗೆ ನಾನು ಸದಾ ಋಣಿಯಾಗಿರುತ್ತೇನೆ ಎಂದು ಹೇಳಿದ್ದಾರೆ.

Leave a Reply

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
KSRTC ತುಮಕೂರು: ಡಿಸಿ ಚಂದ್ರಶೇಖರ್ ಅಮಾನತಿಗೆ ದೂರುಕೊಟ್ಟು ಎಂಡಿಗೆ ಒತ್ತಾಯ KSRTC ಅಧಿಕಾರಿಗಳ ಕಳ್ಳಾಟಕ್ಕೆ ಬ್ರೇಕ್‌: HRMS ತಂತ್ರಾಂಶದ ಮೂಲಕವೇ ರಜೆ ಅರ್ಜಿ ಸಲ್ಲಿಸಬೇಕು- ಮುಖ್ಯ ಸಿಬ್ಬಂದಿ ವ್ಯವಸ... KSRTC ಉತ್ತಮ ಸಾಧನೆ ತೋರಿದ ಡಿಸಿಗಳು, ಉಸ್ತುವಾರಿ ಅಧಿಕಾರಿಗಳು, ಘಟಕ ವ್ಯವಸ್ಥಾಪಕರಿಗೆ ನಗದು ಪುರಸ್ಕಾರ ಸಾರಿಗೆ ಬಸ್‌ನಲ್ಲಿ ಉಚಿತ ಪ್ರಯಾಣ- ನಿಲ್ದಾಣಕ್ಕೂ ಮೊದಲೆ ಇಳಿದ ಮಹಿಳೆ ಪರ ನಿಂತು ನಾನು ಪೊಲೀಸ್‌ ಎಂದಳು!! KSRTC ಚಾಲನಾ ಸಿಬ್ಬಂದಿಗಳು ಅಮ್ಮನ್.., ಅಕ್ಕನ್.. ಅಂತ ಬೈಸಿಕೊಳ್ಳೋದಕ್ಕೆ ಇರುವವರಲ್ಲ: ಶಿಲ್ಪ ಆರ್‌.ಗೌಡ ಗೆದ್ದಲು ಹಿಡಿದು ನುಸಿಯಾದ ಕೆನರಾ ಬ್ಯಾಂಕ್‌ ಲಾಕರ್‌ನಲ್ಲಿ ಇಟ್ಟಿದ್ದ 8 ಲಕ್ಷ ರೂಪಾಯಿ ಈ ಬಾರಿ ಬೀಡನಹಳ್ಳಿ ಹೊರತುಪಡಿಸಿ ಆರೂರುಗಳಲ್ಲಿ ಇಂದು- ನಾಳೆ ಮಾರಿಹಬ್ಬ ಮಾರ್ಚ್‌ 7ರಂದು 2025-26ನೇ ಸಾಲಿನ ಬಜೆಟ್‌ ಮಂಡನೆ: ಸಿಎಂ ಸಿದ್ದರಾಮಯ್ಯ KSRTC: ಸರಿಸಮಾನ ವೇತನ ಘೋಷಣೆ ಮಾಡಿ ಇಲ್ಲ ತೀವ್ರ ಹೋರಾಟ- ಎಚ್ಚರಿಕೆ ಕೊಟ್ಟ 4 ಸಾರಿಗೆ ನಿಗಮಗಳ ಅಧಿಕಾರಿಗಳು/ನೌಕರರು ಮಂಡ್ಯ: ಆಟವಾಡುತ್ತ ಅಣ್ಣ ಸಿಡಿಸಿದ ಗುಂಡಿಗೆ ಮೂರು ವರ್ಷದ ತಮ್ಮ ಬಲಿ