NEWSದೇಶ-ವಿದೇಶ

ನಾಳೆ ರಾತ್ರಿ 9ಗಂಟೆಗೆ ಮನೆ ದೀಪಗಳಷ್ಟೇ ಆರಿಸಿ

ಬೀದಿ ದೀಪಗಳು ಬೆಳಗುತ್ತಿರಲಿ ಎಂದು ತಿಳಿಸಿದ ಕೇಂದ್ರ ಸರ್ಕಾರ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: “ಭಾರತೀಯರೆಲ್ಲರೂ ಏ.5ರಂದು ರಾತ್ರಿ 9 ಗಂಟೆಗೆ 9 ನಿಮಿಷಗಳ ಕಾಲ ತಮ್ಮ ಮನೆಗಳಲ್ಲಿಯ ವಿದ್ಯುತ್ ದೀಪಗಳನ್ನು ನಂದಿಸಲು ಕೋರಿರುತ್ತಾರೆ. ಈ ಕುರಿತು ಸಾಮಾನ್ಯ ಜನರಲ್ಲಿ ವಿದ್ಯುತ್ ದೀಪಗಳನ್ನು ಮಾತ್ರ ನಂದಿಸಲು ಹಾಗೂ ಇತರೆ ವಿದ್ಯುತ್ ಉಪಕರಣಗಳನ್ನು ಅಂದರೆ ರೆಫ್ರಿಜರೇಟರ್, ಹವಾನಿಯಂತ್ರಿತ ಸಾಧನಗಳು, ಫ್ಯಾನ್ ಗಳು ಇತ್ಯಾದಿಗಳನ್ನು ದಿನನಿತ್ಯದಂತೆ ಚಾಲ್ತಿಯಲ್ಲಿಡಲು ಕೋರಲಾಗಿದೆ.

ಇಂದು ರಾಷ್ಟ್ರೀಯ ವಿದ್ಯುತ್ ರವಾನೆ ಕೇಂದ್ರದೊಂದಿಗೆ ವಿದ್ಯುತ್ ಜಾಲದ ಭದ್ರತೆ ಕುರಿತು ವೀಡಿಯೋ ಕಾನ್ಫರೆನ್ಸ್ ಮುಖಾಂತರ ವಿಶ್ಲೇಷಿಸಲಾಯಿತು.

ರಾಷ್ಟ್ರೀಯ ವಿದ್ಯುತ್ ರವಾನೆ ಕೇಂದ್ರ ರವರ ಸೂಚನೆ ಪ್ರಕಾರ ಎಲ್ಲಾ ಹಿರಿಯ ಅಧಿಕಾರಿಗಳು, ವಿದ್ಯುತ್ ಉತ್ಪಾದನಾ ಕೇಂದ್ರಗಳು ವಿದ್ಯುತ್ ವಿತರಣಾ ಕಂಪನಿಗಳು ರಾಜ್ಯ ವಿದ್ಯುತ್ ರವಾನೆ ಕೇಂದ್ರ  ಹಾಗೂ ಕ.ವಿ.ಪ್ರ.ನಿನಿ ರವರಿಗೆ ಮೇಲಿನ ಅವಧಿಯಲ್ಲಿ ವಿದ್ಯುತ್ ಸರಬರಾಜಿನ ಮೇಲ್ವಿಚರಣೆಯನ್ನು ಸೂಕ್ತ ರೀತಿಯಲ್ಲಿ ಮಾಡುವಂತೆ ಕೋರಲಾಗಿದೆ.

ಎಲ್ಲಾ ವಿದ್ಯುತ್ ಸರಬರಾಜು ಕಂಪನಿಗಳಿಗೆ ಅಂದು ವಿದ್ಯುತ್ ಸರಬರಾಜನ್ನು ಸರ್ಮಪಕವಾಗಿ ನಿರ್ವಹಿಸಲು ಸಲಹಾ ಟಿಪ್ಪಣಿಯನ್ನು ಹೊರಡಿಸಲಾಗಿದೆ.

ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟೀಯಿಂದ ಬೀದಿ ದೀಪಗಳನ್ನು ಚಾಲ್ತಿಯಲ್ಲಿ ಇಡಲು ಸ್ಥಳೀಯ ಸಂಸ್ಥೆಗಳಿಗೆ ಸೂಚಿಸಲಾಗಿದೆ. ಆಸ್ಪತ್ರೆಗಳಯ ಹಾಗೂ ತುರ್ತು ಸೇವೆಯಲ್ಲಿ ಇರುವ ಸಂಸ್ಥೆಗಳ ವಿದ್ಯುತ್ ದೀಪವನ್ನು ಮೇಲಿನ ಅವಧಿಯಲ್ಲಿ ಚಾಲ್ತಿಯಲ್ಲಿ ಇಡಲು ಕೋರಲಾಗಿದೆ.

ವಿದ್ಯುತ್ ಸರಬರಾಜಿನ ಬಗ್ಗೆ ಭಯಪಡುವ ಅಗತ್ಯವಿಲ್ಲ ಹಾಗೂ ಸಾರ್ವಜನಿಕರು ಈ ಕುರಿತು ಸಹಕರಿಸಬೇಕೆಂದು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ತಿಳಿಸಿದೆ.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ