NEWSನಮ್ಮಜಿಲ್ಲೆಸಂಸ್ಕೃತಿ

ಪಿರಿಯಾಪಟ್ಟಣ: ಮುಸ್ಲಿಂ ಸಮುದಾಯ ದಿಂದ ಸಂಭ್ರಮದ ರಂಜಾನ್ ಆಚರಣೆ

ವಿಜಯಪಥ ಸಮಗ್ರ ಸುದ್ದಿ

ಪಿರಿಯಾಪಟ್ಟಣ: ಪಟ್ಟಣದ ಜಿನ್ನಾ ತುಲ್ ಪಿರ್ದೋಷ ಮಸೀದಿಯಲ್ಲಿ ರಂಜಾನ್ ಹಬ್ಬದ ಪ್ರಯುಕ್ತ ಮುಸ್ಲಿಮರು ವಿಶೇಷ ಪ್ರಾರ್ಥನೆ ನೆರವೇರಿಸಿದರು.

ಅನೇಕ ವರ್ಷಗಳಿಂದ ನಡೆದುಕೊಂಡು ಬಂದಂತಹ ಸೂಫಿ ಸಂತ ಪದ್ಧತಿಯ ಅಹಲೆಸುನ್ನತ್ ವಲ್ಲ ಪ್ರಕಾರ ಪ್ರಾರ್ಥನೆ ಸಲ್ಲಿಸಲಾಯಿತು. ಹಬ್ಬದಲ್ಲಿ ವೃತಧಾರಿಗಳು ಪ್ರಾರ್ಥನೆಯ ಬಳಿಕ ಪರಸ್ಪರ ಆಲಂಗಿಸಿಕೊಂಡು ಹಬ್ಬದ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು.

ಬುಧವಾರ ಸಂಜೆ ಚಂದ್ರ ದರ್ಶನವಾಗುತ್ತಿದ್ದಂತೆ ಗುರುವಾರ ರಂಜಾನ್‌ ಆಚರಣೆಗಾಗಿ ನಿರ್ಧಾರ ಕೈಗೊಂಡರು. ತಾಲೂಕಿನ ಎಲ್ಲ ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ, ಪರಸ್ಪರ ಶುಭಾಶಯ ವಿನಿಮಯ ನಡೆಯಿತು. ಮಧ್ಯಾಹ್ನ ವಿಶೇಷ ಖಾದ್ಯವಾದ ಸುರಕುರಮಾ ಸವಿದು ಹಬ್ಬ ಆಚರಿಸಿದರು.

ಮೌಲ್ವಿಗಳು ಶಾಂತಿ, ಸಮೃದ್ಧಿ, ಉತ್ತಮ ಮಳೆ ಹಾಗೂ ಬೆಳೆಗಾಗಿ ಬೇಡಿಕೊಂಡರು. ಬಡವರ ಮನೆಗಳಿಗೆ ತೆರಳಿದ ಜನರು ಬಟ್ಟೆ, ಹಣ ನೀಡಿ ಹಬ್ಬದ ಶುಭಾಶಯ ಕೋರಿದರು. ಪ್ರಾರ್ಥನೆ ನಂತರ ನಾನಾ ಧರ್ಮೀಯರಿಗೆ ಶುಭ ಕೋರಿದ ಮುಸ್ಲಿಂ ಸಮುದಾಯದವರು ಅಪ್ಪುಗೆಯ ಮೂಲಕ ಈದ್‌ ಮುಬಾರಕ್‌ ಎಂದರು.

ಮಸೀದಿಯ ಧರ್ಮ ಗುರುಗಳಾದ ಮೌಲಾನ ಲಾಯಿಕ ಅಹಮದ್ ಅವರ ನೇತೃತ್ವದಲ್ಲಿ ವಿಶೇಷ ನಮಾಝ್ ನಿರ್ವಹಿಸಿದ ಬಳಿಕ ಧಾರ್ಮಿಕ ಪ್ರವಚನ ನೀಡಲಾಯಿತು. ಈ ಸಂದರ್ಭದಲ್ಲಿ ಮಸೀದಿ ಅಧ್ಯಕ್ಷರಾದ ಗಫಾರ್ ಅಹಮದ್ ಅವರು ವಿಶೇಷ ನಮಾಝ್ ಬಗ್ಗೆ ಮಾಹಿತಿ ನೀಡಿದರು.

ಪ್ರಾರ್ಥನೆಯಲ್ಲಿ ಮಸೀದಿ ಉಪಾಧ್ಯಕ್ಷ ಸೈಯದ್ ಅನ್ಸಾರ್, ಕಾರ್ಯದರ್ಶಿ ಮಹಮ್ಮದ್ ಅತಮಲ, ಮುಖಂಡರಾದ ನೌಪಿವುಲ್ಲಾ, ನೌಷಾದ್, ಮಹಮದ್ ರಜಾಕ್, ಜಾವೀದ್ ಖಾನ್, ಗೌಸ್ ಬೈ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು