ಸಿನಿಪಥ

ನಟ ಅಕುಲ್‌ ಬಾಲಾಜಿ ವಿರುದ್ಧ ಎಫ್‌ಐಆರ್‌

ಲಾಕ್‌ಡೌನ್‌ ನಡುವೆಯೂ ರೆಸಾರ್ಟ್‌ನಲ್ಲಿ ಮದುವೆ ಮಾಡಲು ಅನುಮತಿ ನೀಡಿದ್ದಕ್ಕೆ ಕ್ರಮ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ದೊಡ್ಡಬಳ್ಳಾಪುರ: ಯಾವುದೇ ಅನುಮತಿ ಪಡೆಯದೇ ವಿವಾಹ ಕಾರ್ಯಕ್ರಮಕ್ಕೆ ಸಿದ್ಧತೆ ಮಾಡಿಕೊಳ್ಳಲು ಅನುಮಾಡಿಕೊಟ್ಟಿದ್ದಕ್ಕೆ ನಟ ಹಾಗೂ ನಿರೂಪಕ ಅಕುಲ್‌ ಬಾಲಾಜಿ ವಿರುದ್ಧ ಏಫ್‌ಐಆರ್‌ ದಾಖಲಾಗಿದೆ.

ಲಾಕ್‌ಡೌನ್ ನಡುವೆಯೇ  ತನ್ನ ರೆಸಾರ್ಟ್‌ನಲ್ಲಿ ಖಾಸಗಿ ಕಾರ್ಯಕ್ರಮವೊಂದಕ್ಕೆ ಅನುವು ಮಾಡಿಕೊಟ್ಟಿದ್ದರು ಎಂಬ ಕಾರಣಕ್ಕೆ ಪೊಲೀಸರು ಎಫ್‌ಐಆರ್ ದಾಖಲಿಸಿದ್ದು, ಕಾರ್ಯಕ್ರಮ ಕುರಿತ ವಿಚಾರವಾಗಿ ತನಿಖೆ ನಡೆಸುತ್ತಿದ್ದಾರೆ.

ಅಕುಲ್ ಒಡೆತನದ ಲಘುಮೇನಹಳ್ಳಿ ಬಳಿ ಇರುವ ಸನ್‌ಶೈನ್ ರೆಸಾರ್ಟ್‌ ನಲ್ಲಿ ಏಪ್ರಿಲ್ 18ರಂದು ರಾತ್ರಿ  10.30ರಂದು ಜನ ಸೇರಿದ್ದರು. ಬೆಂಗಳೂರಿನಿಂದ 20ಕ್ಕೂ ಅಧಿಕ ಮಂದಿ ರೆಸಾರ್ಟ್‌ಗೆ ಬಂದು ಯಾವುದೇ ಅನುಮತಿ ಇಲ್ಲದೆ ಮದುವೆಗೆ ಸಿದ್ಧತೆ ನಡೆಸುತ್ತಿದ್ದರು ಎಂದು ಹೇಳಲಾಗಿದೆ.

ಕೊರೊನಾ ಸೋಂಕು ಹರಡುವುದನ್ನು ತಡೆಗಟ್ಟಲು ಸರ್ಕಾರ ಜಾರಿಗೊಳಿಸಿರುವ ಲಾಕ್‌ಡೌನ್ ನಿಯಮ ಉಲ್ಲಂಘಿಸಿ ಅಕುಲ್ ಬಾಲಾಜಿ ತನ್ನ ರೆಸಾರ್ಟ್‌ನಲ್ಲಿ ಮದುವೆಗೆ ಅವಕಾಶ ಮಾಡಿಕೊಟ್ಟಿದಕ್ಕೆ ಅವರ ವಿರುದ್ಧ ಎಫ್‌ಐಆರ್‌ ದಾಖಲಿಸಿ ಎಚ್ಚರಿಕೆಯನ್ನು ನೀಡಲಾಗಿದೆ ಎಂದು ತಿಳಿದು ಬಂದಿದೆ.

ಯಾವುದೇ ಒಂದು ಕಾರ್ಯಕ್ರಮ ಆಯೋಜನೆ ಮಾಡಬೇಕಾದರು ಪೊಲೀಸರ ಅನುಮತಿ ಪಡೆಯುವುದನ್ನು ಸರ್ಕಾರ ಕಡ್ಡಾಯಗೊಳಿಸಿದೆ. ಆದರೆ ಅದನ್ನು ಮೀರಿ ಮದುವೆಗೆ ಸಿದ್ಧತೆ ಮಾಡಿಕೊಂಡಿರುವುದು ಕಾನೂನು ಬಾಹಿರವಾದುದು ಎಂದು ಪೊಲೀಸರು ತಿಳಿಸಿದ್ದಾರೆ.

Leave a Reply

error: Content is protected !!
LATEST
KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ ದೀಪಾವಳಿ ಹಬ್ಬ ಹಿನ್ನೆಲೆ KKRTC ನೌಕರರಿಗೆ ಅ.29ರಂದೇ ವೇತನ ಕೊಡಲು ಎಂಡಿ ರಾಚಪ್ಪ ನಿರ್ದೇಶನ ನಿರಂತರ ಮಳೆ- BBMP ಎಲ್ಲ ಅಧಿಕಾರಿಗಳು ಸನ್ನದ್ಧರಾಗಿ: ತುಷಾರ್ ಗಿರಿನಾಥ್