CrimeNEWSಬೆಂಗಳೂರು

ನಡುರಸ್ತೆಯಲ್ಲೇ ಭೀಕರವಾಗಿ ಹತ್ಯೆಯಾದ ರೌಡಿ ಸಿದ್ದಾಪುರ ಮಹೇಶ್‌

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಜಾಮೀನು ಪಡು ಜೈಲಿನಿಂದ ಬಿಡುಗಡಗೊಂಡು ಹೊರ ಬರುತ್ತಿದ್ದಂತೆ ರೌಡಿಶೀಟರ್ ಸಿದ್ದಾಪುರ ಮಹೇಶ್‌ನನ್ನು ನಡುರಸ್ತೆಯಲ್ಲೇ ಪರಪ್ಪನ ಅಗ್ರಹಾರದ ಬಳಿ ಭೀಕರವಾಗಿ ಹತ್ಯೆ ಮಾಡಿದೆ ಮತ್ತೊಂದು ರೌಡಿ ಗ್ಯಾಂಗ್‌.

ರೌಡಿ ವಿಲ್ಸನ್ ಗಾರ್ಡನ್ ನಾಗ ಹಾಗೂ ಮತ್ತವನ ಗ್ಯಾಂಗ್‌ಗೇ ಭೀಕರವಾಗಿ ರೌಡಿಶೀಟರ್ ಸಿದ್ದಾಪುರ ಮಹೇಶ್‌ನನ್ನು ಕೊಚ್ಚಿ ಕೊಲೆ ಮಾಡಿದೆ.

ರೌಡಿ ಮಹೇಶ್ ಕೂಡ ಕೊಲೆ, ಕೊಲೆ ಯತ್ನ, ಸುಫಾರಿಯಂತಹ ಹಲವು ಕೇಸ್‌ಗಳಲ್ಲ ಭಾಗಿಯಾಗಿದ್ದ. ಕೊಲೆ ಕೇಸ್‍ನಲ್ಲಿ ಜೈಲಿನಲ್ಲಿದ್ದ ಮಹೇಶ್, ಜಾಮೀನು ಪಡೆದು ಶುಕ್ರವಾರ ರಾತ್ರಿ ಬಿಡುಗಡೆಯಾಗಿದ್ದರಿಂದ ಕಾರಿನಲ್ಲಿ ಮನೆಗೆ ಹೋಗುತ್ತಿದ್ದಾಗ ರೌಡಿ ವಿಲ್ಸನ್ ಗಾರ್ಡನ್ ನಾಗ, ಡಬಲ್ ಮೀಟರ್ ಮೋಹನ್ ಸಿದ್ದಾಪುರ ಸುನೀಲ್ ಮತ್ತು ಗ್ಯಾಂಗ್ ಅಡ್ಡಹಾಕಿ ಲಾಂಗ್‍ನಿಂದ ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.

ಮಹೇಶ್ ರಾತ್ರಿ 9.20ರ ವೇಳೆಗೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿಯೇ ಇದ್ದ. ರಾತ್ರಿ 9.45ಕ್ಕೆ ಹೊಸೂರು ರೋಡ್ ಸಿಗ್ನಲ್ ಬಳಿಗೆ ಬಂದಿದ್ದಾನೆ. ಈ ವೇಳೆ ಏಕಾಏಕಿ ಕಾರಿಗೆ ಅಡ್ಡಬಂದ ಆರೇಳು ಜನರಿದ್ದ ಗುಂಪು ಮಚ್ಚು ಬೀಸಿದೆ. ಈ ವೇಳೆ ಮಹೇಶ್ ಕಾರಿನಿಂದ ಇಳಿದು ತಪ್ಪಿಸಿಕೊಳ್ಳಲು ಹಿಂದಕ್ಕೆ ಓಡಲು ಯತ್ನಿಸಿದ್ದಾನೆ. ಈ ವೇಳೆ ಸುಮಾರು ನೂರು ಮೀಟರ್‌ನಷ್ಟು ದೂರ ಅಟ್ಟಾಡಿಸಿಕೊಂಡು ಹೋಗಿ ನಡು ರಸ್ತೆಯಲ್ಲಿ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.

2021ರಲ್ಲಿ ವಿಲ್ಸನ್ ಗಾರ್ಡನ್ ನಾಗನ ಗೆಳೆಯ ಮದನ್ ಅಲಿಯಾಸ್ ಪಿಟೀಲ್‍ನನ್ನು ಇದೇ ಸಿದ್ದಾಪುರ ಮಹೇಶ್ ಮತ್ತವನ ಗ್ಯಾಂಗ್ ಬನಶಂಕರಿ ದೇವಾಲಯದ ಬಳಿ ಅಡ್ಡಹಾಕಿ ಕೊಚ್ಚಿ ಕೊಲೆ ಮಾಡಿತ್ತು. ಆ ಕಾರಣಕ್ಕೆ ನಾಗ ಈ ಮಹೇಶ್‍ನನ್ನು ಮುಗಿಸುವ ಪ್ಲ್ಯಾನ್ ಮಾಡಿದ್ದ.

ಹಾಗೆ ನಾಗನನ್ನು ಸಹ ಹೊಡೆಯೋದಕ್ಕೆ ಮಹೇಶ್ ಪ್ಲ್ಯಾನ್ ಮಾಡಿದ್ದ ಇದರ ನಡುವೆಯೇ ಜೂನ್‍ನಲ್ಲಿ ಬಳ್ಳಾರಿ ಜೈಲಿನಿಂದ ರಿಲೀಸ್ ಆಗಿದ್ದ ಮಹೇಶ್ ತಾನು ಪ್ರೀತಿಸಿದ್ದ ಯುವತಿಯನ್ನು ಮದುವೆಯಾಗಿದ್ದ. ಬಳಿಕ ನಾಗನಿಂದ ಜೀವ ಭಯ ಇದೆ ಎಂದು ತಿಳಿದು ಹಳೆಯ ಕೇಸ್‍ನಲ್ಲಿ ಮತ್ತೆ ಜೈಲು ಸೇರಿದ್ದ.

ಮಹೇಶ್‍ನ ಕೊಲೆಯಾಗುವಾಗ ಸ್ಕೂಟರ್‌ನಲ್ಲಿ ಆತನ ಪತ್ನಿ ಕಾರಿನ ಹಿಂದೆಯೇ ಬರುತ್ತಿದ್ದಳು. ಇದೇ ವೇಳೆ ದುಷ್ಕರ್ಮಿಗಳು ಅಟ್ಯಾಕ್ ಮಾಡಿ ಕೊಲೆ ಮಾಡಿದ್ದಾರೆ. ಇತ್ತ ಮಗ ಬರುತ್ತಿದ್ದಾನೆ ಎಂದು ಆತನ ತಾಯಿ ಅವನಿಗೆ ಇಷ್ಟವಾದ ಮಟನ್ ಚಾಪ್ಸ್ ಮಾಡುತ್ತಿದ್ದಳು. ಆದರೆ ವಿಧಿಯಾಟವೇ ಬೇರೆಯಾಗಿತ್ತು.

ಹತ್ಯೆ ಸಂಬಂಧ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

Leave a Reply

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹಿಂದಿನಿಂದ ವೇಗವಾಗಿ ಬಂದ ಕಾರು ಮುಂದೆ ಹೋಗುತ್ತಿದ್ದ ಕಾರ್‌ ಮೇಲೇರಿತು! ರೈತ ನಾಯಕ ಕುರುಬೂರು ಶಾಂತಕುಮಾರ್‌ಗೆ ಬೆಂಗಳೂರಿನಲ್ಲಿ ಚಿಕಿತ್ಸೆ: ಸಿಎಂ ಸಿದ್ದರಾಮಯ್ಯ ಮಹಾಕುಂಭ ಮೇಳಕ್ಕೆ ತೆರಳುತ್ತಿದ್ದ 18 ಮಂದಿ ದೆಹಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತಕ್ಕೆ ಸಿಲುಕಿ ಮೃತ ಮಳೆ ನೀರು ಕೊಯ್ಲಿನಿಂದ ಅಂತರ್ಜಲ ವೃದ್ಧಿ: ಕೃಷಿ ಇಲಾಖೆ ಉಪ ನಿರ್ದೇಶಕಿ ಗಾಯತ್ರಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ನೇಮಕಕ್ಕೆ ಅರ್ಜಿ ಆಹ್ವಾನ ಬಿಬಿಎಂಪಿ: ಕಸ ಬಿಸಾಡುವ ಸ್ಥಳ ನಿರ್ಮೂಲನೆ ಜತೆ ಜೆತೆಗೆ ಸ್ವಚ್ಛತಾ ಅಭಿಯಾನ KSRTC ರಿಯಾಯಿತಿ ದರದ ಪಾಸ್‌ ಇದ್ದರೂ ತಾರತಮ್ಯತೆ: ನಿವೃತ್ತರಾದ ಮೇಲೆ ಅಧಿಕಾರಿಗಳಿಗೆ ಬಡತನ- ನೌಕರರಿಗೆ ಸಿರಿತನ !! ಪಂಜಾಬ್‌ನಲ್ಲಿ ಕುರುಬೂರು ಶಾಂತಕುಮಾರ್ ಇದ್ದ ಕಾರು ಅಪಘಾತ: ಆಸ್ಪತ್ರೆಗೆ ದಾಖಲು ಬಿಬಿಎಂಪಿ: 1.84 ಲಕ್ಷ ಬೀದಿ ನಾಯಿಗಳಿಗೆ "ಸಂಯುಕ್ತ ಲಸಿಕೆ" ಹಾಕುವ ಗುರಿ- ತುಷಾರ್ ಗಿರಿನಾಥ್ ಮೈಕ್ರೋಫೈನಾನ್ಸ್ ಸಂಸ್ಥೆಗಳ ಕಿರುಕುಳ ನಿಯಂತ್ರಣಕ್ಕೆ ಸರ್ಕಾರಿ ಆಧ್ಯಾದೇಶ ಜಾರಿ