ಪಿರಿಯಾಪಟ್ಟಣ: ತಾಲೂಕಿನ 52 ಕೆರೆಗಳ ಒತ್ತುವರಿ ತೆರವು ಆರಂಭ :ತಾಪಂಇಒ ಕೃಷ್ಣಕುಮಾರ್

ವಿಜಯಪಥ ಸಮಗ್ರ ಸುದ್ದಿ

ಪಿರಿಯಾಪಟ್ಟಣ: ತಾಲೂಕಿನ 34 ಗ್ರಾಮ ಪಂಚಾಯಿತಿ ವ್ಯಾಪ್ತಿಗಳಲ್ಲಿ ಒತ್ತುವರಿಯಾಗಿರುವ ಕೆರೆಗಳನ್ನು ಸರ್ವೆ ನಡೆಸಿ ತೆರವು ಮಾಡಲಾಗುತ್ತಿದೆ ಎಂದು ತಾಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಸಿ.ಆರ್.ಕೃಷ್ಣಕುಮಾರ್ ತಿಳಿಸಿದ್ದಾರೆ.

vijayapatha.in - ವಿಜಯಪಥ.ಇನ್‌ ನಿಮಗೆ ವಿಶ್ವಾಸನೀಯ ಸುದ್ದಿಗಳನ್ನು ಪ್ರಸಾರ ಮಾಡುತ್ತಿದೆ ಎಂದು ಅನಿಸಿದರೆ ನಮಗೆ ಆರ್ಥಕವಾಗಿ ಬಲ ನೀಡಿ. ಇನ್ನಷ್ಟು ಸತ್ಯನಿಷ್ಠ ವರದಿಗಳನ್ನು ಮಾಡುವುದಕ್ಕೆ ಬೆಂಬಲ ನೀಡಿ.   ಕನಿಷ್ಠ 100 ರೂ. ಒಮ್ಮೆಗೆ ಹಾಕಿ. ನಮ್ಮನ್ನು ಪ್ರೋತ್ಸಾಹಿಸಿ. 

ತಾಲೂಕಿನ ಜೋಗನಹಳ್ಳಿ, ಬೆಟ್ಟದಪುರ, ಅನಿವಾಳು, ಹರದೂರು, ಮಾಕೋಡು, ಕೆಲ್ಲೂರು ಬೆಕ್ಯಾ ಗ್ರಾಮಗಳಲ್ಲಿ ಒತ್ತುವರಿ ಕಾರ್ಯಚರಣೆ ನಡೆಸಿ ಜೋಗನಹಳ್ಳಿ ಗ್ರಾಮದಲ್ಲಿ ಮಾತನಾಡಿದರು.

ತಾಲೂಕಿನ ವಿವಿಧ ಗ್ರಾಮಗಳಲ್ಲಿ ಶಾಸಕರು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡುವ ಸಂಧರ್ಭದಲ್ಲಿ ಗ್ರಾಮಸ್ತರು ಕೆರೆಕಟ್ಟೆಗಳ ಒತ್ತುವರಿ  ಹಾಗೂ ಜಮೀನಿಗೆ ತೆರಳುವ ರಸ್ತೆಗಳನ್ನು ಸರಿಪಡಿಸುವಂತೆ ದೂರು ನೀಡುತ್ತಿದ್ದರು.

ಅಲ್ಲದೆ ಕೆಲವು ಪ್ರಭಾವಿಗಳು ಗ್ರಾಮಗಳಲ್ಲಿ ಕರೆಕಟ್ಟೆಗಳ ಮತ್ತು ಸ್ಮಶಾನಗಳು ಒತ್ತುವರಿ ಮಾಡಿಕೊಂಡು ಸಾರ್ವಜಿನಿಕರಿಗೆ ತೊಂದರೆ ನೀಡುತ್ತಿರುವ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ಭೂ ಮಾಪನ ಇಲಾಖೆ, ಕಂದಾಯ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯಿತ್ ರಾಜ್ ಇಲಾಖೆಗಳ ನೇತೃತ್ವದಲ್ಲಿ ಒತ್ತುವರಿ ಆಂದೋಲನ ಹಮ್ಮಿಕೊಂಡು ತಾಲೂಕಿನ ಸುಮಾರು 52 ಕೆರೆಗಳನ್ನು ತೆರವುಗೊಳಿಸಲಾಗುತ್ತಿದೆ ಎಂದರು.

ಈ ಸಂದರ್ಭದಲ್ಲಿ ಭುವನಹಳ್ಳಿ ಗ್ರಾಪಂ ವ್ಯಾಪ್ತಿಗೆ ಬರುವ ಬೆಕ್ಕರೆ ಮತ್ತು ಜೋಗನಹಳ್ಳಿಯಲ್ಲಿ ಸರ್ವೆ ಮಾಡಲಾಯಿತು.

ಭೂಮಾಪನಾಧಿಕಾರಿ ರವೀಂದ್ರ, ಸಹಾಯಕ ಮಹದೇವ್, ಭುವನಹಳ್ಳಿ ಗ್ರಾ.ಪಂ. ಪಿಡಿಒ ಬಸವರಾಜು, ಲೆಕ್ಕ ಸಹಾಯಕ ಶ್ರೀನಿವಾಸ, ಗ್ರಾಮಲೇಕ್ಕಿಗ ವೀಕ್ಷಿತಾ, ಸಹಾಯಕ ಗೋಪಿ, ಗ್ರಾಮಸ್ಥರಾದ ಆರ್.ವೆಂಕಟೇಶ್, ಸೋಮಣ್ಣ ಮಹೇಶ್ ಸೇರಿದಂತೆ ಮತ್ತಿತರರು ಇದ್ದರು.

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು!