NEWSನಮ್ಮರಾಜ್ಯ

ನಾಳೆಯಿಂದ ಮನೆ ಮನೆಗೆ ತರಕಾರಿ ಸರಬರಾಜು

ಗದಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ <span style="color: #ff0000;">|</span> ಎನ್.ಯತೀಶ ಹೇಳಿಕೆ

ವಿಜಯಪಥ ಸಮಗ್ರ ಸುದ್ದಿ

ಗದಗ: ಕೊರೊನಾ(ಕೋವಿಡ್ 19) ವೈರಸ್ಹರಡದಂತೆ ತಡೆಗಟ್ಟುವ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ಗದಗ-ಬೆಟಗೇರಿ ನಗರ ಸಭೆ ವ್ಯಾಪ್ತಿಯ ಸಾರ್ವಜನಿಕರಿಗೆ ನಾಳೆಯಿಂದ ಮನೆ ಮನೆಗೆತರಕಾರಿ  ಮಾರಾಟಕ್ಕೆ ಕ್ರಮ ಜರುಗಿಸಲಾಗುತ್ತಿದೆ ಎಂದು ಗದಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ ತಿಳಿಸಿದರು.

ಗದಗ-ಬೆಟಗೇರಿ ನಗರ ಸಭೆ ವ್ಯಾಪ್ತಿಯ ಆವರಣದಲ್ಲಿಂದು ಜರುಗಿದ ತರಕಾರಿ, ಕಿರಾಣಿ ಹಾಗೂ ಹೊಟೇಲ್ ವರ್ತಕರ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು. ನಗರಸಭೆ ವ್ಯಾಪ್ತಿಯ ತರಕಾರಿಮಾರುಕಟ್ಟೆಗಳಲ್ಲಿ ಜನಸಾಂದ್ರತೆ ಹೆಚ್ಚಾಗುತ್ತಿದ್ದು ಇದರಿಂದ ವೈರಸ್ ತಗಲುವ ಭೀತಿಯಿದ್ದು ಮುಂಜಾಗ್ರತಾ ಕ್ರಮವಾಗಿ ನಾಳೆಯಿಂದ ನಗರದ ತರಕಾರಿಮಾರುಟ್ಟೆಗಳನ್ನು ಬಂದ ಮಾಡಲಾಗುತ್ತಿದೆ ಎಂದು ತಿಳಿಸಿದರು.

ನಗರ ಸಭೆವ್ಯಾಪ್ತಿಯ ಸಾರ್ವಜನಿಕರಿಗೆ ತೊಂದರೆಯಾಗದಂತೆ ನಾಳೆಯಿಂದ ತರಕಾರಿಗಳನ್ನು ವಾರ್ಡವಾರು ತಳ್ಳು ಗಾಡಿಗಳ ಮುಖಾಂತರ ಮನೆ ಮನೆಗೆಮಾರಾಟ ಮಾಡಲು ವರ್ತಕರು ಸಹಮತ ವ್ಯಕ್ತ ಪಡಿಸಿದ್ದು ಈ ಕಾರ್ಯಕ್ಕೆಪೊಲೀಸ್ ಇಲಾಖೆ ಅಗತ್ಯದ ಸಹಕಾರ ನೀಡಲಾಗುವುದು. ವಾರ್ಡ್‌ವಾರು ತರಕಾರಿ ಮಾರಾಟ ಮಾಡುವ ವರ್ತಕರಿಗೆ ಗುರುತಿನ ಚೀಟಿಗಳನ್ನು ನೀಡಲಾಗುವುದು. ವರ್ತಕರು, ವ್ಯಾಪಾರಸ್ಥರು ಸಾಮಾಜಿ ಅಂತರಕಾಯ್ದುಕೊಳ್ಳುವ ಹಾಗೂ ಸ್ಯಾನಿಟೈಸರ್ಗಳನ್ನು ಬಳಸುವಂತೆ ತಿಳಿಸಿದರು.‌

ವಾರ್ಡ್‌ವಾರು ತರಕಾರಿ ಮಾರಾಟ ಮಾಡುವದರ ಕುರಿತು ಸಾರ್ವಜನಿಕರಿಗೆಮಾಹಿತಿ ನೀಡಲು ನಗರಸಭೆ ವತಿಯಿಂದ  ಅಗತ್ಯದ ಕ್ರಮಕೈಗೊಳ್ಳಲಾಗುವುದು ಎಂದರು.

ಸಾರ್ವಜನಿಕರು ತರಕಾರಿ ಖರೀದಿ ಸಂದರ್ಭದಲ್ಲಿ ಮನೆಯಿಂದ ಯಾರಾದರೂ ಒಬ್ಬರೇ ತರಕಾರಿ ಖರೀದಿಗೆಆಗಮಿಸಿ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದರು.

ಕಿರಾಣಿ ಅಂಗಡಿಗಳು ಮುಂಜಾನೆ 7ಗಂಟೆಯಿಂದ 10 ಗಂಟೆಯವರೆಗೆ ತೆರೆದಿದ್ದು ಅಂಗಡಿಗಳಿಗೆ ಆಗಮಿಸುವ ಸಾರ್ವಜನಿಕರು ಒಬ್ಬೊಬ್ಬರಾಗಿ ಆಗಮಿಸಿ ಅಗತ್ಯದ ಸಾಮಗ್ರಿಗಳನ್ನು ಖರೀದಿಮಾಡಲು ಮನವಿ ಮಾಡಿದ ಅವರು ಅಂಗಡಿಗಳಲ್ಲಿ ಸಾಮಾಜಿಕ ಅಂತರಹಾಗೂ ಸ್ಯಾನಿಟೈಸರ್‌ ಬಳಸುವಂತೆ ವರ್ತಕರಿಗೆ ಸೂಚನೆ ನೀಡಿದರು.

ನಗರದಸಾರ್ವಜನಿಕರು ನಾಳೆಯಿಂದ ತರಕಾರಿಗಾಗಿ ಬೀದಿಗೆ ಇಳಿಯದೆ ಅವಶ್ಯವಿರುವ ಕಿರಾಣಿ ಸಾಮಗ್ರಿಗಳ ಖರೀದಿಗಾಗಿ ಮನೆಯಿಂದ ಒಬ್ಬಸದಸ್ಯರು ನಿಗದಿಪಡಿಸಿದ ಸಮಯದಲ್ಲಿ ಬಂದು ಖರೀದಿಸಿ ವೈರಸ್ ಸೋಂಕು ಹರಡದಂತೆ ಈ ಮುಂಜಾಗ್ರತಾ ಕಾರ್ಯದಲ್ಲಿ ಪ್ರತಿಯೊಬ್ಬರೂ ಸಹಕರಿಸುವಂತೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಸಾರ್ವಜನಿಕರಲ್ಲಿ ಮನವಿ ಮಾಡಿದರು.

ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ  ನಿರ್ದೇಶಕ ರುದ್ರೇಶ, ಗದಗ ತಹಸೀಲ್ದಾರ್‌  ಶ್ರೀನಿವಾಸಮೂರ್ತಿ ಕುಲಕರ್ಣಿ, ಗದಗ-ಬೆಟಗೇರಿನಗರಸಭೆ ಪೌರಾಯುಕ್ತ ಮನ್ಸೂರ  ಅಲಿ, ಸಿ.ಪಿ.ಐ.ಆರ್.ಎಫ್, ದೇಸಾಯಿ, ಗದಗ  ಡಿ.ಎಸ್.ಪಿ. ಪ್ರಹ್ಲಾದ, ನಗರದ ತರಕಾರಿ, ಕಿರಾಣಿ ವರ್ತಕರು ಉಪಸ್ಥಿತರಿದ್ದರು.

Leave a Reply

error: Content is protected !!
LATEST
ಚಾಮುಂಡಿ ಹುಟ್ಟುಹಬ್ಬ: ಬೆಳ್ಳಿ ಪಲ್ಲಕ್ಕಿ ಉತ್ಸವಕ್ಕೆ ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಚಾಲನೆ ನಾಡ ಅಧಿದೇವತೆ ಚಾಮುಂಡಿ ತಾಯಿಯ ವರ್ಧಂತಿ ಸಂಭ್ರಮ: ಬೆಟ್ಟಕ್ಕೆ ಹರಿದು ಬರುತ್ತಿದೆ ಭಕ್ತ ಸಾಗರ KRSನಿಂದ ಕಾವೇರಿ ನದಿಗೆ 1.30 ಲಕ್ಷ ಕ್ಯುಸೆಕ್ ನೀರು ಬಿಡುಗಡೆ ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ...