NEWSಆರೋಗ್ಯ

ಪಡಿತರ ಕಾರ್ಡುದಾರರಿಗೆ ಅಕ್ಕಿಯ ಜತೆ ತೊಗರಿಬೇಳೆ ವಿತರಣೆ

ವಿಜಯಪಥ ಸಮಗ್ರ ಸುದ್ದಿ

ಹಾವೇರಿ: ಕೋವಿಡ್-2019ರ ಕೋರೋನಾ ವೈರಸ್ ತಡೆಗಟ್ಟುವ ಹಿನ್ನೆಲೆಯಲ್ಲಿ ಜಿಲ್ಲೆಯು “ಲಾಕ್‍ಡೌನ್” ಇರುವುದರಿಂದ ಜಿಲ್ಲೆಯ ಎಲ್ಲ ಎಎವೈ ಮತ್ತು ಬಿಪಿಎಲ್ ಮತ್ತು ಎಪಿಎಲ್ (Non-Willingness)ಪಡಿತರ ಚೀಟಿದಾರರಿಗೆ ಹಾಗೂ ಬಿಪಿಎಲ್ ಹಾಗೂ ಎಪಿಎಲ್ ಪಡಿತರ ಚೀಟಿ ಕೋರಿ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಿದವರಿಗೆ ಕೇಂದ್ರ ಸರಕಾರದಿಂದ “ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆ”ಯಡಿ ಬಿಡುಗಡೆಯಾದ ಆಹಾರಧಾನ್ಯವನ್ನು “ಮೇ-2020” ನೇ ಮಾಹೆಯಲ್ಲಿ 01 ನೇ ತಾರೀಕಿನಿಂದ ಜಿಲ್ಲೆಯ ಎಲ್ಲ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ಪಡೆಯಲು ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ ತಿಳಿಸಿದ್ದಾರೆ.

ಅಂತ್ಯೋದಯ ಅನ್ನ ಕಾರ್ಡುದಾರರಿಗೆ ಉಚಿತವಾಗಿ ಪ್ರತಿ ಯುನಿಟ್‍ಗೆ 10 ಕೆ.ಜಿ. ಅಕ್ಕಿ ಹಾಗೂ ಪ್ರತಿ ಪಡಿತರ ಚೀಟಿಗೆ  ಒಂದು ಕೆ.ಜಿ. ತೊಗರಿಬೇಳೆ ನೀಡಲಾಗುವುದು.  ಬಿಪಿಎಲ್ ಪಡಿತರ ಪಡಿತರ ಪ್ರತಿ ಯುನಿಟ್‍ಗೆ 10 ಕೆ.ಜಿ. ಅಕ್ಕಿ ಹಾಗೂ ಪ್ರತಿ ಪಡಿತರ ಚೀಟಿಗೆ  ಒಂದು ಕೆ.ಜಿ. ತೊಗರಿಬೇಳೆ ನೀಡಲಾಗುವುದು.

ಎ.ಪಿ.ಎಲ್   (Non-Willingness) ಏಕ ಸದಸ್ಯ ಪ.ಚೀಟಿಗೆ 05 ಕೆಜಿ ಅಕ್ಕಿ  ಮತ್ತು 2 ಮತ್ತು 02ಕ್ಕಿಂತ ಹೆಚ್ಚಿನ ಸದಸ್ಯರ ಪಡಿತರ ಚೀಟಿಗೆ 10 ಅಕ್ಕಿಯನ್ನು ಪ್ರತಿ ಕೆಜಿ.ಗೆ 15 ರೂ.ಗಳಂತೆ ನೀಡಲಾಗುವುದು. ಹೊಸದಾಗಿ ಬಿಪಿಎಲ್  ಕಾರ್ಡಿಗೆ ಅರ್ಜಿ ಸಲ್ಲಿಸಿದ ಫಲಾನುಭವಿಗಳಿಗೆ ಉಚಿತವಾಗಿ ಪ್ರತಿ ಅರ್ಜಿಗೆ 10 ಕೆ.ಜಿ. ಅಕ್ಕಿ, ಹೊಸದಾಗಿ ಎಪಿಎಲ್ ಕಾರ್ಡ್‍ಗೆ ಅರ್ಜಿ ಸಲ್ಲಿಸಿದ ಫಲಾನುಭವಿಗಳಿಗೆ  ಪ್ರತಿ ಅರ್ಜಿಗೆ 10 ಕೆ.ಜಿ. ಅಕ್ಕಿಯನ್ನು ಪ್ರತಿ ಕೆಜಿ.ಗೆ 15 ರೂ.ಗಳಂತೆ ನೀಡಲಾಗುವುದು.

(Portability) ಅಂತರ್‍ರಾಜ್ಯ/ಅಂತರ್‍ಜಿಲ್ಲೆ ಪೋರ್ಟೆಬಿಲಿಟಿ ಜಾರಿಯಲ್ಲಿರುವುದರಿಂದ ಯಾವುದೇ ವರ್ಗದ ಪಡಿತರ ಚೀಟಿಗೆ ಯಾವುದೇ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ  ಪಡೆಯಲು ಅವಕಾಶ ಕಲ್ಪಿಸಲಾಗಿದೆ.

ನ್ಯಾಯಬೆಲೆ ಅಂಗಡಿಯಲ್ಲಿ ಮೇಲ್ಕಾಣಿಸಿದ ವರ್ಗದ ಪಡಿತರ ಚೀಟಿದಾರರಿಗೆ ಆಹಾರಧಾನ್ಯವನ್ನು ಓ.ಟಿ.ಪಿ. ಮುಖಾಂತರವೇ ವಿತರಿಸಲಾಗುತ್ತದೆ ಮತ್ತು ಜಿಲ್ಲೆಯ ಎಲ್ಲ ಪಡಿತರ ಚೀಟಿದಾರರು ಕೋವಿಡ್-2019ರ ನಿಯಮಗಳ ಪ್ರಕಾರ ಮಾಸ್ಕ ಧರಿಸಿ, ಸಾಮಾಜಿಕ ಅಂತರವನ್ನು ಕಾಯ್ದುಕೊಂಡು, ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ಆಹಾರಧಾನ್ಯವನ್ನು ಪಡೆಯಲು ತಿಳಿಸಲಾಗಿದೆ.

Leave a Reply

error: Content is protected !!
LATEST
ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ... ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಗೆ ಯತ್ನ: ಕಳ್ಳನ ಹೆಡೆಮುರಿಕಟ್ಟಿದ ಮಹಿಳಾ ಎಸ್‌ಐ ಕೃಷ್ಣರಾಜಪೇಟೆ: ಶ್ರೀ ಚೌಡೇಶ್ವರಿ ಅಮ್ಮನವರ ಕರಗ ಮಹೋತ್ಸವ ಅದ್ದೂರಿ ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಗೆ ಹರಿದು ಬಂತು ಕೋಟಿ ಕೋಟಿ ಹಣ