CrimeNEWSಕೃಷಿ

ಪಿರಿಯಾಪಟ್ಟಣದ ಕಿರಂಗೂರಿನಲ್ಲಿ ಆನೆ ದಾಳಿಗೆ ಜೋಳದ ಬೆಳೆ ನಾಶ

ವಿಜಯಪಥ ಸಮಗ್ರ ಸುದ್ದಿ

ಪಿರಿಯಾಪಟ್ಟಣ : ತಾಲೂಕಿನ ಕಿರಂಗೂರು ಗ್ರಾಮದ ಜಮೀನಿಗೆ ಕಾಡಾನೆಗಳು ಹಿಂಡು ದಾಳಿಮಾಡಿ ಜೋಳದ ಬೆಳೆಯನ್ನು ನಾಶಪಡಿಸಿರುವ ಘಟನೆ ಜರುಗಿದೆ.

ತಾಲೂಕಿನ ಕಿರಂಗೂರು ಗ್ರಾಮದಲ್ಲಿ ಜ.19ರ ತಡರಾತ್ರಿ ನುಗ್ಗಿರುವ ಆನೆಗಳ ಹಿಂಡು ಗ್ರಾಮದ ಜ್ಯೋತಿ ಎಂಬುವವರಿಗೆ ಸೇರಿದ ಸರ್ವೆ ನಂ. 10 ರ ಜಮೀನಿನಲ್ಲಿ ಮತ್ತು ನಟರಾಜು ಎಂಬುವವರಿಗೆ ಸೇರಿದ ಸರ್ವೆ ನಂ.25 ರ ಹೊಲದಲ್ಲಿ ಬೆಳೆದಿದ್ದ ಬೆಳೆಯನ್ನು ನಾಶ ಮಾಡಿವೆ.

ಅನೇಕ ವರ್ಷಗಳಿಂದ ಇರದ ಆನೆದಾಳಿ ಇತ್ತೀಚೆಗೆ ಆನೆ ಕಂದಕಗಳು ಮುಚ್ಚಿಹೋಗಿದ್ದು, ಇವುಗಳನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ರಿಪೇರಿ ಮಾಡಿಸದ ಕಾರಣ ಆನೆಗಳು ನೇರವಾಗಿ ಪ್ರಸ್ತುತ ಜಮೀನುಗಳಿಗೆ ಬರುತ್ತಿದ್ದು ರೈತರಿಗೆ ನಷ್ಟ ಉಂಟುಮಾಡುತ್ತಿವೆ.

ಅಲ್ಲದೆ ರಾತ್ರಿವೇಳೆ ಜಮೀನಿಗೆ ನುಗ್ಗಿ ಓಡಾಡುತ್ತಿರುವುದರಿಂದ ಆನೆ ದಾಳಿಕೆ ಸಿಲುಕಿ ಫಸಲು ಇನ್ನಷ್ಟು ಹಾನಿಯಾಗುತ್ತಿದ್ದು ರೈತರಿಗೆ ತೊಂದರೆ ಉಂಟಾಗಿದೆ ಎಂದು ಗ್ರಾಮಸ್ಥರು ಅಳಲು ತೋಡಿಕೊಂಡಿದ್ದಾರೆ.

ಈ ಬಗ್ಗೆ ಅರಣ್ಯ ಇಲಾಖೆ ಶೀಘ್ರದಲ್ಲಿ ಕ್ರಮವಹಿಸಿ ಹಾನಿಗೊಳಾಗಿರುವ ಬೆಳೆಗೆ ಸೂಕ್ತ ಪರಿಹಾರ ನೀಡಬೇಕು ಎಂದು ರೈತರು ಆಗ್ರಹಿಸಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು