NEWSದೇಶ-ವಿದೇಶ

ನಾಳೆ ರಾತ್ರಿ 9ಗಂಟೆಗೆ ಮನೆ ದೀಪಗಳಷ್ಟೇ ಆರಿಸಿ

ಬೀದಿ ದೀಪಗಳು ಬೆಳಗುತ್ತಿರಲಿ ಎಂದು ತಿಳಿಸಿದ ಕೇಂದ್ರ ಸರ್ಕಾರ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: “ಭಾರತೀಯರೆಲ್ಲರೂ ಏ.5ರಂದು ರಾತ್ರಿ 9 ಗಂಟೆಗೆ 9 ನಿಮಿಷಗಳ ಕಾಲ ತಮ್ಮ ಮನೆಗಳಲ್ಲಿಯ ವಿದ್ಯುತ್ ದೀಪಗಳನ್ನು ನಂದಿಸಲು ಕೋರಿರುತ್ತಾರೆ. ಈ ಕುರಿತು ಸಾಮಾನ್ಯ ಜನರಲ್ಲಿ ವಿದ್ಯುತ್ ದೀಪಗಳನ್ನು ಮಾತ್ರ ನಂದಿಸಲು ಹಾಗೂ ಇತರೆ ವಿದ್ಯುತ್ ಉಪಕರಣಗಳನ್ನು ಅಂದರೆ ರೆಫ್ರಿಜರೇಟರ್, ಹವಾನಿಯಂತ್ರಿತ ಸಾಧನಗಳು, ಫ್ಯಾನ್ ಗಳು ಇತ್ಯಾದಿಗಳನ್ನು ದಿನನಿತ್ಯದಂತೆ ಚಾಲ್ತಿಯಲ್ಲಿಡಲು ಕೋರಲಾಗಿದೆ.

ಇಂದು ರಾಷ್ಟ್ರೀಯ ವಿದ್ಯುತ್ ರವಾನೆ ಕೇಂದ್ರದೊಂದಿಗೆ ವಿದ್ಯುತ್ ಜಾಲದ ಭದ್ರತೆ ಕುರಿತು ವೀಡಿಯೋ ಕಾನ್ಫರೆನ್ಸ್ ಮುಖಾಂತರ ವಿಶ್ಲೇಷಿಸಲಾಯಿತು.

ರಾಷ್ಟ್ರೀಯ ವಿದ್ಯುತ್ ರವಾನೆ ಕೇಂದ್ರ ರವರ ಸೂಚನೆ ಪ್ರಕಾರ ಎಲ್ಲಾ ಹಿರಿಯ ಅಧಿಕಾರಿಗಳು, ವಿದ್ಯುತ್ ಉತ್ಪಾದನಾ ಕೇಂದ್ರಗಳು ವಿದ್ಯುತ್ ವಿತರಣಾ ಕಂಪನಿಗಳು ರಾಜ್ಯ ವಿದ್ಯುತ್ ರವಾನೆ ಕೇಂದ್ರ  ಹಾಗೂ ಕ.ವಿ.ಪ್ರ.ನಿನಿ ರವರಿಗೆ ಮೇಲಿನ ಅವಧಿಯಲ್ಲಿ ವಿದ್ಯುತ್ ಸರಬರಾಜಿನ ಮೇಲ್ವಿಚರಣೆಯನ್ನು ಸೂಕ್ತ ರೀತಿಯಲ್ಲಿ ಮಾಡುವಂತೆ ಕೋರಲಾಗಿದೆ.

ಎಲ್ಲಾ ವಿದ್ಯುತ್ ಸರಬರಾಜು ಕಂಪನಿಗಳಿಗೆ ಅಂದು ವಿದ್ಯುತ್ ಸರಬರಾಜನ್ನು ಸರ್ಮಪಕವಾಗಿ ನಿರ್ವಹಿಸಲು ಸಲಹಾ ಟಿಪ್ಪಣಿಯನ್ನು ಹೊರಡಿಸಲಾಗಿದೆ.

ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟೀಯಿಂದ ಬೀದಿ ದೀಪಗಳನ್ನು ಚಾಲ್ತಿಯಲ್ಲಿ ಇಡಲು ಸ್ಥಳೀಯ ಸಂಸ್ಥೆಗಳಿಗೆ ಸೂಚಿಸಲಾಗಿದೆ. ಆಸ್ಪತ್ರೆಗಳಯ ಹಾಗೂ ತುರ್ತು ಸೇವೆಯಲ್ಲಿ ಇರುವ ಸಂಸ್ಥೆಗಳ ವಿದ್ಯುತ್ ದೀಪವನ್ನು ಮೇಲಿನ ಅವಧಿಯಲ್ಲಿ ಚಾಲ್ತಿಯಲ್ಲಿ ಇಡಲು ಕೋರಲಾಗಿದೆ.

ವಿದ್ಯುತ್ ಸರಬರಾಜಿನ ಬಗ್ಗೆ ಭಯಪಡುವ ಅಗತ್ಯವಿಲ್ಲ ಹಾಗೂ ಸಾರ್ವಜನಿಕರು ಈ ಕುರಿತು ಸಹಕರಿಸಬೇಕೆಂದು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ತಿಳಿಸಿದೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಹಿಟ್‌ ಧಾರಾವಾಹಿಗಳ ನಿರ್ದೇಶಕ, ನಿರ್ಮಾಪಕ ರಾಮ್​ಜೀ