ಸಿನಿಪಥ

ನಟ ಅಕುಲ್‌ ಬಾಲಾಜಿ ವಿರುದ್ಧ ಎಫ್‌ಐಆರ್‌

ಲಾಕ್‌ಡೌನ್‌ ನಡುವೆಯೂ ರೆಸಾರ್ಟ್‌ನಲ್ಲಿ ಮದುವೆ ಮಾಡಲು ಅನುಮತಿ ನೀಡಿದ್ದಕ್ಕೆ ಕ್ರಮ

ವಿಜಯಪಥ ಸಮಗ್ರ ಸುದ್ದಿ

ದೊಡ್ಡಬಳ್ಳಾಪುರ: ಯಾವುದೇ ಅನುಮತಿ ಪಡೆಯದೇ ವಿವಾಹ ಕಾರ್ಯಕ್ರಮಕ್ಕೆ ಸಿದ್ಧತೆ ಮಾಡಿಕೊಳ್ಳಲು ಅನುಮಾಡಿಕೊಟ್ಟಿದ್ದಕ್ಕೆ ನಟ ಹಾಗೂ ನಿರೂಪಕ ಅಕುಲ್‌ ಬಾಲಾಜಿ ವಿರುದ್ಧ ಏಫ್‌ಐಆರ್‌ ದಾಖಲಾಗಿದೆ.

ಲಾಕ್‌ಡೌನ್ ನಡುವೆಯೇ  ತನ್ನ ರೆಸಾರ್ಟ್‌ನಲ್ಲಿ ಖಾಸಗಿ ಕಾರ್ಯಕ್ರಮವೊಂದಕ್ಕೆ ಅನುವು ಮಾಡಿಕೊಟ್ಟಿದ್ದರು ಎಂಬ ಕಾರಣಕ್ಕೆ ಪೊಲೀಸರು ಎಫ್‌ಐಆರ್ ದಾಖಲಿಸಿದ್ದು, ಕಾರ್ಯಕ್ರಮ ಕುರಿತ ವಿಚಾರವಾಗಿ ತನಿಖೆ ನಡೆಸುತ್ತಿದ್ದಾರೆ.

ಅಕುಲ್ ಒಡೆತನದ ಲಘುಮೇನಹಳ್ಳಿ ಬಳಿ ಇರುವ ಸನ್‌ಶೈನ್ ರೆಸಾರ್ಟ್‌ ನಲ್ಲಿ ಏಪ್ರಿಲ್ 18ರಂದು ರಾತ್ರಿ  10.30ರಂದು ಜನ ಸೇರಿದ್ದರು. ಬೆಂಗಳೂರಿನಿಂದ 20ಕ್ಕೂ ಅಧಿಕ ಮಂದಿ ರೆಸಾರ್ಟ್‌ಗೆ ಬಂದು ಯಾವುದೇ ಅನುಮತಿ ಇಲ್ಲದೆ ಮದುವೆಗೆ ಸಿದ್ಧತೆ ನಡೆಸುತ್ತಿದ್ದರು ಎಂದು ಹೇಳಲಾಗಿದೆ.

ಕೊರೊನಾ ಸೋಂಕು ಹರಡುವುದನ್ನು ತಡೆಗಟ್ಟಲು ಸರ್ಕಾರ ಜಾರಿಗೊಳಿಸಿರುವ ಲಾಕ್‌ಡೌನ್ ನಿಯಮ ಉಲ್ಲಂಘಿಸಿ ಅಕುಲ್ ಬಾಲಾಜಿ ತನ್ನ ರೆಸಾರ್ಟ್‌ನಲ್ಲಿ ಮದುವೆಗೆ ಅವಕಾಶ ಮಾಡಿಕೊಟ್ಟಿದಕ್ಕೆ ಅವರ ವಿರುದ್ಧ ಎಫ್‌ಐಆರ್‌ ದಾಖಲಿಸಿ ಎಚ್ಚರಿಕೆಯನ್ನು ನೀಡಲಾಗಿದೆ ಎಂದು ತಿಳಿದು ಬಂದಿದೆ.

ಯಾವುದೇ ಒಂದು ಕಾರ್ಯಕ್ರಮ ಆಯೋಜನೆ ಮಾಡಬೇಕಾದರು ಪೊಲೀಸರ ಅನುಮತಿ ಪಡೆಯುವುದನ್ನು ಸರ್ಕಾರ ಕಡ್ಡಾಯಗೊಳಿಸಿದೆ. ಆದರೆ ಅದನ್ನು ಮೀರಿ ಮದುವೆಗೆ ಸಿದ್ಧತೆ ಮಾಡಿಕೊಂಡಿರುವುದು ಕಾನೂನು ಬಾಹಿರವಾದುದು ಎಂದು ಪೊಲೀಸರು ತಿಳಿಸಿದ್ದಾರೆ.

Leave a Reply

error: Content is protected !!
LATEST
ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ... ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಗೆ ಯತ್ನ: ಕಳ್ಳನ ಹೆಡೆಮುರಿಕಟ್ಟಿದ ಮಹಿಳಾ ಎಸ್‌ಐ ಕೃಷ್ಣರಾಜಪೇಟೆ: ಶ್ರೀ ಚೌಡೇಶ್ವರಿ ಅಮ್ಮನವರ ಕರಗ ಮಹೋತ್ಸವ ಅದ್ದೂರಿ ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಗೆ ಹರಿದು ಬಂತು ಕೋಟಿ ಕೋಟಿ ಹಣ