NEWSನಮ್ಮಜಿಲ್ಲೆನಮ್ಮರಾಜ್ಯ

ನಾಗರ ಹಾವಿನಿಂದ ಕ್ಷಣಾರ್ಧದಲ್ಲಿ ಮಗನನ್ನು ರಕ್ಷಿಸಿರುವ ತಾಯಿ- ಭಯಾನಕ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್

ವಿಜಯಪಥ ಸಮಗ್ರ ಸುದ್ದಿ

ಮಂಡ್ಯ: ತಾಯಿ ಮಗು ಇಬ್ಬರು ಮನೆಯಿಂದ ಹೊರಬರುತ್ತಿದ್ದಂತೆ ಮೆಟ್ಟಿಲ ಕೆಳಗೆ ಹರಿದು ಹೋಗುತ್ತಿದ್ದ ನಾಗರಹಾವನ್ನು ನೋಡದೆ ಮುಗು ಇಳಿಯುತ್ತದೆ. ಕೂಡಲೇ ಹಾವು ಹಿಂದೆ ಸರಿದು ಹೆಡೆ ಎತ್ತಿ ನಿಲ್ಲುತ್ತದೆ. ಕ್ಷಣಾರ್ಧದಲ್ಲೇ ಆ ಮಗುವನ್ನು ತಾಯಿ ಹಾವಿನಿಂದ ರಕ್ಷಿಸಿದ ದೃಶ್ಯ ಮೈ ರೋಮಗಳು ಸೆಟೆದು ನಿಲ್ಲುವಂತೆ ಮಾಡುತ್ತವೆ.

ಹೌದು! ಮಹಿಳೆಯೊಬ್ಬರು ನಾಗರ ಹಾವಿನಿಂದ ಕ್ಷಣಾರ್ಧದಲ್ಲಿ ಮಗನನ್ನು ರಕ್ಷಿಸಿರುವ ಭಯಾನಕ ವಿಡಿಯೋವೊಂದು ಈಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

ಮಂಡ್ಯ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಮನೆಯ ಬಳಿ ಇದ್ದ ಸಿಸಿಟಿವಿಯಲ್ಲಿ ದೃಶ್ಯ ಸೆರೆಯಾಗಿದೆ. ವಿಡಿಯೋದಲ್ಲಿ ಬಾಲಕ ಶಾಲೆಗೆ ಹೊರಟ್ಟಿದ್ದ ವೇಳೆ ಮನೆಯ ಹೊರಗೆ ಮೆಟ್ಟಿಲ ಕೆಳಗೆ ನಾಗರಹಾವು ನುಸುಳಿತ್ತು. ಹಾವು ಇರುವುದನ್ನು ಕಾಣದೇ ಮೆಟ್ಟಿಲಿನಿಂದ ಕೆಳಗೆ ಇಳಿಯುತ್ತಿದ್ದಂತೆಯೇ ಹಾವು ಹಿಂದಕ್ಕೆ ಸರಿದಿದೆ.

ಅದನ್ನು ಕಂಡ ಕೂಡಲೇ ಬಾಲಕನ ತಾಯಿ ಮೆಟ್ಟಿಲಿನಿಂದ ಇಳಿದು ಹೆಡೆ ಎತ್ತಿದ ನಾಗರಹಾವು ಬಾಲಕನನ್ನು ಕಚ್ಚಲು ಪ್ರಯತ್ನಿಸಿದಾಗ ಮಗನನ್ನು ದೂರಕ್ಕೆ ಎಳೆದೊಯ್ದು ಬಿಗಿದಪ್ಪಿಕೊಂಡು ರಕ್ಷಿಸಿದ್ದಾರೆ.

ಸದ್ಯ ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು, ಒಂದು ಲಕ್ಷಕ್ಕೂ ಹೆಚ್ಚು ಮಂದಿ ವೀಕ್ಷಿಸಿದ್ದಾರೆ. ಈ ವಿಡಿಯೋ ಜೊತೆಗೆ ಕರ್ನಾಟಕದ ಮಂಡ್ಯದಲ್ಲಿ ತಾಯಿಯೊಬ್ಬಳು ತನ್ನ ಪುಟ್ಟ ಮಗನನ್ನು ದೊಡ್ಡ ನಾಗರ ಹಾವಿನಿಂದ ರಕ್ಷಿಸಿದ್ದಾರೆ ಎಂದು ಕ್ಯಾಪ್ಷನ್‍ನಲ್ಲಿ ಬರೆಯಲಾಗಿದೆ. ಒಟ್ಟಾರೆ ಪ್ರಾಣ ಒತ್ತೆ ಇಟ್ಟು ಮಗನನ್ನು ಹಾವಿನಿಂದ ಪಾರು ಮಾಡಿದ ತಾಯಿಯ ಧೈರ್ಯಕ್ಕೆ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ನಾನು ಕಾದು ಕುಳಿತಿದ್ದರೂ ಬಸ್‌ ನಿಲ್ಲಿಸಿಲ್ಲ - ಚಾಲಕ, ಕಂಡಕ್ಟರ್‌ ತಿಂಗಳ ಸಂಬಳ ನನಗೆ ನಷ್ಟಪರಿಹಾರ ಕೊಡಿ: ವಕೀಲನ ಒತ್ತ... ಕೆಎಂಎಫ್ ಸಿಬ್ಬಂದಿಗೆ 7ನೇ ವೇತನ ಆಯೋಗ ಜಾರಿ- 2024ರ ಆ.1ರಿಂದಲೇ ಪೂರ್ವಾನ್ವಯ KSRTC ಏಕಸ್ವಾಮ್ಯಕ್ಕೆ ಮೂಗುದಾರ ಹಾಕಿ- ಸರ್ಕಾರದ ಕಾಯ್ದೆ ಸರಿ ಎಂದ ಕೋರ್ಟ್ ಸ್ಮಶಾನ ಜಾಗ ಭೂಗಳ್ಳನಿಗೆ ಬಿಟ್ಟುಕೊಡಲು ಟಿಪ್ಪಣಿ ಮಂಡಿಸಿರುವ ಭ್ರಷ್ಟ ಅಧಿಕಾರಿಗಳು: ಎನ್.ಆರ್.ರಮೇಶ್ ಆರೋಪ ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ