CrimeNEWSನಮ್ಮಜಿಲ್ಲೆ

ನಾಲೆಗೆ ಕಾರು ಉರುಳಿ ನಾಲ್ವರು ಮಹಿಳೆಯರು ಮೃತ: ಮೃತರ ಕುಟುಂಕ್ಕೆ ತಲಾ 50 ಸಾವಿರ ಪರಿಹಾರ- ಸಚಿವ ಚೆಲುವರಾಯಸ್ವಾಮಿ

ವಿಜಯಪಥ ಸಮಗ್ರ ಸುದ್ದಿ

ಮಂಡ್ಯ: ಶ್ರೀರಂಗಪಟ್ಟಣ ತಾಲೂಕಿನ ಗಾಮನಹಳ್ಳಿ ಬಳಿ ನಾಲೆಗೆ ಕಾರು ಉರುಳಿ ನಾಲ್ವರು ಮಹಿಳೆಯರು ಮೃತಪಟ್ಟಿರುವ ಘಟನೆ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚೆಲುವರಾಯಸ್ವಾಮಿ ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು.

ಅಪಘಾತದಲ್ಲಿ ಮೃತರಾದ ಮೈಸೂರು ಜಿಲ್ಲೆಯ ತಿ. ನರಸೀಪುರ ತಾಲೂಕು ಬನ್ನೂರು ಹೋಬಳಿಯ ಗೊರವನಹಳ್ಳಿ ಗ್ರಾಮದ ಬಸವರಾಜು ಅವರ ಪತ್ನಿ ರೇಖಾ (35) ಮತ್ತು ಪುತ್ರಿ ಸಂಜನಾ (18) ಮಲ್ಲೇಶ್ ಎಂಬುವರ ಪತ್ನಿ ಮಮತಾ (40) ಹಾಗೂ ಗಾಮನಹಳ್ಳಿ ಗ್ರಾಮದ ಮಹದೇವಮ್ಮ(55) ಮೃತಪಟ್ಟವರು. ಈ ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದ ಅವರು ತಲಾ 50 ಸಾವಿರ ರೂ. ವೈಯಕ್ತಿಕ ಪರಿಹಾರ ನೀಡಿದರು.

ಗಾಮನಹಳ್ಳಿ ಹೊರ ವಲಯದಲ್ಲಿ ತಡೆಗೋಡೆ ಇದ್ದರೂ ಸಹ ನಾಲೆಗೆ ಕಾರು ಉರುಳಿ ದುರಂತ ಸಂಭವಿಸಿದೆ. ಇದೊಂದು ದುರದೃಷ್ಟಕರ ಘಟನೆ, ನಾವು ಏನೇ ಸಾಂತ್ವನ ಹೇಳಿದರೂ ಮೃತರ ಕುಟುಂಬದವರಿಗೆ ತುಂಬಾ ನೋವು ತಂದಿರುತ್ತದೆ, ಮುಖ್ಯಮಂತ್ರಿ ಅವರ ಜತೆ ಮಾತನಾಡಿ ಹೆಚ್ಚಿನ ಪರಿಹಾರ ದೊರಕಿಸಿಕೊಡುವ ಭರವಸೆ ನೀಡಿದರು.

ಜಿಲ್ಲೆಯಲ್ಲಿ ಅಪಘಾತ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಅಪಘಾತ ವಲಯಗಳನ್ನು ಗುರುತಿಸಲು ಸರ್ವೇ ಮಾಡಲು ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚಿಸಿದ್ದೇವೆ, ಅವರು ವರದಿ ನೀಡಿದ ನಂತರ ಅಪಘಾತ ತಡೆಗೆ ಸೂಕ್ತ ಕ್ರಮ ವಹಿಸುತ್ತೇವೆ. ಪ್ರಾಣ ಹಾನಿ ತಡೆಗೆ ಮೊದಲ ಆದ್ಯತೆ ನೀಡಲಾಗುವುದು ಎಂದರು.

ತಿಬ್ಬನಹಳ್ಳಿ ನಾಲೆಗೆ ಕಾರು ಉರುಳಿ ಬಿದ್ದಿದ್ದು ಮೊಬೈಲ್‌ನಲ್ಲಿ ಮಾತಾಡಿಕೊಂಡು ಚಾಲನೆ ಮಾಡುತ್ತಿದ್ದರಿಂದ ಅಪಘಾತವಾಗಿದೆ. ಆದರೆ ಅಲ್ಲಿ ನಾಲೆಗೆ ತಡೆಗೋಡೆ ಇರಲಿಲ್ಲ. ಗಾಮನಹಳ್ಳಿ ಬಳಿ ತಡೆಗೋಡೆ ಇದ್ದರೂ ಸಹ ಅನಾಹುತ ಆಗಿದೆ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸಬೇಕು ಎಂದರು.

ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಹಿಂದಿನಿಂದಲೂ ಅಪಘಾತ ಹೆಚ್ಚಳವಾಗಿದ್ದವು, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಒಂದೂವರೆ ತಿಂಗಳು ಆಗಿದೆ, ಈ ಹಿಂದೆ ಅಧಿಕಾರದಲ್ಲಿದ್ದ ಶಾಸಕರು ಏನು ಮಾಡಿದ್ದರು, ಮಂಡ್ಯದಲ್ಲಿ ರಸ್ತೆ ಅಭಿವೃದ್ಧಿ ಮಾಡಿಲ್ಲ, ನಮ್ಮ ಮೇಲೆ ಆರೋಪ ಮಾಡುವುದನ್ನು ಕಾಯಕ ಮಾಡಿಕೊಂಡಿದ್ದಾರೆ, ಆದರೆ ನಾವು ನಮ್ಮ ಕರ್ತವ್ಯವನ್ನು ಮಾಡುತ್ತಿದ್ದೇವೆ ಎಂದು ಹೇಳಿದರು.

ಶಾಸಕರಾದ ರಮೇಶ್ ಬಾಬು ಬಂಡಿಸಿದ್ದೇಗೌಡ, ರವಿಕುಮಾರ್ ಗಣಿಗ, ಜಿಲ್ಲಾಧಿಕಾರಿ ಡಾ.ಕುಮಾರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಇತರರಿದ್ದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು