NEWSಉದ್ಯೋಗನಮ್ಮಜಿಲ್ಲೆ

ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯ ಸೌಲಭ್ಯ ಪಡೆಯಲು ಕುಶಲಕರ್ಮಿಗಳಿಂದ ಅರ್ಜಿ ಆಹ್ವಾನ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು ಗ್ರಾಮಾಂತರ: ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯಡಿ 18 ವೃತ್ತಿಯ ಕುಶಲಕರ್ಮಿಗಳು ಯೋಜನೆಯ ಸೌಲಭ್ಯ ಪಡೆಯ ಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ್ ತಿಳಿಸಿದ್ದಾರೆ.

ವೃತ್ತಿ ಅಭಿವೃದ್ಧಿಗೊಳಿಸಿ ಕೊಳ್ಳುವಿಕೆ, ವೃತ್ತಿ ಉನ್ನತೀಕರಣಗೊಳಿಸಲು ಅಗತ್ಯ ತರಬೇತಿ, ಉಪಕರಣ ಕಿಟ್ ಮತ್ತು ಬಡ್ಡಿ ರಿಯಾಯಿತಿ ದರದಲ್ಲಿ ಆರ್ಥಿಕ ನೆರವು, ಮತ್ತು ಮಾರುಕಟ್ಟೆ ಸೌಲಭ್ಯ ಒದಗಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ. ಈ ನಿಟ್ಟಿನಲ್ಲಿ 18 ವೃತ್ತಿಯ ಕುಶಲಕರ್ಮಿಗಳು ಈ ಯೋಜನೆಯಡಿ ಸೌಲಭ್ಯ ಪಡೆಯಬಹುದಾಗಿದೆ ಎಂದಿದ್ದಾರೆ.

ಬಡಗಿ, ಕಮ್ಮಾರಿಕೆ, ಚಮ್ಮಾರಿಕೆ, ಅಕ್ಕಸಾಲಿಗ, ದೋಬಿ, ಕುಂಬಾರಿಕೆ, ಟೈಲರ್, ಕೌರಿಕ, ಶಿಲ್ಪಿ, ಪೊರಕೆ ತಯಾರಿಕೆ/ ತೆಂಗಿನ ನಾರಿನ ಉತ್ಪನ್ನ ನೇಯ್ಗೆ ಬುಟ್ಟಿ ತಯಾರಿಕೆ, ಗೊಂಬೆ ತಯಾರಿಕೆ, ಮೀನು ಬಲೆ ಮಾಡುವವರು, ಹೂವಿನ ಹಾರ ತಯಾರಿಕೆ, ಬೀಗ ತಯಾರಕರು, ರಕ್ಷಾ ಕವಚ ತಯಾರಕರು, ಹ್ಯಾಮರ್ ಮತ್ತು ಟೂಲ್ ಕಿಟ್ ತಯಾರಿಕೆ, ದೋಣಿ ತಯಾರಿಕೆಯಲ್ಲಿ ತೊಡಗಿರುವ ಕುಶಲಕರ್ಮಿಗಳು ಅರ್ಜಿ ಸಲ್ಲಿಸಬಹುದು.

ನಿಗದಿಪಡಿಸಿದ 18 ವೃತ್ತಿಗಳಲ್ಲಿ ಒಂದು ವೃತ್ತಿಯಲ್ಲಿ ತೊಡಗಿದಂತ ಕಾರ್ಮಿಕರು, 18 ವರ್ಷ ಪೂರೈಸಿರಬೇಕು, ಕಳೆದ 5 ವರ್ಷಗಳಲ್ಲಿ ಈ ವೃತ್ತಿಯಲ್ಲಿ ಸ್ವಯಂ ಉದ್ಯೋಗ ಕೈಗೊಳ್ಳಲು ರಾಜ್ಯ / ಕೇಂದ್ರ ಪುರಸ್ಕೃತ ಯಾವುದೇ ಯೋಜನೆಗಳಲ್ಲಿ ಸಾಲ ಸೌಲಭ್ಯ ಪಡೆದಿರಬಾರದು, ಆದರೆ ಮುದ್ರಾ ಮತ್ತು PM SWANIDI ಯೋಜನೆಗಳ ಫಲಾನುಭವಿಗಳು ಅರ್ಜಿ ಸಲ್ಲಿಸಬಹುದು. ಸರ್ಕಾರಿ ಸೇವೆಯಲ್ಲಿರುವವರು ಮತ್ತು ಅವರ ಕುಟುಂಬದ ಸದಸ್ಯರು ಈ ಯೋಜನೆಯಡಿ ಸೌಲಭ್ಯ ಪಡೆಯಲು ಅರ್ಹವಿರುವುದಿಲ್ಲ.

ಈ ಯೋಜನೆಯಡಿ ಸೌಲಭ್ಯ ಪಡೆಯಲಿಚ್ಛಿಸುವ ಆಸಕ್ತ ಅಭ್ಯರ್ಥಿಗಳು ಹತ್ತಿರದ ಸಾಮಾನ್ಯ ಸೇವಾ ಕೇಂದ್ರ (Common Service Centre) ಗಳಲ್ಲಿ, ಆಧಾರ್ ಕಾರ್ಡ್, ರೇಷನ್ ಕಾರ್ಡ್ ಮತ್ತು ಬ್ಯಾಂಕ್ ಖಾತೆ ಪುಸ್ತಕದೊಂದಿಗೆ, ಖುದ್ದಾಗಿ ಅರ್ಜಿದಾರರೇ ಭೇಟಿ ನೀಡಿ ನೊಂದಾಯಿಸಿಕೊಳ್ಳಲು ಈ ಮೂಲಕ ಕೋರಿದೆ.

ವಿವರಗಳಿಗಾಗಿ ಆಯಾ ತಾಲೂಕಿನ ಕೈಗಾರಿಕಾ ವಿಸ್ತರಣಾಧಿಕಾರಿಗಳನ್ನು ಸಂಪರ್ಕಿಸಿ ಹಾಗೂ ಹೆಚ್ಚಿನ ಮಾಹಿತಿಗಾಗಿ ದೊಡ್ಡಬಳ್ಳಾಪುರ, ದೇವನಹಳ್ಳಿ- 9448844948 ಹೊಸಕೋಟೆ-9743217605 ನೆಲಮಂಗಲ-9902740998 ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು