NEWSದೇಶ-ವಿದೇಶ

ಪಂಜಾಬ್‌ನ 16ನೇಮುಖ್ಯ ಮಂತ್ರಿಯಾಗಿ ಚರಣ್ಜಿತ್ ಸಿಂಗ್ ಚನ್ನಿ ಪ್ರಮಾಣ ವಚನ ಸ್ವೀಕಾರ

ವಿಜಯಪಥ ಸಮಗ್ರ ಸುದ್ದಿ

ಚಂಡೀಗಡ: ಕಾಂಗ್ರೆಸ್ ನಾಯಕ ಚರಣ್‌ಜಿತ್‌ ಸಿಂಗ್ ಚನ್ನಿ ಅವರು ಪಂಜಾಬ್ನ 16ನೇಮುಖ್ಯ ಮಂತ್ರಿಯಾಗಿ ಸೋಮವಾರ ಪ್ರಮಾಣ ವಚನ ಸ್ವೀ ಕರಿಸಿದ್ದಾರೆ.

ಮುಖ್ಯ ಮಂತ್ರಿ ಹುದ್ದೆ ಗೇರಿದ ದಲಿತ ಸಮುದಾಯದ ಮೊದಲ ವ್ಯಕ್ತಿ ಅವರು. ರಾಜ್ಯ ಪಾಲ ಭನ್ವಾರಿಲಾಲ್ ಪುರೋಹಿತ್ ಅವರು ಪ್ರಮಾಣವಚನ ಬೋಧಿಸಿದರು.

ಸುಖ್ಜಿಂದರ್ ಸಿಂಗ್ ರಂಧಾವ ಮತ್ತು ಒ.ಪಿ. ಸೋನಿ ಅವರಿಗೆಹೊಸ ಸರ್ಕಾರದಲ್ಲಿ ಉಪಮುಖ್ಯ ಮಂತ್ರಿ ಹುದ್ದೆ ನೀಡಲಾಗಿದೆ. ಅಮರಿಂದರ್ ಸಿಂಗ್ ನೇತೃತ್ವದ ಈ ಹಿಂದಿನ ಸರ್ಕಾರದಲ್ಲಿ ಈ ಇಬ್ಬರೂ ಸಚಿವರಾಗಿದ್ದರು.

ಕೇಂದ್ರ ದಮೂರು ಕೃಷಿ ಕಾಯ್ದೆ ಗಳನ್ನು ರದ್ದು ಪಡಿಸಬೇಕು ಎಂದು ಚನ್ನಿ ಅವರು ಒತ್ತಾಯಿಸಿದ್ದಾರೆ. ‘ಕರಾಳ’ ಕಾಯ್ದೆಗಳ ವಿರುದ್ಧ ಹೋರಾಡುತ್ತಿರುವ ರೈತರ ಜತೆಗೆ ಕಾಂಗ್ರೆಸ್ ಪಕ್ಷವು ಗಟ್ಟಿಯಾಗಿ ನಿಲ್ಲಲಿದೆ ಎಂದಿದ್ದಾರೆ.

ಸೋಮವಾರ ಬೆಳಿಗ್ಗೆ 11 ಗಂಟೆಗೆ ಪ್ರಮಾಣವಚನ ನಿಗದಿಯಾಗಿತ್ತು . ಆದರೆ, ಸ್ವ ಲ್ಪ ತಡವಾಗಿ ಕಾರ್ಯಕ್ರಮ ನಡೆಯಿತು. ಸೋನಿ ಅವರಿಗೆ ಉಪಮುಖ್ಯ ಮಂತ್ರಿ ಹುದ್ದೆ ನೀಡಿಕೆ ಬಗ್ಗೆ ಸಮಾರಂಭಕ್ಕೆ ಅಲ್ಪ ಮೊದಲು ನಿರ್ಧಾರ ಕೈಗೊಳ್ಳಲಾಯಿತು ಎಂದು ಹೇಳಲಾಗಿದೆ. ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಪಂಜಾಬ್ ಕಾಂಗ್ರೆಸ್ ಘಟಕದ ಅಧ್ಯ ಕ್ಷ ನವಜೋತ್ ಸಿಂಗ್ ಸಿಧು ಅವರು ಸಮಾರಂಭದಲ್ಲಿ ಇದ್ದರು. ಆದರೆ, ಭಿನ್ನ ಮತದ ಕಾರಣಕ್ಕೆ ಮುಖ್ಯ ಮಂತ್ರಿ ಹುದ್ದೆಗೆ ಶನಿವಾರ ರಾಜೀನಾಮೆ ನೀಡಿದ ಅಮರಿಂದರ್ ಅವರು ಗೈರುಹಾಜರಾಗಿದ್ದರು.

ನೀರು, ವಿದ್ಯು ತ್ ಬಿಲ್ ಮನ್ನಾ: ಹೊಸದಾಗಿ ಅಧಿಕಾರ ಸ್ವೀ ಕರಿಸಿದ ಪಂಜಾಬ್ ಸಿಎಂ ಚರಣ್‌ಜಿತ್‌ ಸಿಂಗ್ ಚನ್ನಿ ಸೋಮವಾರ ರೈತರ ನೀರು, ವಿದ್ಯು ತ್ ಶುಲ್ಕ ಮನ್ನಾ ಮಾಡುವುದಾಗಿ ಭರವಸೆ ನೀಡಿದ್ದಾರೆ.

ಮುಖ್ಯ ಮಂತ್ರಿಯಾದ ಬಳಿಕ ತಮ್ಮ ಮೊದಲ ಪತ್ರಿಕಾಗೋಷ್ಠಿ ಯಲ್ಲಿ ಚನ್ನಿ ಸೋಮವಾರ ನಡೆಸಿದರು. ಈ ವೇಳೆ ಅವರು ತಮ್ಮ ನ್ನು ‘ಆಮ್ ಆದ್ಮಿ’ ಎಂದು ಹೇಳಿಕೊಂಡರು.

ಪಾರದರ್ಶಕ ಸರ್ಕಾರವನ್ನು ಖಾತ್ರಿ ಪಡಿಸುವುದಾಗಿ ತಿಳಿಸಿದ ಅವರು, ಮೂರು ಕೃಷಿ ಕಾನೂನುಗಳನ್ನು ರದ್ದು ಗೊಳಿಸುವಂತೆ ಕೇಂದ್ರ ವನ್ನು ಒತ್ತಾಯಿಸಿದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು