NEWSನಮ್ಮಜಿಲ್ಲೆನಮ್ಮರಾಜ್ಯ

ನಂಜನಗೂಡು ನಗರಸಭೆ ಉಪಚುನಾವಣೆ: ಅಭ್ಯರ್ಥಿ ಪರ ಮುಖ್ಯಮಂತ್ರಿ ಚಂದ್ರು ಪ್ರಚಾರ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಎಲ್ಲರಿಗೂ ಗುಣಮಟ್ಟದ ಶಿಕ್ಷಣ, ಆರೋಗ್ಯ ಹಾಗೂ ಮೂಲಭೂತ ಸೌಕರ್ಯಗಳು ಸಿಗಬೇಕು ಎಂಬ ಧ್ಯೇಯವನ್ನು ಇಟ್ಟುಕೊಂಡಿರುವ ಆಮ್‌ ಆದ್ಮಿ ಪಕ್ಷವು ಸ್ಥಳೀಯ ಸಮಸ್ಯೆಗಳಿಗೆ ಸದಾ ನಾಗರಿಕರ ಜತೆಯಾಗಿ ನಿಲ್ಲಲ್ಲಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಡಾ.ಮುಖ್ಯಮಂತ್ರಿ ಚಂದ್ರು ಭರವಸೆ ನೀಡಿದರು.

ನಂಜನಗೂಡು ನಗರಸಭೆ ಉಪಚುನಾವಣೆಯಲ್ಲಿ ಕಣಕ್ಕಿಳಿದಿರುವ ಪಕ್ಷದ ಅಭ್ಯರ್ಥಿ ಜಯಲಕ್ಷ್ಮೀ ಅವರ ಪರವಾಗಿ ಭಾನುವಾರ ಪ್ರಚಾರ ನಡೆಸಿ ಮಾತನಾಡಿದರು.

ಕಳೆದ 75 ವರ್ಷಗಳಿಂದ ಭ್ರಷ್ಟಾಚಾರ, ದುರಾಡಳಿತ ನಡೆಸುತ್ತಲೇ ಬಂದಿರುವ ಕಾಂಗ್ರೆಸ್‌, ಬಿಜೆಪಿ ಹಾಗೂ ಜನತಾದಳ ಪಕ್ಷಗಳಿಂದ ಬೇಸತ್ತಿದ್ದ ಜನರಿಗೆ ಪರ್ಯಾಯವಾಗಿ ಎಎಪಿ ಜನರಲ್ಲಿ ಭರವಸೆ ಮೂಡಿಸಿದೆ. ನಗರಸಭೆ ಚುನಾವಣೆಗಳಲ್ಲಿ ಗೆಲ್ಲುವ ಮೂಲಕ ಪಕ್ಷದ ನೆಲೆಯನ್ನು ಸ್ಥಳೀಯ ಮಟ್ಟದಲ್ಲಿ ಭದ್ರಪಡಿಸಲು ಸಹಕರಿಸಿ ಎಂದು ಮತದಾರರಲ್ಲಿ ಮನವಿ ಮಾಡಿದರು.

ರಾಜ್ಯದಲ್ಲಿರುವ ಆಡಳಿತ ಮತ್ತು ವಿಪಕ್ಷಗಳು ಸರ್ಕಾರವನ್ನು ಉಳಿಸಲು ಮತ್ತು ಉರುಳಿಸಲು ಪರಸ್ಪರ ತಂತ್ರಗಾರಿಕೆಗಳಲ್ಲಿ ನಿರತವಾಗಿವೆ. ಸ್ಥಳೀಯ ಚುನಾವಣೆಗಳಲ್ಲಿ ಅಂತಹ ಪಕ್ಷಗಳಿಗೆ ಮತ ನೀಡಿದರೂ ಯಾವುದೇ ಪ್ರಯೋಜನವಾಗದು. ಸ್ಥಳೀಯ ಸಮಸ್ಯೆಗಳನ್ನು ಬಗೆಹರಿಸಲು, ಜನಸಾಮಾನ್ಯರ ಜೊತೆ ಸಂಕಷ್ಟಗಳಲ್ಲಿ ನಿಲ್ಲಲು ನಮ್ಮ ಪಕ್ಷ ಸದಾ ಜೊತೆಗಿದೆ ಎಂದು ತಿಳಿಸಿದರು.

ಇನ್ನು ದೆಹಲಿಯ ಕೇಜ್ರಿವಾಲ್‌ ಮಾದರಿಯ ಆಡಳಿತ ನಮ್ಮ ರಾಜ್ಯದಲ್ಲೂ ಬರಲು ಸ್ಥಳೀಯ ಚುನಾವಣೆಗಳಲ್ಲಿ ನಮ್ಮನ್ನು ಬೆಂಬಲಿಸಬೇಕು ಎಂದು ಮುಖ್ಯಮಂತ್ರಿ ಚಂದ್ರು ಜನತೆಯನ್ನು ಕೋರಿದರು.

ಸ್ಥಳೀಯರು ಪ್ರಚಾರದುದ್ದಕ್ಕೂ ಚಂದ್ರು ಹಾಗೂ ಪಕ್ಷದ ಅಭ್ಯರ್ಥಿ ಜಯಲಕ್ಷ್ಮೀ ಅವರ ಜತೆ ಹೆಚ್ಚಿನ ಸಂಖ್ಯೆಯಲ್ಲಿ ಹೆಜ್ಜೆ ಹಾಕಿದರು. ಪಕ್ಷದ ಪ್ರಣಾಳಿಕೆಯನ್ನು ಹಂಚುವ ಮೂಲಕ ಅಭ್ಯರ್ಥಿ ಜಯಲಕ್ಷ್ಮೀ ಅವರಿಗೆ ಮತ ಹಾಕುವಂತೆ ವಿನಂತಿಸಿದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು