NEWSನಮ್ಮಜಿಲ್ಲೆರಾಜಕೀಯ

ನಾನು ಕೂಡ ರಾಜಕಾರಣ ಮಾಡಲು ಬಂದಿರುವವನು: ಸಿಎಂಗೇ ಟಾಂಗ್‌ ಕೊಟ್ಟ ಪ್ರೀತಂ ಗೌಡ

ವಿಜಯಪಥ ಸಮಗ್ರ ಸುದ್ದಿ

ಹಾಸನ: ನೀವು ಹೊಂದಾಣಿಕೆ ರಾಜಕೀಯ ಮಾಡಿಕೊಂಡು ಕುಳಿತರೆ ಪಕ್ಷದ ಶಾಸಕರು, ಕಾರ್ಯಕರ್ತರಿಗೆ ಏನು ಸಂದೇಶ ನೀಡಲು ಹೊರಟಿದ್ದೀರಿ ಎಂದು ತಮ್ಮ ಅಸಮಾಧಾನವನ್ನು ಶಾಸಕ ಪ್ರೀತಂಗೌಡ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ದೇವೇಗೌಡರ ಮನೆಗೆ ಭೇಟಿ ನೀಡಿದ ಸಂದರ್ಭವನ್ನು ಪ್ರಸ್ತಾಪಿಸುವ ಮೂಲಕ ಅಸಮಾಧಾನ ಹೊರಹಾಕಿದ್ದಾರೆ.

ಹಾಸನದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಹಳೆ ಮೈಸೂರು, ಹಾಸನ ಮತ್ತು ರಾಜ್ಯದ ಇತರ ಭಾಗದ ಬಿಜೆಪಿ ಕಾರ್ಯಕರ್ತರಿಗೆ ಮಾನಸಿಕವಾಗಿ ಸ್ಥೈರ್ಯ ತುಂಬುವುದನ್ನು ಬಿಟ್ಟು ಈ ರೀತಿ ನಡೆದುಕೊಂಡರೆ ಹೇಗೆ ಎಂದು ಸಿಎಂ ಅವರನ್ನೇ ಪ್ರಶ್ನಿಸಿದ್ದಾರೆ.

ಬಸವರಾಜ ಬೊಮ್ಮಾಯಿಯವರ ತಂದೆ ಎಸ್.ಆರ್. ಬೊಮ್ಮಾಯಿಯವರ ಸರ್ಕಾರವನ್ನು ಉರುಳಿಸಿದವರು ಮಾಜಿ ಪ್ರಧಾನಿ ದೇವೇಗೌಡರು, ಅವರ ಮನೆಗೆ ಸಿಎಂ ಆದ ಬಳಿಕ ಬಸವರಾಜ ಬೊಮ್ಮಾಯಿಯವರು ಮೊದಲು ಏಕೆ ಹೋಗಬೇಕಿತ್ತು? ಅವರ ಮನೆಗೆ ಹೋಗುವ ಬದಲು ಸಿದ್ದಗಂಗಾ ಶ್ರೀಗಳೋ, ಸುತ್ತೂರು ಮಠದ ಶ್ರೀಗಳೋ, ಆದಿಚುಂಚನಗಿರಿ ಮಠಕ್ಕೋ ಭೇಟಿ ನೀಡಿ ಆಶೀರ್ವಾದ ತೆಗೆದುಕೊಳ್ಳಬೇಕಿತ್ತು.

ಅದು ಬಿಟ್ಟು ಅವರ ತಂದೆಯವರ ಸರ್ಕಾರವನ್ನು ಉರುಳಿಸಿದವರ ಮನೆಗೆ ಹೋಗುವ ಅವಶ್ಯಕತೆಯೇನಿತ್ತು? ಈ ಬಗ್ಗೆ ಬೊಮ್ಮಾಯಿ ಅಭಿಮಾನಿಗಳೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ಹೇಳಿದರು.

ನಾನು ಯಾವುದೇ ಮುಲಾಜಿಗೆ ಒಳಗಾಗಿ ರಾಜಕಾರಣ ಮಾಡುವಂಥವನಲ್ಲ, ನಮ್ಮ ಮನೆಗೆ ಕಲ್ಲು ಹೊಡೆದ ಸಂದರ್ಭದಲ್ಲಿ ಯಡಿಯೂರಪ್ಪನವರ ನೇತೃತ್ವದಲ್ಲಿ ಆರ್.ಅಶೋಕ್ ಅವರು ಮಾನಸಿಕವಾಗಿ, ನೈತಿಕವಾಗಿ ಧೈರ್ಯ ತುಂಬಿ ಹೆಚ್ಚು ಶಕ್ತಿ ಕೊಟ್ಟರು ಅಂಥ ನಾಯಕರ ಮಧ್ಯೆ ಬೆಳೆದು ಬಂದಿದ್ದೇನೆ ಎಂದರು.

ಇನ್ನು ನಾವಿಲ್ಲಿ ದಿನ ಬೆಳಗ್ಗೆದ್ದು ಜಾತ್ಯತೀತ ಜನತಾದಳದೊಂದಿಗೆ ಗುದ್ದಾಡಿ ಪಕ್ಷ ಕಟ್ಟುವುದು, ಇನ್ನೊಬ್ಬರು ಹೋಗಿ ಅಡ್ಜಸ್ಟ್ ಮೆಂಟ್ ರಾಜಕಾರಣ ಮಾಡುವುದು. ನಾವ್ಯಾರೂ ಕೂಡ ರಾಜಕೀಯದಲ್ಲಿ ಸನ್ಯಾಸಿಗಳಲ್ಲ. ನಾನು ಕೂಡ ರಾಜಕಾರಣ ಮಾಡಲು ಬಂದಿರುವವನು ಎಂದು ಸಿಎಂಗೆ ಖಾರವಾಗಿ ಹೇಳಿದರು.

ಹಾಸನ ಜಿಲ್ಲೆಯಾಗಿರಬಹುದು, ಹಳೆ ಮೈಸೂರು ಭಾಗವಾಗಿರಬಹುದು ಯಾವುದೇ ಹೊಂದಾಣಿಕೆ ರಾಜಕಾರಣ ಸಾಧ್ಯವಿಲ್ಲ. ಈ ಮೂಲಕ ಕಾರ್ಯಕರ್ತರ ನೈತಿಕ ಸ್ಥೈರ್ಯವನ್ನು ಕುಗ್ಗಿಸುವ ಕೆಲಸ ಮಾಡಬೇಡಿ ಎಂದು ಸಿಎಂ ಬೊಮ್ಮಾಯಿ ಅವರಿಗೇ ಟಾಂಗ್ ಕೊಟ್ಟರು.

ನಮ್ಮ ಕಾರ್ಯಕರ್ತರು ಕೇಳುತ್ತಿರುವ ಪ್ರಶ್ನೆಗಳಿಗೆ ಉತ್ತರ ಕಂಡುಕೊಳ್ಳಲು ಸಿಎಂ, ರಾಜ್ಯಾಧ್ಯಕ್ಷರು, ನಮ್ಮ ಸಂಘ ಪರಿವಾರದ ಹಿರಿಯರನ್ನು ಭೇಟಿ ಮಾಡಿ ಚರ್ಚೆ ಮಾಡುತ್ತೇನೆ, ಮುಂದಿನ ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ಜನತಾದಳವನ್ನು ಎದುರಿಸಬೇಕಾಗುತ್ತದೆ. ಹೀಗಾಗಿ ಈ ಬಗ್ಗೆ ನಮಗೆ ಸ್ಪಷ್ಟ ಉತ್ತರ ಸಿಗಬೇಕು ಎಂದು ಹೇಳಿದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು