NEWSನಮ್ಮರಾಜ್ಯರಾಜಕೀಯ

ನೆಹರೂ ದೇಶಕ್ಕಾಗಿ ಆಸ್ತಿಯನ್ನೇ ಕೊಟ್ಟಿದ್ದಾರೆ, ಸಿ.ಟಿ.ರವಿ ನೀವೇನು 10 ಪೈಸೆ ಕೊಟ್ಟಿದ್ದೀರಾ : ಎಚ್‌.ವಿಶ್ವನಾಥ್‌ ಕಿಡಿ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಪಕ್ಷ ರಾಜಕಾರಣಕ್ಕೆ ಸೋಲಾಗಿದೆ. ರಾಕ್ಷಸ ರಾಜಕಾರಣ ಆರಂಭವಾಗಿದೆ. ಪಕ್ಷದ ಆಂತರಿಕ ಪ್ರಜಾಪ್ರಭುತ್ವ ನಶಿಸಿದೆ ಎಂದು ವಿಧಾನ ಪರಿಷತ್‌ ಬಿಜೆಪಿ ಸದಸ್ಯ ಎಚ್‌.ವಿಶ್ವನಾಥ್‌ ವಿಷಾದಿಸಿದರು.

ನಗರದಲ್ಲಿ ಸೋಮವಾರ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ನೆಹರೂ ಅವರು ದೇಶಕ್ಕಾಗಿ ಆಸ್ತಿಯನ್ನೇ ಕೊಟ್ಟಿದ್ದಾರೆ. ಸಿ.ಟಿ.ರವಿ ನೀವೇನು 10 ಪೈಸೆ ಕೊಟ್ಟಿದ್ದೀರಾ ಎಂದು  ಬಿಜೆಪಿ ಶಾಸಕನ ವಿರುದ್ಧವೇ ಹರಿಹಾಯ್ದರು.

ನೀವೇನು ಕೊಟ್ಟಿದ್ದೀರಿ ಎಂದು ಹೇಳಿ? ಈ ರೀತಿ ಅಪ್ರಯೋಜಕ ಟೀಕೆಗಳನ್ನು ಮಾಡಲು ನಾಚಿಕೆ ಆಗಲ್ವ ನಿಮಗೆ ಎಂದು  ಕಿಡಿಕಾರಿದರು.

ನೆಹರೂ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡುವ ಮೊದಲು ಅವರ ಬಗ್ಗೆ ಸಿ.ಟಿ.ರವಿ ಓದಿಕೊಳ್ಳಲಿ. ನೆಹರೂ ಅವರು ಅಧಿಕಾರದ ಅವಧಿಗಿಂತ ಹೆಚ್ಚಿನ ಕಾಲ ಜೈಲಿನಲ್ಲಿದ್ದರು. ಅವರ ಇಡೀ ಕುಟುಂಬವೇ ಸ್ವಾತಂತ್ರ್ಯ ಹೋರಾಟದಲ್ಲಿ ತೊಡಗಿತ್ತು. ದೇಶಕ್ಕೆ ಶಾಂತಿ ಸಂದೇಶ ಸಾರಿದವರು ನೆಹರೂ ಇವರ ಬಗ್ಗೆ ಲಘುವಾಗಿ ರವಿ ಮಾತಾಡಿರುವುದು ಸರಿಯಲ್ಲ. ಇದು ಬಿಜೆಪಿ ಪಕ್ಷಕ್ಕೂ ಶೋಭೆ ತರುವುದಿಲ್ಲ ಎಂದು ಹೇಳಿದರು.

ಹುಕ್ಕಾ, ಬಾರ್ ಏನಿದು. ಅಯ್ಯೊಯ್ಯೊ ದೇವಾ ಭಾರತದ ಅಸ್ಮಿತೆ ಗೌರವವನ್ನು ಕಳೆಯಬೇಡಿ. ನೆಹರೂ ಭಾರತದ ಅಸ್ಮಿತೆ. ಇನ್ನಾರನ್ನೋ ರಮಿಸಲು, ಒಬ್ಬರನ್ನು ತೆಗಳುವುದು ಖಂಡನೀಯ. ನಿಮ್ಮ ಹೇಳಿಕೆ ವಾಪಸ್ ಪಡೆದು ಸಮಜಾಯಿಷಿ ಕೊಡಿ ಎಂದು ಒತ್ತಾಯಿಸಿದರು.

ಇನ್ನು ನೆಹರೂ ಅವರು ಕಾಲವಾದಾಗ ವಾಜಪೇಯಿ ಮರುಗಿದ್ದರು. ನೆಹರೂ ಆಡಳಿತವನ್ನು ಹೊಗಳಿದ್ದರಲ್ಲದೇ, ರಾಜಕುಮಾರನೊಬ್ಬನನ್ನು ಭಾರತ ಕಳೆದುಕೊಂಡಿದೆ ಎಂದಿದ್ದರು. ಈ ಮಾತುಗಳು ಸಿ.ಟಿ.ರವಿ ಅವರಿಗೆ ಅರ್ಥವಾಗಬೇಕು ಎಂದು ಕುಟುಕಿದರು.

ರವಿ ವಿರುದ್ಧ ಮಾತನಾಡಲು ಹೋಗಿ ಪ್ರಿಯಾಂಕ ಖರ್ಗೆ, ವಾಜಪೇಯಿ ಅವರನ್ನು ‘ಕುಡುಕ’ ಎಂದುಬಿಟ್ಟರು. ಕವಿ ಹೃದಯದ ವಾಜಪೇಯಿ, ಅವರ ಭಾಷಣ ಕೇಳಿ, ಬರಹಗಳನ್ನು ಓದಿ. ಅಂತಹ ವಾಜಪೇಯಿ ಬಗ್ಗೆ ಈ ರೀತಿ ಮಾತಾನಾಡುವುದು ಸರಿಯಲ್ಲ. ನೆಹರೂ ಹಾಗೆ ವಾಜಪೇಯಿ ಸಹ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗೌರವವಿದೆ. ಅವರ ಬಗ್ಗೆ ಕೀಳಾಗಿ ಮಾತನಾಡುವ ನಿಮಗೆ ಬುದ್ದಿ ಇದಿಯಾ? ನಿಮ್ಮ ತಂದೆ ನೋಡಿ‌ ಕಲಿತಿಕೊ ಎಂದು ಪ್ರಿಯಾಂಕಾ ಖರ್ಗೆ ಕಿವಿ ಹಿಂಡಿದರು.

ಏನೇನೋ ಮಾತನಾಡುವುದು ಸರಿಯಲ್ಲ. ವೈಯಕ್ತಿಕ ಜೀವನದ ಬಗ್ಗೆ ಮಾತನಾಡುವ ಅಧಿಕಾರ ಯಾರಿಗೂ ಇಲ್ಲ. ಬೇಕಾದರೆ ಅವರ ಆಡಳಿತವನ್ನು ಟೀಕಿಸಿ. ಇಂತಹ ಮಾತುಗಳು ಬರುತ್ತಿದ್ದರೂ ಮಾಜಿ ಮುಖ್ಯಮಂತ್ರಿಗಳಾದ ಎಚ್.ಡಿ.ಕುಮಾರಸ್ವಾಮಿ, ಸಿದ್ದರಾಮಯ್ಯ, ಬಿಎಸ್‌ವೈ, ಸದಾನಂದ ಗೌಡ, ಜಗದೀಶ್ ಶೆಟ್ಟರ್ ಇವರೆಲ್ಲಾ ಬಾಯಿ ಬಿಡುತ್ತಿಲ್ಲ‌. ಬಾಯಿ ಮುಚ್ಚಿ ಎಂದು ಹೇಳುವ ನೈತಿಕತೆ ಕಳೆದು ಕೊಂಡಿದ್ದೀರಾ ನೀವು ಎಂದು ವಾಗ್ದಾಳಿ ನಡೆಸಿದರು.

ಖಾತೆ ವಿಚಾರವಾಗಿ ಸಚಿವರಲ್ಲಿ ಎದ್ದಿರುವ ಅಸಮಾಧಾನ ಬಗ್ಗೆ ಪ್ರತಿಕ್ರಿಯಿಸಿ, ಇಂತದ್ದೇ ಖಾತೆ ಬೇಕು ಎನ್ನುವುದಕ್ಕೆ ನೀವೇನು ತಜ್ಞರೆ. ಎಲ್ಲರೂ ದುಡ್ಡಿರುವ ಖಾತೆ ಬೇಕು ಎಂದರೆ ಹೇಗೆ. ನಮ್ಮಲ್ಲಿ ಎಲ್ಲ ಕ್ಯಾಬಿನೆಟ್ ಸಚಿವರೆ ಆಗಿದ್ದಾರೆ. ಇವರೆಲ್ಲ ಸರ್ಕಾರದ ಭಾಗ. ಅದನ್ನೂ ಅರ್ಥ ಮಾಡಿಕೊಳ್ಳದೆ ಹೊದರೆ ಹೇಗೆ.

ಪ್ರತಿ ಇಲಾಖೆಯಲ್ಲಿಯೂ ಕೆಲಸ ಇದೆ. ಬೊಮ್ಮಾಯಿ ಕೆಲಸ ಶುರು ಮಾಡಲಿ. ವಿಭಿನ್ನವಾಗಿ ಕೆಲಸ ಮಾಡುತ್ತಿದ್ದಾರೆ. ಅವರಿಗೆ ಸಹಕಾರ ಕೊಡಿ. ರಾಜ್ಯದ ಹಿತಾಸಕ್ತಿ ಮುಖ್ಯ. ಖಾತೆ ಕಿತ್ತಾಟ ಬಿಡಿ. ಕೊಟ್ಟ ಖಾತೆಯಲ್ಲಿ ಸಾಧಿಸಿ ತೋರಿಸಿ ಎಂದು ಸಲಹೆ ನೀಡಿದರು.

ರಾಜಕಾರಣಿಗಳ ಆರೋಪ ಪ್ರತ್ಯಾರೋಪಗಳಲ್ಲಿ ಕನ್ನಡ ಭಾಷೆ ಕೊಲೆಯಾಗುತ್ತಿದೆ. ನಾವಾಡುವ ಭಾಷೆ ನಮ್ಮ ವ್ಯಕ್ತಿತ್ವವನ್ನು ತೋರಿಸುತ್ತದೆ. ಇಂಥವರ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳುವ ಸ್ಥಿತಿಯಲ್ಲಿ ಯಾವ ಪಕ್ಷವೂ ಇಲ್ಲ. ಕನಿಷ್ಠ ಇದು ಸರಿಯಲ್ಲ ಎಂದು ಹೇಳಬೇಕು ಎಂದು ಸಲಹೆ ನೀಡಿದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು