NEWSನಮ್ಮಜಿಲ್ಲೆಶಿಕ್ಷಣ-

ಪಿಡಿಒ ಹುದ್ದೆಗೆ ಸಿದ್ದಪಡಿಸಿದ್ದ ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ : ಅಭ್ಯರ್ಥಿಗಳಿಂದ ಪ್ರತಿಭಟನೆ

ವಿಜಯಪಥ ಸಮಗ್ರ ಸುದ್ದಿ

ರಾಯಚೂರು: ಗ್ರಾಮೀಣಾಭಿವೃದ್ಧಿ ಇಲಾಖೆಯಡಿ ಬರುವ ಗ್ರಾಮಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಹುದ್ದೆಗೆ ಕಲ್ಯಾಣ ಕರ್ನಾಟಕ ವೃಂದದ 97 ಪಿಡಿಒ ಹುದ್ದೆಗಳ ನೇಮಕಾತಿಗೆ ಕರ್ನಾಟಕ ಲೋಕಸೇವಾ ಆಯೋಗ (KPSC) ಸಿದ್ದಪಡಿಸಿದ್ದ ಪ್ರಶ್ನೆ ಪತ್ರಿಕೆ ಸೋರಿಕೆ ಆಗಿದೆ ಎಂದು ಆರೋಪಿಸಿ ಅಭ್ಯರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.

ಪಿಡಿಒ ಹುದ್ದೆಗಳ ನೇಮಕಾತಿಗೆ ಕಲ್ಯಾಣ ಕರ್ನಾಟಕ ಭಾಗದ 298 ಪರೀಕ್ಷಾ ಉಪ ಕೇಂದ್ರಗಳಲ್ಲಿ ಇಂದು (ನ.17) ‘ಸ್ಪರ್ಧಾತ್ಮಕ ಪರೀಕ್ಷೆ’ ಆಯೋಜನೆಗೊಂಡಿತ್ತು. ಈ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ ಎಂದು ಆರೋಪಿಸಿ ಅಭ್ಯರ್ಥಿಗಳು ಸಿಂಧನೂರು ಪಟ್ಟಣದ ಸರ್ಕಾರಿ ಪದವಿ ಕಾಲೇಜಿನ ಮುಂದೆ ಪ್ರತಿಭಟಿಸಿದ್ದಾರೆ.

ಅಭ್ಯರ್ಥಿಗಳು ಆರೋಪ ಏನು?: ಒಂದು ಕೋಣೆಯಲ್ಲಿ 24 ಅಭ್ಯರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿತ್ತು. ಆದರೆ ಕೊಠಡಿಗೆ 24 ಪ್ರಶ್ನೆಪತ್ರಿಕೆ ಬದಲು ಕೇವಲ 12 ಪ್ರಶ್ನೆಪ್ರತಿಕೆಯನ್ನು ಕೆಪಿಎಸ್‌ಸಿ ಕಳುಹಿಸಿದೆ. ಈ ಹಿನ್ನೆಲೆ ಪ್ರಶ್ನೆಪತ್ರಿಕೆ ಸೋರಿಕೆಯಾಗಿದ್ದು ಮಾತ್ರವಲ್ಲದೇ ಕೊಠಡಿಗೆ ತರುವಾಗಲೇ ಬಂಡಲ್‌ಗಳು ತೆರೆದಿದ್ದವು. ಅಷ್ಟೇ ಅಲ್ಲದೇ ಪರೀಕ್ಷೆ ನಿಗದಿಯಾದ ಸಮಯಕ್ಕಿಂತಲೂ ತಡವಾಗಿ ಆರಂಭವಾಗಿತ್ತು ಎಂದು ಆರೋಪಿಸಿದ್ದಾರೆ.

ಅಲ್ಲದೆ ಇದರಿಂದ ರೊಚ್ಚಿಗೆದ್ದ ಅಭ್ಯರ್ಥಿಗಳು ಸರ್ಕಾರಿ ಪದವಿ ಕಾಲೇಜಿನ ಎದುರಿನ ಕುಷ್ಟಗಿ – ಸಿಂಧನೂರು ರಸ್ತೆ ಬಂದ್ ಮಾಡಿ ಪ್ರತಿಭಟನೆ ನಡೆಸಿದ್ದಾರೆ. ಬೀದರ್, ಕಲಬುರಗಿ ಹಾಗೂ ಯಾದಗಿರಿಯಿಂದ ಪರೀಕ್ಷೆ ಬರೆಯಲು ಬಂದ ಅಭ್ಯರ್ಥೀಗಳು ಪ್ರತಿಭಟನೆ ನಡೆಸಿದ್ದಾರೆ. ನೂರಾರು ಅಭ್ಯರ್ಥಿಗಳು ಕೆಪಿಎಸ್‌ಸಿ ವಿರುದ್ಧ ಪ್ರತಿಭಟಿಸುತ್ತಿದ್ದು, ಸ್ಥಳಕ್ಕೆ ಸಿಂಧನೂರು ನಗರ ಠಾಣೆ ಪೊಲೀಸರ ಭೇಟಿ ನೀಡಿ, ಪರಿಶೀಲನೆ ನಡೆಸಿದರು.

ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ವಿಜಯನಗರ, ಬಳ್ಳಾರಿ, ಕೊಪ್ಪಳ ಜಿಲ್ಲಾ ಕೇಂದ್ರಗಳು ಹಾಗೂ ಭಾಲ್ಕಿ, ಜೇವರ್ಗಿ, ಶಹಾಪುರ, ಸಿಂಧನೂರು, ಹಗರಿ ಬೊಮ್ಮನಹಳ್ಳಿ, ಕೂಡ್ಲಿಗಿ, ಗಂಗಾವತಿ ಮತ್ತು ಕುಷ್ಟಗಿ ತಾಲೂಕು ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯುತ್ತಿವೆ. ಭಾನುವಾರದ ಪರೀಕ್ಷೆಗೆ 99,107 ಅಭ್ಯರ್ಥಿಗಳು ಹೆಸರು ನೋಂದಾಯಿಸಿಕೊಂಡಿದ್ದಾರೆ ಎಂದು ಕೆಪಿಎಸ್‌ಸಿ ತಿಳಿಸಿದೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಹಿಟ್‌ ಧಾರಾವಾಹಿಗಳ ನಿರ್ದೇಶಕ, ನಿರ್ಮಾಪಕ ರಾಮ್​ಜೀ