CrimeNEWSನಮ್ಮಜಿಲ್ಲೆ

ಪಬ್‌ನಲ್ಲಿ ಬೆಂಕಿ ಅವಘಡ: ಭಯಗೊಂಡು 4 ಅಂತಸ್ತಿನ ಕಟ್ಟಡದಿಂದ ಹಾರಿದ ವ್ಯಕ್ತಿ ಸ್ಥಿತಿ ಗಂಭೀರ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕೋರಮಂಗಲದ 4 ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ವ್ಯಕ್ತಿಯೊಬ್ಬ ಜೀವ ಉಳಿಸಿಕೊಳ್ಳಲು ಕಟ್ಟಡದ ಟೆರಿಸ್‌ನಿಂದ ಜಿಗಿದು ಗಂಭೀರವಾಗಿ ಗಾಯಗೊಂಡಿರುವ ಆಘಾತಕಾರಿ ಘಟನೆ ನಡೆದಿದೆ.

ಇತ್ತೀಚೆಗೆ ಆನೇಕಲ್​ ಪಟಾಕಿ ಗೋಡಾನ್​ಗೆ ಬೆಂಕಿ ಬಿದ್ದು 11 ಜನರು ಸಾವನ್ನಪ್ಪಿದ್ದರು. ಆದರೆ ಈ ಘಟನೆ ಮಾಸುವ ಮುನ್ನವೇ ಮತ್ತೊಂದು ಅಗ್ನಿ ಅವಘಡ ಸಂಭವಿಸಿದ್ದು, ಬೆಂಗಳೂರಿಗರಲ್ಲಿ ಆತಂಕ ಹೆಚ್ಚಿಸಿದೆ.

ಕೋರಮಂಗಲದ ವುಡ್​ ಪೈಪ್​​ ಕಟ್ಟಡದಲ್ಲಿರುವ ಪಬ್​ವೊಂದರಲ್ಲಿ ಈ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯ ಕೆನ್ನಾಲಿಗೆಗೆ ಕಟ್ಟಡ ಸಂಪೂರ್ಣ ಭಸ್ಮವಾಗಿದ್ದು, ಅಲ್ಲೇ ಸಿಲುಕಿದ್ದ ವ್ಯಕ್ತಿಒಬ್ಬ ಕಟ್ಟಡದಿಂದ ಜಿಗಿದ ದೃಶ್ಯ ವೈರಲ್​ ಆಗುತ್ತಿದೆ.

ಸಿಲಿಂಡರ್ ಬ್ಲಾಸ್ಟ್ನಿಂದ ಕಟ್ಟಡಕ್ಕೆ ಬೆಂಕಿ ಹೊತ್ತಿಕೊಂಡಿದ್ದು, ಬಿಲ್ಡಿಂಗ್‌ನ ಮೇಲೆ ಇರುವ ಮಳಿಗೆ ಸಂಪೂರ್ಣ ಬೆಂಕಿಗಾಹುತಿಯಾಗಿದೆ. ಅಗ್ನಿ ಅವಘಡವಾದ ಬಳಿಕ 6 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಬಂದಿದ್ದು, ಬೆಂಕಿ ನಿಯಂತ್ರಿಸಲು ಸಿಬ್ಬಂದಿ  ಹರಸಾಹಸ ಪಡುತ್ತಿದ್ದಾರೆ.

ಪಬ್​ನ ಅಡುಗೆ ಕೋಣೆಯಲ್ಲಿ ಗ್ಯಾಸ್​​ ಸ್ಫೋಟಗೊಂಡು ಬೆಂಕಿ ಹಬ್ಬಿದೆ. ಪರಿಣಾಮ ಕಟ್ಟಡಕ್ಕೆ ಸಂಪೂರ್ಣ ಆವರಿಸಿದೆ. ಕಟ್ಟಡದ ಬಳಿ ಕಾರು ಶೋ ರೂಂ ಕೂಡ ಇದ್ದು, ಅಲ್ಲಿದ್ದ ಬಿಳಿಯ ಬಣ್ಣದ ಹೊಸ ಕಾರೊಂದು ಸಂಪೂರ್ಣ ಭಸ್ಮವಾಗಿದೆ.

ಜೀವ ಉಳಿಸಲು ಕಟ್ಟಡದಿಂದ ಜಿಗಿದ: ಬೆಂಕಿಯಿಂದ ರಕ್ಷಿಸಿಕೊಳ್ಳಲು ವ್ಯಕ್ತಿಯೊಬ್ಬ ವುಡ್​ ಪೈಪ್​ ಕಟ್ಟಡದಿಂದ ಜಿಗಿದಿದ್ದಾನೆ. ಈ ವೇಳೆ ಕೆಳಭಾಗದಲ್ಲಿದ್ದ ಮರದ ಮೇಲೆ ಆತ ಬಿದ್ದಿದ್ದು, ಸ್ಥೀತಿ ಗಂಭೀರವಾಗಿದೆ ಎಂದು ಹೇಳಲಾಗುತ್ತಿದೆ. ಸದ್ಯ ಗಾಯಗೊಂಡಿರುವ ವ್ಯಕ್ತಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ಕೊಡಿಸಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ನಿಮ್ಹಾನ್ಸ್‌ಗೆ ರವಾನಿಸಲಾಗಿದೆ.

ಇನ್ನು ವಿಷಯ ತಿಳಿದ ಕೂಡಲೇ ಅಗ್ನಿ ಶಾಮಕ ದಳ ಸ್ಥಳದಲ್ಲಿದ್ದು, ಬೆಂಕಿ ನಂದಿಸುವ ಹರಸಾಹ ಮಾಡುತ್ತಿದ್ದಾರೆ. ಜತೆಗೆ ಹತ್ತಿರದ ಕಟ್ಟಡಕ್ಕೆ ಬೆಂಕಿ ತಗುಲದಂತೆ ಕಾರ್ಯ ನಿರ್ವಹಿಸುತ್ತಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು