NEWSದೇಶ-ವಿದೇಶರಾಜಕೀಯ

ನಾಳೆಯಿಂದ ಮುಂಗಾರು ಸಂಸತ್‌ ಅಧಿವೇಶನಕ್ಕೆ ಪ್ರಧಾನಿ ಮೋದಿ ಟೀಮ್‌ ಸಜ್ಜು

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ಸಂಸತ್‌ನ ಮುಂಗಾರು ಅಧಿವೇಶನ ಸೋಮವಾರ (ಜು.19) ಆರಂಭವಾಗಲಿದೆ.

ಅಧಿವೇಶನ ಹಿನ್ನೆಲೆಯಲ್ಲಿ ಭಾನುವಾರ ಸರ್ವಪಕ್ಷಗಳ ಸಭೆಯನ್ನು ಆಯೋಜಿಸಲಾಗಿತ್ತು. ʻಸಂಸತ್‌ನ ಮುಂಗಾರು ಅಧಿವೇಶನ ಸಂದರ್ಭದಲ್ಲಿ ವಿವಿಧ ವಿಷಯಗಳ ಕುರಿತು ಆರೋಗ್ಯಕರ ಹಾಗೂ ಅರ್ಥಪೂರ್ಣ ಚರ್ಚೆಗೆ ಸರ್ಕಾರ ಸಿದ್ಧವಿದೆʼ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದರು.

33 ಪಕ್ಷಗಳ ಮುಖಂಡರು ಸಭೆಯಲ್ಲಿ ಪಾಲ್ಗೊಂಡಿದ್ದರು. ರಕ್ಷಣಾ ಮಂತ್ರಿ ರಾಜನಾಥ್‌ಸಿಂಗ್‌, ರಾಜ್ಯಸಭೆಯ ಸದನ ನಾಯಕ ಪೀಯೂಷ್‌ ಗೋಯಲ್‌, ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆಯ ವಿರೋಧ ಪಕ್ಷದ ನಾಯಕ ಅಧೀರ್‌ರಂಜನ್‌ ಚೌಧರಿ.

ಟಿಎಂಸಿ ಸಭಾನಾಯಕ ಡೆರೆಕ್‌ ಓಬ್ರಿಯಾನ್‌, ಡಿಎಂಕೆ ನಾಯಕ ತಿರುಚಿ ಶಿವ, ಸಮಾಜವಾದಿ ಪಾರ್ಟಿಯ ರಾಮಗೋಪಾಲ್‌ ಯಾದವ್‌, ಬಿಎಸ್‌ಪಿಯ ಸತೀಶ್‌ ಮಿಶ್ರಾ, ಎನ್‌ಡಿಎ ಅಂಗಪಕ್ಷವಾದ ಅಪ್ನಾ ದಳದ ನಾಯಕಿ ಅನುಪ್ರಿಯಾ ಪಟೇಲ್‌, ಎಲ್‌ಜಿಪಿ ಮುಖಂಡ ಪಶುಪತಿ ಪರಸ್‌ ಸಹ ಉಪಸ್ಥಿತರಿದ್ದರು.

ಮುಂಗಾರು ಅಧಿವೇಶನ ಆಗಸ್ಟ್‌ 13ರಂದು ಮುಕ್ತಾಯಗೊಳ್ಳುವುದು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು