NEWSನಮ್ಮಜಿಲ್ಲೆನಮ್ಮರಾಜ್ಯ

ನ.19 ರಿಂದ ಡಿ.10ರವರೆಗೆ ನಮ್ಮ ಶೌಚಾಲಯ, ನಮ್ಮ ಗೌರವ ಆಂದೋಲನಕ್ಕೆ ಚಾಲನೆ

ವಿಜಯಪಥ ಸಮಗ್ರ ಸುದ್ದಿ

ಬೆಂ.ಗ್ರಾ.: ವಿಶ್ವ ಶೌಚಾಲಯ ದಿನದ ಅಂಗವಾಗಿ ನವೆಂಬರ್ 19ರಿಂದ ಡಿಸೆಂಬರ್ 10 ರವರೆಗೆ ನಡೆಯುವ ‘ನಮ್ಮ ಶೌಚಾಲಯ, ನಮ್ಮ ಗೌರವ ಆಂದೋಲನ’ಕ್ಕೆ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಶಾಂತಕುಮಾರ್ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು.

ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ವತಿಯಿಂದ ದೇವನಹಳ್ಳಿ ತಾಲೂಕಿನ ಕುಂದಾಣ ಗ್ರಾಮದಲ್ಲಿ ಆಯೋಜಿಸಿದ್ದ ವಿಶ್ವ ಶೌಚಾಲಯ ದಿನ ಆಚರಣೆಯಲ್ಲಿ ಕಾರ್ಯಕ್ರಮಕ್ಕೆ ಹಸಿರು ನಿಶಾನೆ ತೋರಿಸಿದ ಬಳಿಕ ಅವರು ಮಾತನಾಡಿದರು.

ಪ್ರತಿಯೊಬ್ಬರೂ ತಮ್ಮ ಮನೆ, ಸುತ್ತಮುತ್ತಲಿನ ವಾತಾವರಣವನ್ನು ಸ್ವಚ್ಛವಾಗಿ, ನೈರ್ಮಲ್ಯದಿಂದ ಕಾಪಾಡಬೇಕು. ನೈರ್ಮಲ್ಯ ಕಾಪಾಡುವುದರಿಂದ ನಮ್ಮ ಆರೋಗ್ಯ ವೃದ್ಧಿಸಿಕೊಳ್ಳಬಹುದು. ಹಾಗಾಗಿ ಪ್ರತಿಯೊಬ್ಬರೂ ಬಯಲು ಶೌಚ ಮಾಡುವುದನ್ನು ಬಿಟ್ಟು ಮನೆ ಶೌಚಾಲಯಗಳನ್ನು ಬಳಸಬೇಕು ಎಂದು ಹೇಳಿದರು.

ಇನ್ನು ಇಷ್ಟಕ್ಕೆ ಸೀಮಿತವಾಗದೆ ಸುತ್ತ ಮುತ್ತಲಿನ ಪ್ರತಿಯೊಬ್ಬ ಜನರು ಶೌಚಾಲಯ ಬಳಸುವಂತೆ ಪ್ರೇರಣೆ ತುಂಬಬೇಕು. ಪ್ರತಿಯೊಬ್ಬರೂ ಸಾರ್ವಜನಿಕ ಶೌಚಾಲಯಗಳನ್ನು ನಮ್ಮ ಮನೆ ಶೌಚಾಲಯಗಳಂತೆ ಬಳಸಿಕೊಂಡ ಬಯಲು ಶೌಚ್ಛ ಮುಕ್ತ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕು ಎಂದರು.

ಈ ವೇಳೆ ಶೌಚಾಲಯ ಬಳಕೆ ಹಾಗೂ ಸ್ವಚ್ಛತೆಯ ಕುರಿತು ಗ್ರಾಮಸ್ಥರಿಗೆ ಅರಿವು ಮೂಡಿಸುವ ದೃಷ್ಟಿಯಿಂದ ಗ್ರಾಮದಲ್ಲಿ ಜಾಗೃತಿ ಜಾಥಾ ನಡೆಸಲಾಯಿತು. ಈ ಸಂದರ್ಭದಲ್ಲಿ ದೇವನಹಳ್ಳಿ ತಾಪಂ ಇಒ ಶ್ರೀನಾಥಗೌಡ ಅವರು
ಶೌಚಾಲಯ ಬಳಕೆ ಹಾಗೂ ನೈರ್ಮಲ್ಯ ಕಾಪಾಡುವ ಕುರಿತು ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿಯನ್ನು ಬೋಧಿಸಿದರು.

ಕುಂದಾಣ ಗ್ರಾಮ ಪಂಚಾಯಿತಿ ಅಧ್ಯಕ್ಷೆ ನೇತ್ರಾವತಿ ನಾಗೇಶ್, ಜಿ.ಪಂ ಉಪಕಾರ್ಯದರ್ಶಿ ಟಿ.ಕೆ ರಮೇಶ್, ಜಿ.ಪಂ ಯೋಜನಾ ನಿರ್ದೇಶಕ ವಿಠಲ್ ಕಾವ್ಳೆ, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಸುನೀಲಕುಮಾರ, ಕುಂದಾಣ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಕುಮಾರ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು, ವಿದ್ಯಾರ್ಥಿಗಳು, ಸಾರ್ವಜನಿಕರು ಭಾಗಿಯಾಗಿದ್ದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು