NEWSನಮ್ಮಜಿಲ್ಲೆಸಂಸ್ಕೃತಿ

ನಾಡು ಕಂಡ ಶ್ರೇಷ್ಠ ರಾಜಕಾರಣಿ ಮಾಜಿ ಸಿಎಂ ಡಿ.ದೇವರಾಜ ಅರಸು : ರಘು ಕೌಟಿಲ್ಯ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ನಾಡು ಕಂಡ ಶ್ರೇಷ್ಠ ರಾಜಕಾರಣಿ ಇವರು ನಮ್ಮ ಮೈಸೂರು ಜಿಲ್ಲೆಯವರಾದ ಡಿ.ದೇವರಾಜ ಅರಸು ಅವರು ಮುಖ್ಯಮಂತ್ರಿ ಯಾದಂತಹ ಸಂದರ್ಭದಲ್ಲಿ ಉಳುವವನಿಗೆ ಭೂಮಿ ಎಂಬ ಕಲ್ಪನೆಯಿಂದ ಹಿಂದುಳಿದ ವರ್ಗದವರ ಹಾಗೂ ರೈತರ ಆಶಾ ಕಿರಣ ವಾದರು ಎಂದು ಡಿ.ದೇವರಾಜ ಅರಸು ಅಭಿವೃದ್ಧಿ ನಿಗಮದ ಅಧ್ಯಕ್ಷ ರಘು ಕೌಟಿಲ್ಯ ತಿಳಿಸಿದರು.

ಇಂದು ಮೈಸೂರು ನಗರ ಭಾರತೀಯ ಜನತಾ ಪಾರ್ಟಿಯ ಕಾರ್ಯಲಯದಲ್ಲಿ ಹಿಂದುಳಿದ ವರ್ಗಗಳ ಮೋರ್ಚಾದ ವತಿಯಿಂದ ದೇವರಾಜ ಅರಸು ಅವರ 106 ಜನ್ಮ ಜಯಂತಿ ಅಂಗವಾಗಿ ಭಾವಚಿತ್ರ ಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿದರು.

ಕಾಂಗ್ರೆಸ್ ಪಕ್ಷವು ಇಂತಹ ಮಹಾನ್ ನಾಯಕನ್ನು ಬಳಸಿಕೊಂಡು ಅವರ ಕಡೆಯ ಜೀವನ ಸಂದರ್ಭದಲ್ಲಿ ಇವರನ್ನು ನಿರ್ಲಕ್ಷಿಸಿ ದ್ದು ಬೇಸರದ ಸಂಗತಿ ಎಂದರು.

ಅರಸರ ಆಡಳಿತದ ಸಂದರ್ಭದಲ್ಲಿ ಬಡಜನರಿಗೆ ನೀಡಿದ ಭಾಗ್ಯಜ್ಯೋತಿ ಯೋಜನೆಯನ್ನು ರಾಷ್ಟ್ರದಲ್ಲಿ ಜಾರಿಗೆ ತಂದಿದ್ದು, ಇಂದಿನ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಹಾಗಾಗಿ ಭಾರತೀಯ ಜನತಾ ಪಾರ್ಟಿ ಅರಸು ಅವರ ತತ್ವ ಸಿದ್ದಾಂತಗಳ ಅನ್ವಯಿಸಿ ಕೊಂಡಿದೆ. ಇಡಿ ಜಗತ್ತಿನಲ್ಲಿ ಅಂಬೇಡ್ಕರ್ ಅವರ ಸಂವಿಧಾನ ಹಾಗೂ ಬಸವಣ್ಣ ಕಲ್ಪನೆಯನ್ನು ಜಾರಿ ತರುವಲ್ಲಿ ಪ್ರಮುಖ ಪಾತ್ರ ವಹಿಸಿದವರು ಎಂದರು.

ಇದೇ ಸಂದರ್ಭದಲ್ಲಿ ನಗರ ಅಧ್ಯಕ್ಷ ಟಿ.ಎಸ್.ಶ್ರೀ ವತ್ಸ ಮಾತನಾಡಿ, ಭಾರತೀಯ ಜನತಾ ಪಾರ್ಟಿಯು ಹಿಂದುಳಿದ ವರ್ಗದವರ ಪರ ಇದೆ. ನರೇಂದ್ರ ಮೋದಿ ಯವರು ಇತ್ತೀಚಿನ ಸಚಿವ ಸಂಪುಟದಲ್ಲಿ 27 ಜನ ಮಂತ್ರಿಗಳನ್ನು ಮಾಡಿ ಹಿಂದುಳಿದ, ದಲಿತ, ಪರಿಶಿಷ್ಟ ಪಂಗಡ ದವರ ಪರವಾಗಿ ಇದ್ದೇವೆ ಎಂದು ತೋರಿಸಿದ್ದಾರೆ ಎಂದರು.

ಹಿಂದುಳಿದ ವರ್ಗಗಳ ಮೋರ್ಚಾದ ಅಧ್ಯಕ್ಷ ಜೋಗಿಮಂಜು, ನಗರ ಪಾಲಿಕೆ ಸದಸ್ಯ ಕೆ.ಜೆ.ರಮೇಶ್, ಪ್ರಧಾನ ಕಾರ್ಯದರ್ಶಿ ಗಳಾದ ಗೋಪಾಲ್, ಮಣಿರತ್ನಂ, ಶಿವರಾಜ್, ಸಾಮಾಜಿಕ ಜಾಲತಾಣ ಸಂಚಾಲಕ ಅಭಿಲಾಷ್, ಖಂಡೇಶ್, ಮಹದೇವು, ಹರೀಶ್ ಅಂಕಿತ್, ಯೋಗನಂದ. ಜೀವನ್, ರಮೇಶ್, ಶೋಭಾ ,ಎಸ್.ಟಿ. ಮೋರ್ಚಾ ಅಧ್ಯಕ್ಷರಾದ ಲಕ್ಷಣ್, ಕೃಷ್ಣ ನಾಯಕ್, ಶಿವು, ಮುಂತಾದವರು ಇದ್ದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು