NEWSಆರೋಗ್ಯ

ಪಡಿತರ ಕಾರ್ಡುದಾರರಿಗೆ ಅಕ್ಕಿಯ ಜತೆ ತೊಗರಿಬೇಳೆ ವಿತರಣೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಹಾವೇರಿ: ಕೋವಿಡ್-2019ರ ಕೋರೋನಾ ವೈರಸ್ ತಡೆಗಟ್ಟುವ ಹಿನ್ನೆಲೆಯಲ್ಲಿ ಜಿಲ್ಲೆಯು “ಲಾಕ್‍ಡೌನ್” ಇರುವುದರಿಂದ ಜಿಲ್ಲೆಯ ಎಲ್ಲ ಎಎವೈ ಮತ್ತು ಬಿಪಿಎಲ್ ಮತ್ತು ಎಪಿಎಲ್ (Non-Willingness)ಪಡಿತರ ಚೀಟಿದಾರರಿಗೆ ಹಾಗೂ ಬಿಪಿಎಲ್ ಹಾಗೂ ಎಪಿಎಲ್ ಪಡಿತರ ಚೀಟಿ ಕೋರಿ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಿದವರಿಗೆ ಕೇಂದ್ರ ಸರಕಾರದಿಂದ “ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆ”ಯಡಿ ಬಿಡುಗಡೆಯಾದ ಆಹಾರಧಾನ್ಯವನ್ನು “ಮೇ-2020” ನೇ ಮಾಹೆಯಲ್ಲಿ 01 ನೇ ತಾರೀಕಿನಿಂದ ಜಿಲ್ಲೆಯ ಎಲ್ಲ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ಪಡೆಯಲು ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ ತಿಳಿಸಿದ್ದಾರೆ.

ಅಂತ್ಯೋದಯ ಅನ್ನ ಕಾರ್ಡುದಾರರಿಗೆ ಉಚಿತವಾಗಿ ಪ್ರತಿ ಯುನಿಟ್‍ಗೆ 10 ಕೆ.ಜಿ. ಅಕ್ಕಿ ಹಾಗೂ ಪ್ರತಿ ಪಡಿತರ ಚೀಟಿಗೆ  ಒಂದು ಕೆ.ಜಿ. ತೊಗರಿಬೇಳೆ ನೀಡಲಾಗುವುದು.  ಬಿಪಿಎಲ್ ಪಡಿತರ ಪಡಿತರ ಪ್ರತಿ ಯುನಿಟ್‍ಗೆ 10 ಕೆ.ಜಿ. ಅಕ್ಕಿ ಹಾಗೂ ಪ್ರತಿ ಪಡಿತರ ಚೀಟಿಗೆ  ಒಂದು ಕೆ.ಜಿ. ತೊಗರಿಬೇಳೆ ನೀಡಲಾಗುವುದು.

ಎ.ಪಿ.ಎಲ್   (Non-Willingness) ಏಕ ಸದಸ್ಯ ಪ.ಚೀಟಿಗೆ 05 ಕೆಜಿ ಅಕ್ಕಿ  ಮತ್ತು 2 ಮತ್ತು 02ಕ್ಕಿಂತ ಹೆಚ್ಚಿನ ಸದಸ್ಯರ ಪಡಿತರ ಚೀಟಿಗೆ 10 ಅಕ್ಕಿಯನ್ನು ಪ್ರತಿ ಕೆಜಿ.ಗೆ 15 ರೂ.ಗಳಂತೆ ನೀಡಲಾಗುವುದು. ಹೊಸದಾಗಿ ಬಿಪಿಎಲ್  ಕಾರ್ಡಿಗೆ ಅರ್ಜಿ ಸಲ್ಲಿಸಿದ ಫಲಾನುಭವಿಗಳಿಗೆ ಉಚಿತವಾಗಿ ಪ್ರತಿ ಅರ್ಜಿಗೆ 10 ಕೆ.ಜಿ. ಅಕ್ಕಿ, ಹೊಸದಾಗಿ ಎಪಿಎಲ್ ಕಾರ್ಡ್‍ಗೆ ಅರ್ಜಿ ಸಲ್ಲಿಸಿದ ಫಲಾನುಭವಿಗಳಿಗೆ  ಪ್ರತಿ ಅರ್ಜಿಗೆ 10 ಕೆ.ಜಿ. ಅಕ್ಕಿಯನ್ನು ಪ್ರತಿ ಕೆಜಿ.ಗೆ 15 ರೂ.ಗಳಂತೆ ನೀಡಲಾಗುವುದು.

(Portability) ಅಂತರ್‍ರಾಜ್ಯ/ಅಂತರ್‍ಜಿಲ್ಲೆ ಪೋರ್ಟೆಬಿಲಿಟಿ ಜಾರಿಯಲ್ಲಿರುವುದರಿಂದ ಯಾವುದೇ ವರ್ಗದ ಪಡಿತರ ಚೀಟಿಗೆ ಯಾವುದೇ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ  ಪಡೆಯಲು ಅವಕಾಶ ಕಲ್ಪಿಸಲಾಗಿದೆ.

ನ್ಯಾಯಬೆಲೆ ಅಂಗಡಿಯಲ್ಲಿ ಮೇಲ್ಕಾಣಿಸಿದ ವರ್ಗದ ಪಡಿತರ ಚೀಟಿದಾರರಿಗೆ ಆಹಾರಧಾನ್ಯವನ್ನು ಓ.ಟಿ.ಪಿ. ಮುಖಾಂತರವೇ ವಿತರಿಸಲಾಗುತ್ತದೆ ಮತ್ತು ಜಿಲ್ಲೆಯ ಎಲ್ಲ ಪಡಿತರ ಚೀಟಿದಾರರು ಕೋವಿಡ್-2019ರ ನಿಯಮಗಳ ಪ್ರಕಾರ ಮಾಸ್ಕ ಧರಿಸಿ, ಸಾಮಾಜಿಕ ಅಂತರವನ್ನು ಕಾಯ್ದುಕೊಂಡು, ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ಆಹಾರಧಾನ್ಯವನ್ನು ಪಡೆಯಲು ತಿಳಿಸಲಾಗಿದೆ.

Leave a Reply

error: Content is protected !!
LATEST
KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ ದೀಪಾವಳಿ ಹಬ್ಬ ಹಿನ್ನೆಲೆ KKRTC ನೌಕರರಿಗೆ ಅ.29ರಂದೇ ವೇತನ ಕೊಡಲು ಎಂಡಿ ರಾಚಪ್ಪ ನಿರ್ದೇಶನ ನಿರಂತರ ಮಳೆ- BBMP ಎಲ್ಲ ಅಧಿಕಾರಿಗಳು ಸನ್ನದ್ಧರಾಗಿ: ತುಷಾರ್ ಗಿರಿನಾಥ್