NEWSನಮ್ಮಜಿಲ್ಲೆ

ನಿಮ್ಮ ಮನೆ ಬಳಿಗೆ ಅಗತ್ಯ ವಸ್ತುಗಳ ಡೆಲಿವರಿ

ಸಹಾಯ ವಾಣಿ 080-61914960ಗೆ ಚಾಲನೆ ನೀಡಿದ ಸಚಿವ ಆರ್‌. ಅಶೋಕ್‌

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕೋವಿಡ್-19 ಸಂಬಂಧ ಅಗತ್ಯ ವಸ್ತುಗಳ ಹೋಮ್ ಡೆಲಿವರಿ ಸಹಾಯವಾಣಿಗೆ   ಮೇಯರ್‌ ಗೌತಮ್‌ ಕುಮಾರ್‌, ಸಚಿವ ಆರ್.ಅಶೋಕ್, ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಪಾಲಿಕೆ ಕೇಂದ್ರ ಕಚೇರಿ ಮಹಾಪೌರರ ಕೊಠಡಿಯಲ್ಲಿ ಚಾಲನೆ ನೀಡಿದರು.

ಕೋವಿಡ್-19 ಸಂಬಂಧ ಅಗತ್ಯ ವಸ್ತುಗಳನ್ನು ಮನೆ ಮೆನೆಗೆ ತಲುಪಿಸುವ ಉದ್ದೇಶದಿಂದ ಈಗಾಗಲೇ ಪ್ರಾಯೋಗಿಕವಾಗಿ ಕತ್ರಿಗುಪ್ಪೆ ವಾರ್ಡ್ ನಲ್ಲಿ ‘ಹೋಮ್ ಡೆಲಿವರಿ’ ಸಹಾಯವಾಣಿಯನ್ನು ಆರಂಭಿಸಲಾಗಿದ್ದು, ಇದೀಗ ಬೆಂಗಳೂರು ದಕ್ಷಿಣ ಲೊಕಸಭಾ ಕ್ಷೇತ್ರ ವ್ಯಾಪ್ತಿಯ ಬಸವನಗುಡಿ, ಜಯನಗರ, ಪದ್ಮನಾಭನಗರ ಹಾಗೂ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರಗಳಿಗೂ ಈ ಸೇವೆಯನ್ನು ವಿಸ್ತಿರಿಸಲಾಗುತ್ತಿದೆ ಎಂದು ಸಚಿವ ಆರ್‌. ಅಶೋಕ್‌  ತಿಳಿಸಿದರು.

ಅಗತ್ಯ ದಿನಬಳಕೆಯ ಸಾಮಗ್ರಿಗಳು, ದಿನಸಿ, ತರಕಾರಿ, ಔಷಧ ಸಾಮಗ್ರಿಗಳನ್ನು ನೇರವಾಗಿ ಮನೆ ಬಾಗಿಲಿಗೆ ತಲುಪಿಸುವ ಹೋಮ್ ಡೆಲಿವರಿ ಸೇವೆ ಇದಾಗಿದೆ. ಸಹಾಯವಾಣಿ ಸಂಖ್ಯೆ 080-61914960ಗೆ ಕರೆ ಮಾಡಿ ಅಗತ್ಯ ವಸ್ತುಗಳನ್ನು ಪಡೆಯಬಹುದಾಗಿದೆ ಎಂದು ಮಾಹಿತಿ ನೀಡಿದರು.

ಈ ಭಾಗದಲ್ಲಿ 7.5 ಲಕ್ಷ ಜನಸಂಖ್ಯೆ, 2.5 ಲಕ್ಷ ಮನೆಗಳು ಹಾಗೂ ದಿನಸಿ ಅಂಗಡಿ, ತರಕಾರಿ ಮಳಿಗೆ, ಔಷಧಿ ಮಳಿಗೆ, ಮಾಂಸದಗಡಿಗಳು ಸೇರಿದಂತೆ ಒಟ್ಟು 1926 ಮಳಿಗೆಗಳನ್ನು ಮ್ಯಾಪಿಂಗ್ ಮಾಡಲಾಗಿದ್ದು, ಉಚಿತವಾಗಿ ಡಿಲಿವರಿ ವ್ಯವಸ್ಥೆಯನ್ನು ಮಾಡಲಾಗಿದೆ ಎಂದರು.

ಪ್ರಸ್ತುತ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ ವ್ಯಾಪ್ತಿಗೆ ಮಾತ್ರ ಈ ಸೇವೆ ಇರಲಿದ್ದು, ಇದು ಯಶಸ್ವಿಯಾದರೆ ಮುಂದಿನ ದಿನಗಳಲ್ಲಿ ನಗರಾದ್ಯಂತ ಇದನ್ನು ವಿಸ್ತರಿಸಲಾಗುವುದು ಎಂದು ತಿಳಿಸಿದರು.

ಈ ವೇಳೆ ಉಪಮಹಾಪೌರ ರಾಮಮೋಹನ ರಾಜು, ದಕ್ಷಿಣ ವಲಯ ಜಂಟಿ ಆಯುಕ್ತ ವೀರಭದ್ರ ಸ್ವಾಮಿ, ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿ ರೋಹಿಣಿ ಕಟೋಚ್ ಸೆಪಟ್, ಮುಖ್ಯ ಆರೋಗ್ಯಾಧಿಕಾರಿ ಡಾ. ವಿಜೇಂದ್ರ ಹಾಗೂ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ