NEWSಸಂಸ್ಕೃತಿ

ಪ್ರಗತಿಪರ ಚಿಂತಕ ಮಹೇಂದ್ರ ಕುಮಾರ್‌ ಇನ್ನಿಲ್ಲ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಪ್ರಗತಿಪರ ಚಿಂತಕ-ಭಜರಂಗದಳದ ಮಾಜಿ ರಾಜ್ಯ ಸಂಚಾಲಕ ಮಹೇಂದ್ರ ಕುಮಾರ್‌ (47) ಶನಿವಾರ ಬೆಳಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಶುಕ್ರವಾರ ರಾತ್ರಿ ಅವರಿಗೆ ತೀವ್ರ  ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ಚಿಕಿತ್ಸೆಗಾಗಿ ಎಂ.ಎಸ್‌. ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ  ಮೃತಪಟ್ಟಿದ್ದಾರೆ.

ಬಜರಂಗದಳದ ರಾಜ್ಯ ಸಂಚಾಲಕರಾಗಿದ್ದರು. ಅದರಿಂದ ಹೊರಬಂದ ಬಳಿಕ ಸಾಮಾಜಿಕ, ಜಾಗೃತಿಕ ಚಟುವಟಿಕೆಯಲ್ಲಿ ಸಕ್ರಿಯವಾಗಿದ್ದರು. ಬಿಜೆಪಿ, ಸಂಘ ಪರಿವಾರದ ಸಿದ್ಧಾಂತ ವಿರೋಧಿಸಿ ಸಾಕಷ್ಟು ನಿಷ್ಠುರಗಳನ್ನೂ ಕಟ್ಟಿಕೊಂಡಿದ್ದರು. ಮೂಲತ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದವರಾದ ಮಹೇಂದ್ರ ಕುಮಾರ್ ಬೆಂಗಳೂರಿನಲ್ಲಿ ವಾಸವಾಗಿದ್ದರು.

“ನಮ್ಮ ಧ್ವನಿ” ಎಂಬ ಸಂಘಟನೆ ಸಂಸ್ಥಾಪಕರಾಗಿ,  ನಮ್ಮ ಧ್ವನಿ ಯೂಟ್ಯೂಬ್ ಚಾನೆಲ್ ಮೂಲಕ ವಿವಿಧ ವಿಷಯಗಳ ಬಗ್ಗೆ ಮಾತನಾಡಿ ಜನಪ್ರಿಯರಾಗಿದ್ದರು. ಜನಪರ ಹೋರಾಟಗಾರ, ಶಾಂತಿಪ್ರಿಯ, ಸೌಹಾರ್ದಪರ, ಪ್ರಗತಿಪರ ನಿಲುವುಗಳ ಮಹೇಂದ್ರ  ಅವರ ನಿಧನ ರಾಜ್ಯಕ್ಕೆ ಬಹು ದೊಡ್ಡ ಆಘಾತವಾಗಿದೆ. ಮಹೇಂದ್ರ ಕುಮಾರ್  ಪತ್ನಿ, ಇಬ್ಬರು ಮಕ್ಕಳು ಮತ್ತು ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ.

ಬಿಜೆಪಿಯ ನಿಲುವುಗಳನ್ನು ವಿರೋಧಿಸಿ ಜೆಡಿಎಸ್‌ ಪಕ್ಷ ಸೇರಿದ್ದರು. ಇತ್ತೀಚೆಗೆ ನಡೆದ ಸಿಎಎ, ಎನ್‌ಆರ್‌ಸಿ ವಿರುದ್ಧದ ಹೋರಾಟದಲ್ಲಿ ತೊಡಗಿದ್ದರು. ಅವರ ಅಕಾಲಿಕ ನಿಧನದಿಂದ ರಾಜ್ಯಕ್ಕೆ ತುಂಬಲಾರದ ನೋವನ್ನು ಉಂಟು ಮಾಡಿದೆ ಅವರನ್ನು ಕಳೆದುಕೊಂಡಿರುವ ಅವರ ಕುಟುಂಬಕ್ಕೆ ನೋವು ನೀಗಿಸುವ ಶಕ್ತಿಯನ್ನು ಆ ಭಗವಂತ ನೀಡಲಿ ಎಂದು ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.

 

 

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಹಿಟ್‌ ಧಾರಾವಾಹಿಗಳ ನಿರ್ದೇಶಕ, ನಿರ್ಮಾಪಕ ರಾಮ್​ಜೀ